Dry Grapes Benefits: ಒಣದ್ರಾಕ್ಷಿ ತಿನ್ನುವುದರಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳು ಎಷ್ಟು ಗೊತ್ತಾ?

ಬೇಸಿಗೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಈ ಪರಿಸ್ಥಿತಿಯಲ್ಲಿ ಉತ್ತಮ ಆರೋಗ್ಯಕ್ಕಾಗಿ ಒಣದ್ರಾಕ್ಷಿ

Last Updated : Apr 18, 2021, 02:16 PM IST
  • ಬೇಸಿಗೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಈ ಪರಿಸ್ಥಿತಿಯಲ್ಲಿ ಉತ್ತಮ ಆರೋಗ್ಯಕ್ಕಾಗಿ ಒಣದ್ರಾಕ್ಷಿ
  • ಒಣದ್ರಾಕ್ಷಿಗಳಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಸಾಕಷ್ಟು ಕಂಡುಬರುತ್ತವೆ.
  • ರೋಗಗಳ ವಿರುದ್ಧ ಹೋರಾಡಲು ದೇಹದ ಸಾಮರ್ಥ್ಯ ಹೆಚ್ಚಾಗುತ್ತದೆ
Dry Grapes Benefits: ಒಣದ್ರಾಕ್ಷಿ ತಿನ್ನುವುದರಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳು ಎಷ್ಟು ಗೊತ್ತಾ? title=

ಬೇಸಿಗೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಈ ಪರಿಸ್ಥಿತಿಯಲ್ಲಿ ಉತ್ತಮ ಆರೋಗ್ಯಕ್ಕಾಗಿ ಒಣದ್ರಾಕ್ಷಿ ಸೇವಿಸುವುದು ಬಹಳ ಉತ್ತಮ. ಒಣದ್ರಾಕ್ಷಿಗಳಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಸಾಕಷ್ಟು ಕಂಡುಬರುತ್ತವೆ. ಇವುಗಳನ್ನ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಆದರೆ ನೀವು ರಾತ್ರಿ ಒಣದ್ರಾಕ್ಷಿಗಳನ್ನು ನೀರಿನಲ್ಲಿ ನೆನೆಸಿ ಬೆಳಿಗ್ಗೆ ಸೇವಿಸಿದರೆ ಅದರಿಂದ ಅನೇಕ ಅರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ನೆನೆಸಿದ ಒಣದ್ರಾಕ್ಷಿ ತಿನ್ನುವುದರಿಂದ ಅಂತಹ ಕೆಲವು ಪ್ರಯೋಜನಗಳನ್ನು ನಾವು ನಿಮಗೆ ಹೇಳಲಿದ್ದೇವೆ.

ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚಾಗುತ್ತದೆ: 
ರಾತ್ರಿ ನೆನೆಸಿದ ಒಣದ್ರಾಕ್ಷಿಯನ್ನ ಬೆಳಗ್ಗೆ ತಿನ್ನುವುದರಿಂದ ದೇಹದಲ್ಲಿನ ರಕ್ತದ ಪ್ರಮಾಣ ಹೆಚ್ಚಾಗುತ್ತದೆ. ಏಕೆಂದರೆ ಒಣದ್ರಾಕ್ಷಿ(Dry Grapes)ಯಲ್ಲಿ ಕಬ್ಬಿಣ ಅಂಶವು ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತದೆ. ಇದಲ್ಲದೆ, ವಿಟಮಿನ್ ಬಿ ಕಾಂಪ್ಲೆಕ್ಸ್ ಸಹ ಅದರಲ್ಲಿ ಸಾಕಷ್ಟು ಕಂಡುಬರುತ್ತದೆ. ನೆನೆಸಿದ ಒಣದ್ರಾಕ್ಷಿ ಸೇವಿಸುವುದರಿಂದ ರಕ್ತ ಪರಿಚಲನೆ ಕೂಡ ಒಳ್ಳೆಯದು. ನೀವು ಒಣದ್ರಾಕ್ಷಿಗಳನ್ನು ತಿನ್ನುವ ಮೂಲಕ ರಕ್ತಹೀನತೆಯನ್ನು ತಪ್ಪಿಸಬಹುದು ಮತ್ತು ನಿಮ್ಮ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ.

ಇದನ್ನೂ ಓದಿ: ಕರೋನಾ ಕಾಲದಲ್ಲಿ ಕಿಚನ್ ಕ್ಲೀನ್ ಮಾಡಲು 9 ಸೂತ್ರ ?ತಪ್ಪದೇ ಓದಿ.!

ರೋಗನಿರೋಧಕ ಶಕ್ತಿ: 
ಬೆಳಿಗ್ಗೆ ಒಣದ್ರಾಕ್ಷಿ ತಿನ್ನುವ ಮೂಲಕ ರೋಗನಿರೋಧಕ ಶಕ್ತಿ ಕೂಡ ಹೆಚ್ಚಿಸಿಕೊಳ್ಳಬಹುದು. ಹೇಗೆಂದರೆ  ರೋಗನಿರೋಧಕ ಶಕ್ತಿ(Humanity) ಕಡಿಮೆಯಿಂದಾಗಿ ಜನರು ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಈ ಸಂದರ್ಭದಲ್ಲಿ, ಒಣದ್ರಾಕ್ಷಿ ಸೇವಿಸಬಹುದು. ವಿಟಮಿನ್ ಬಿ ಮತ್ತು ಸಿ ಜೊತೆಗೆ, ಉತ್ಕರ್ಷಣ ನಿರೋಧಕಗಳು ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತವೆ. ಇದರಿಂದಾಗಿ ದೇಹದ ರೋಗನಿರೋಧಕ ಶಕ್ತಿ ಬಲವಾಗಿರುತ್ತದೆ.

