Barley Benefits: ಪ್ರತಿದಿನ ಬಾರ್ಲಿ ನೀರು ಕುಡಿದರೆ ಏನಾಗುತ್ತೆ? ಸಿಗುವ ಆರೋಗ್ಯ ಪ್ರಯೋಜನಗಳೇನು?

Barley Water Health Benefits: ಮನೆಮದ್ದುಗಳಲ್ಲಿ ಒಂದು ಬಾರ್ಲಿ ನೀರು. ಮಧುಮೇಹವನ್ನು ನಿಯಂತ್ರಿಸಲು ಬಾರ್ಲಿ ನೀರು ತುಂಬಾ ಸಹಾಯಕವಾಗಿದೆ. ಮಧುಮೇಹ ರೋಗಿಗಳಿಗೆ ಬಾರ್ಲಿ ನೀರು ಹೇಗೆ ಪ್ರಯೋಜನಕಾರಿ? ಎಂಬುದನ್ನು ತಿಳಿದುಕೊಳ್ಳೋಣ.

Written by - Bhavishya Shetty | Last Updated : Jan 31, 2024, 07:06 PM IST
    • ಮಧುಮೇಹವನ್ನು ನಿಯಂತ್ರಿಸಲು ಬಾರ್ಲಿ ನೀರು ತುಂಬಾ ಸಹಾಯಕ
    • ಬಾರ್ಲಿಯು ಕರಗಬಲ್ಲ ಫೈಬರ್ ಅನ್ನು ಹೊಂದಿರುವ ಧಾನ್ಯವಾಗಿದೆ
    • ಆಹಾರದಲ್ಲಿ ಬಾರ್ಲಿ ನೀರನ್ನು ಸೇರಿಸಿದರೆ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ
Barley Benefits: ಪ್ರತಿದಿನ ಬಾರ್ಲಿ ನೀರು ಕುಡಿದರೆ ಏನಾಗುತ್ತೆ? ಸಿಗುವ ಆರೋಗ್ಯ ಪ್ರಯೋಜನಗಳೇನು? title=
Barley Water

Barley Benefits: ಮಧುಮೇಹ ಜೀವನಶೈಲಿಗೆ ಸಂಬಂಧಿಸಿದ ಸಮಸ್ಯೆಯಾಗಿದ್ದು, ಇದರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆರೋಗ್ಯ ತಜ್ಞರ ಪ್ರಕಾರ, ಇದು ಗುಣಪಡಿಸಲಾಗದ ಕಾಯಿಲೆಯಾಗಿದ್ದು, ನಿಮ್ಮ ಜೀವನಶೈಲಿ ಮತ್ತು ಆಹಾರಕ್ರಮವನ್ನು ಸುಧಾರಿಸುವ ಮೂಲಕ ಮಾತ್ರ ನಿಯಂತ್ರಿಸಬಹುದು. ಆದರೆ, ಮಧುಮೇಹವನ್ನು ನಿಯಂತ್ರಣದಲ್ಲಿಡಲು ಅನೇಕ ಜನರು ಪ್ರತಿದಿನ ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ.

ಮನೆಮದ್ದುಗಳಲ್ಲಿ ಒಂದು ಬಾರ್ಲಿ ನೀರು. ಮಧುಮೇಹವನ್ನು ನಿಯಂತ್ರಿಸಲು ಬಾರ್ಲಿ ನೀರು ತುಂಬಾ ಸಹಾಯಕವಾಗಿದೆ. ಮಧುಮೇಹ ರೋಗಿಗಳಿಗೆ ಬಾರ್ಲಿ ನೀರು ಹೇಗೆ ಪ್ರಯೋಜನಕಾರಿ? ಎಂಬುದನ್ನು ತಿಳಿದುಕೊಳ್ಳೋಣ.

 ಇದನ್ನೂ ಓದಿ: ನಾಳೆಯಿಂದಲೇ ಬೆಳಗುವುದು ಈ ಐದು ರಾಶಿಯವರ ಭಾಗ್ಯ !ಇಟ್ಟ ಹೆಜ್ಜೆಯಲ್ಲಿ ಸೋಲೇ ಇಲ್ಲ ! ಮುಂದಿರುವುದು ಯಶಸ್ಸಿನ ಹಾದಿ

ಬಾರ್ಲಿಯು ಕರಗಬಲ್ಲ ಫೈಬರ್ ಅನ್ನು ಹೊಂದಿರುವ ಧಾನ್ಯವಾಗಿದೆ. ಇದರ ಸೇವನೆಯು ನಿಮ್ಮ ದೇಹದಲ್ಲಿ ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ. ಇದು ದೇಹದಲ್ಲಿ ಅಧಿಕ ರಕ್ತದೊತ್ತಡವನ್ನು ನಿಧಾನಗೊಳಿಸಲು ಸಹಾಯ ಮಾಡುತ್ತದೆ.

ಮಧುಮೇಹ ರೋಗಿಗಳಾಗಿದ್ದರೆ ಪ್ರತಿದಿನ ಬಾರ್ಲಿ ನೀರನ್ನು ಸೇವಿಸುವುದು ನಿಮಗೆ ತುಂಬಾ ಪ್ರಯೋಜನಕಾರಿ. ಬಾರ್ಲಿಯು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಬಾರ್ಲಿಯು ಉತ್ತಮ ಪ್ರಮಾಣದ ಫೈಬರ್‌’ನಿಂದ ಸಮೃದ್ಧವಾಗಿದೆ, ಇದು ನಿಮ್ಮ ಹೊಟ್ಟೆಯನ್ನು ದೀರ್ಘಕಾಲದವರೆಗೆ ತುಂಬಿರುವಂತೆ ಮಾಡುತ್ತದೆ. ಈ ಮೂಲಕ ನಿಮ್ಮ ತೂಕವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.

ಬಾರ್ಲಿಯಲ್ಲಿರುವ ಕರಗುವ ನಾರಿನ ಕಾರಣ, ಇದು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ.

ಆಹಾರದಲ್ಲಿ ಬಾರ್ಲಿ ನೀರನ್ನು ಸೇರಿಸಿದರೆ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದರಿಂದ ನೀವು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗಿಲ್ಲ, ಇದು ಮಧುಮೇಹ ರೋಗಿಗಳಿಗೆ ರಾಮಬಾಣವಾಗಿದೆ.

 ಇದನ್ನೂ ಓದಿ: ನೀರುಳ್ಳಿ ಅಲ್ಲ ಬೆಳ್ಳುಳ್ಳಿ ಎಲೆಯಲ್ಲಿ ಅಡಗಿದೆ ಈ ರೋಗಗಳನ್ನು ನಿರ್ಮೂಲನೆ ಮಾಡುವ ಶಕ್ತಿ

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News