Health Tips: ದೇಹದಲ್ಲಿನ ರಕ್ತದ ಕೊರತೆ ನೀಗಿಸಲು ಇಲ್ಲಿದೆ ಸೂಪರ್ ಫುಡ್

Health Care Tips: ರಕ್ತಹೀನತೆಯಿಂದ ಬಳಲುತ್ತಿರುವವರು ಇನ್ನು ಮುಂದೆ ದುಬಾರಿ ಔಷಧಗಳನ್ನು ಅವಲಂಬಿಸಬೇಕಾಗಿಲ್ಲ ಏಕೆಂದರೆ ಮನೆಯ ಅಡುಗೆಮನೆಯಲ್ಲಿ ಇಡಲಾದ ಈ ಎರಡು ವಸ್ತುಗಳು ರಕ್ತಹೀನತೆಯನ್ನು ಗುಣಪಡಿಸುತ್ತವೆ.  

Written by - Nitin Tabib | Last Updated : Nov 25, 2022, 09:37 PM IST
  • ಸಾಕಷ್ಟು ಓಡಾಟದಿಂದ ಕೂಡಿದ ಇಂದಿನ ಜೀವನಶೈಲಿಯಲ್ಲಿ,
  • ಜನರು ತಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸುವುದನ್ನು ಮರೆತುಬಿಟ್ಟಿದ್ದಾರೆ.
  • ಇದರಿಂದಾಗಿ ಅವರು ಅನೇಕ ರೋಗಗಳ ಹಿಡಿತದಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ.
Health Tips: ದೇಹದಲ್ಲಿನ ರಕ್ತದ ಕೊರತೆ ನೀಗಿಸಲು ಇಲ್ಲಿದೆ ಸೂಪರ್ ಫುಡ್ title=
Health Care Tips

Benefits of eating Roasted Chana with jaggery: ಬದಲಾದ ಜೀವನಶೈಲಿಯ ಮತ್ತು ಕೆಟ್ಟ ಆಹಾರ ಪದ್ಧತಿಯಿಂದಾಗಿ ಬಹುತೇಕ ರೋಗಗಳು ನಮ್ಮನ್ನು ಆವರಿಸಿಕೊಳ್ಳುತ್ತಿವೆ. ಇಂದಿನ ಹಾಳಾದ ಜೀವನಶೈಲಿಯು ಆ ರೋಗಗಳನ್ನು ಹೆಚ್ಚಿಸುವ ಕೆಲಸ ಮಾಡುತ್ತದೆ. ಹೀಗಿರುವಾಗ ನಿಮ್ಮನ್ನು ನೀವು ಫಿಟ್ ಆಗಿಟ್ಟುಕೊಳ್ಳಲು ಬಯಸುತ್ತಿದ್ದರೆ, ನಿಮ್ಮ ಆಹಾರ ಮತ್ತು ಜೀವನಶೈಲಿಯು ಅತ್ಯುತ್ತಮವಾಗಿರಬೇಕು ಎಂಬುದನ್ನು ನೀವು ನೆನಪಿನಲ್ಲಿಟ್ಟುಕೊಲ್ಲಬೇಕು. ಪಾಶ್ಚಿಮಾತ್ಯ ಆಹಾರಗಳಿಂದಾಗಿ, ಪೋಷಕಾಂಶಗಳ ಕೊರತೆಯಿಂದಾಗಿ ಜನರು ವಿವಿಧ ರೋಗಗಳಿಗೆ ಗುರಿಯಾಗುತ್ತಿದ್ದಾರೆ. ಅನೇಕ ಜನರಲ್ಲಿ ರಕ್ತಹೀನತೆಯ ಸಮಸ್ಯೆ ಎದುರಾಗುತ್ತದೆ. ಹೀಗಿರುವಾಗ ಜನರು ವಿವಿಧ ರೀತಿಯ ದುಬಾರಿ ಔಷಧಿಗಳನ್ನು ಸೇವಿಸುತ್ತಿದ್ದಾರೆ, ಆದರೆ ನಿಮ್ಮ ಮನೆಯ ಅಡುಗೆಮನೆಯಲ್ಲಿ ಸಿಗುವ ಎರಡು ಪದಾರ್ಥಗಳನ್ನು ಬಳಸಿ ನೀವೂ ಕೂಡ ಈ ರಕ್ತ ಹೀನತೆಯ ಸಮಸ್ಯೆಯನ್ನು ನಿವಾರಿಸಬಹುದು. 