ಇದನ್ನೂ ಓದಿ: ಒಣಕೆಮ್ಮು ಟೆನ್ಶನ್ ಬಿಡಿ. ಟ್ರೈ ಮಾಡಿ ನೋಡಿ ಈ ಐದು ಮನೆಮದ್ದು.

ರಕ್ತದೊತ್ತಡದ ಸಮಸ್ಯೆ:
ನೆನೆಸಿದ ಒಣದ್ರಾಕ್ಷಿ ತಿನ್ನುವುದರಿಂದ ರಕ್ತದೊತ್ತಡದ ಸಮಸ್ಯೆಯೂ ನಿವಾರಣೆಯಾಗುತ್ತದೆ. ಏಕೆಂದರೆ ಒಣದ್ರಾಕ್ಷಿಗಳಲ್ಲಿ ಸಾಕಷ್ಟು ಪ್ರಮಾಣದ ಸೋಡಿಯಂ ಕಂಡುಬರುತ್ತದೆ. ಸೋಡಿಯಂ ಭರಿತ ಆಹಾರವನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತ(Blood Pressure)ಡದ ಸಮಸ್ಯೆಯನ್ನು ತಪ್ಪಿಸಲು ಸಹಾಯ ಮಾಡುತ್ತದೆ ಮತ್ತು ಇದರಿಂದಾಗಿ ಉಂಟಾಗುವ ಅಪಾಯವನ್ನು ಸಹ ಬಹಳ ಮಟ್ಟಿಗೆ ಕಡಿಮೆ ಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ರಕ್ತದೊತ್ತಡದ ಸಮಸ್ಯೆಯನ್ನು ಹೊಂದಿರುವ ಜನರು ನೆನೆಸಿದ ಒಣದ್ರಾಕ್ಷಿಗಳನ್ನು ತಿನ್ನಲು ಸೂಚಿಸಲಾಗುತ್ತದೆ.

ಇದನ್ನೂ ಓದಿ: Medicine for Corona Virus Patients - ಕೊರೊನಾ ಲಕ್ಷಣಗಳಿವೆಯೇ, ಈ 7 ಔಷಧಿಗಳಿಂದ ಉಪಚಾರ ಆರಂಭಿಸಿ ಎಂದ ಸರ್ಕಾರ

ಜೀರ್ಣಕ್ರಿಯೆ ಸಮಸ್ಯೆ: 
ಬೆಳಿಗ್ಗೆ ಎದ್ದ ನಂತರ ನೆನಸಿದ ಒಣದ್ರಾಕ್ಷಿ ತಿನ್ನುವುದು ಹೊಟ್ಟೆಯ ಜೀರ್ಣಕ್ರಿಯೆಯ ವ್ಯವಸ್ಥೆಯನ್ನು ಸಹ ಉತ್ತಮವಾಗಿರಿಸುತ್ತದೆ. ಇದಲ್ಲದೆ, ನೀವು ನಿಯಮಿತವಾಗಿ ಒಣದ್ರಾಕ್ಷಿ ತಿನ್ನುತ್ತಿದ್ದರೆ, ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಎಲ್ಲಾ ತೊಂದರೆಗಳಿಂದ ನಿಮಗೆ ಪರಿಹಾರ ಸಿಗುತ್ತದೆ. ಆದ್ದರಿಂದ ರಾತ್ರಿಯಲ್ಲಿ ನೆನೆಸಿದ ಒಣದ್ರಾಕ್ಷಿಗಳನ್ನು ಬೆಳಿಗ್ಗೆ ತಿನ್ನಬೇಕು.

ಇದನ್ನೂ ಓದಿ: Benefits of Radish: ಮೂಲಂಗಿ ಮತ್ತು ಅದರ ಎಲೆಗಳಲ್ಲಿದೆ ನಿಮ್ಮ ಕುಟುಂಬದವರ ಆರೋಗ್ಯ!

ರೋಗಗಳ ವಿರುದ್ಧ ಹೋರಾಡಲು ದೇಹದ ಸಾಮರ್ಥ್ಯ ಹೆಚ್ಚಾಗುತ್ತದೆ: 
ರಾತ್ರಿ ನೆನೆಸಿದ ಒಣದ್ರಾಕ್ಷಿ ತಿನ್ನುವುದು ಮತ್ತು ಅದರ ನೀರನ್ನು ಕುಡಿಯುವುದರಿಂದ ನಿಮ್ಮ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅದರಲ್ಲಿರುವ ಉತ್ಕರ್ಷಣ ನಿರೋಧಕಗಳ ಕಾರಣದಿಂದಾಗಿ, ರೋಗ ನಿರೋಧಕ ಶಕ್ತಿ ಉತ್ತಮವಾಗಿದೆ, ಇದರಿಂದಾಗಿ ನಮ್ಮ ದೇಹವು ಬಾಹ್ಯ ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಸಾಧ್ಯವಾಗುತ್ತದೆ ಮತ್ತು ಈ ಬ್ಯಾಕ್ಟೀರಿಯಾಗಳು ದೇಹವನ್ನು ಪ್ರವೇಶಿಸಲು ಸಾಧ್ಯವಾಗುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News