ಬೆಲ್ಲ ಮತ್ತು ಕಾಬೂಲಿ ಕಡಲೆ ರಕ್ತದ ಕೊರತೆಯನ್ನು ನಿವಾರಿಸುತ್ತವೆ
ಸಾಕಷ್ಟು ಓಡಾಟದಿಂದ ಕೂಡಿದ ಇಂದಿನ ಜೀವನಶೈಲಿಯಲ್ಲಿ, ಜನರು ತಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸುವುದನ್ನು ಮರೆತುಬಿಟ್ಟಿದ್ದಾರೆ. ಇದರಿಂದಾಗಿ ಅವರು ಅನೇಕ ರೋಗಗಳ ಹಿಡಿತದಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ರಕ್ತದ ಕೊರತೆಯು ಒಂದು ಸಾಮಾನ್ಯ ಸಂಗತಿಯಾಗಿದೆ, ನೀವು ಸಹ ಇಂತಹ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಹುರಿದ ಕಡಲೆ ಮತ್ತು ಬೆಲ್ಲವು ರಕ್ತವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಬೆಲ್ಲದಲ್ಲಿ ಕಬ್ಬಿಣವು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ, ಇದು ರಕ್ತಹೀನತೆಯ ವಿರುದ್ಧ ಪರಿಣಾಮವನ್ನು ಮನೆಮದ್ದಾಗಿದೆ. ಕಾಳುಗಳೊಂದಿಗೆ ಇದನ್ನು ತಿನ್ನುವುದರಿಂದ ಕಬ್ಬಿಣ ಮತ್ತು ಪ್ರೊಟೀನ್ ಎರಡರ ಕೊರತೆ ನೀಗುತ್ತದೆ.

ಇದನ್ನೂ ಓದಿ-Health Tips: ಸದಾ ಯಂಗ್ ಹಾಗೂ ಹೆಲ್ದಿಯಾಗಿರಲು ಯಾವ ವಯಸ್ಸಿಯಲ್ಲಿ ಏನು ಸೇವನೆ ಮಾಡಬೇಕು?

ಈ ಕಾಯಿಲೆಗಳನ್ನು ಕೂಡ ನಿವಾರಿಸುತ್ತವೆ
ವಯಸ್ಸಾದಂತೆ, ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಉಂಟಾಗುತ್ತದೆ, ಇದರಿಂದಾಗಿ ಮೂಳೆಗಳು ದುರ್ಬಲಗೊಳ್ಳುತ್ತವೆ. ಬೆಲ್ಲ ಮತ್ತು ಕಾಬೂಲಿ ಕಡಲೆಯನ್ನು ಆಹಾರದಲ್ಲಿ ಶಾಮೀಳುಗೊಲಿಸಿದರೆ ಕ್ಯಾಲ್ಸಿಯಂ ಕೊರತೆ ನೀಗುತ್ತದೆ ಮತ್ತು ಮೂಳೆಗಳು ಬಲಗೊಳ್ಳುತ್ತವೆ. ಪೊಟ್ಯಾಸಿಯಮ್ ಸಹ ಇದರಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತದೆ, ಇದು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ನೀವು ಪ್ರತಿದಿನ ಮಲಬದ್ಧತೆಯ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಇದರಲ್ಲಿರುವ ಫೈಬರ್ ನಿಮ್ಮ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ-ರಕ್ತದ ಸಕ್ಕರೆ ನಿಯಂತ್ರಿಸಲು ಸಹಾಯ ಮಾಡುತ್ತದೆ ಅಡುಗೆ ಮನೆಯ ಈ ಮಸಾಲೆಗಳು

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿ ಕರಿಸುವುದಿಲ್ಲ)

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News