ಅಧಿಕ ಯೂರಿಕ್ ಆಮ್ಲದಿಂದ ಬಳಲುತ್ತಿದ್ರೆ ಖಾಲಿ ಹೊಟ್ಟೆಯಲ್ಲಿ ಈ ಆಹಾರ ಸೇವಿಸಿ; ಕೀಲು ನೋವಿನಿಂದ ಪರಿಹಾರ ಸಿಗುತ್ತೆ!

High Uric Acid: ಹೆಚ್ಚಿನ ಯೂರಿಕ್ ಆಮ್ಲದಿಂದ ಜನರು ಹೆಚ್ಚಾಗಿ ಕೀಲು ನೋವನ್ನು ಅನುಭವಿಸುತ್ತಾರೆ. ಈ ಸಮಸ್ಯೆಯನ್ನು ಹೋಗಲಾಡಿಸಲು ನಿಮಗೆ ಸಹಾಯ ಮಾಡುವ ಕೆಲವು ಆಹಾರಗಳ ಬಗ್ಗೆ ಇಲ್ಲಿದೆ ಉಪಯುಕ್ತ ಮಾಹಿತಿ...

Written by - Puttaraj K Alur | Last Updated : May 12, 2025, 02:24 PM IST
  • ಯೂರಿಕ್ ಆಮ್ಲದ ಸಮಸ್ಯೆಯಿಂದ ಮುಕ್ತಿ ಪಡೆಯಲು ನಿಂಬೆ ನೀರು ಸೇವಿಸಬಹುದು
  • ವಿಟಮಿನ್ ʼಸಿʼ ಭರಿತ ನಿಂಬೆ ನೀರು ಯೂರಿಕ್ ಆಮ್ಲವನ್ನು ತಟಸ್ಥಗೊಳಿಸುವಲ್ಲಿ ಪರಿಣಾಮಕಾರಿ
  • ಅಗಸೆ ಬೀಜಗಳಲ್ಲಿ ಕಂಡುಬರುವ ಅಂಶಗಳು ಯೂರಿಕ್ ಆಮ್ಲದ ಸಮಸ್ಯೆ ನಿವಾರಿಸುತ್ತವೆ
ಅಧಿಕ ಯೂರಿಕ್ ಆಮ್ಲದಿಂದ ಬಳಲುತ್ತಿದ್ರೆ ಖಾಲಿ ಹೊಟ್ಟೆಯಲ್ಲಿ ಈ ಆಹಾರ ಸೇವಿಸಿ; ಕೀಲು ನೋವಿನಿಂದ ಪರಿಹಾರ ಸಿಗುತ್ತೆ!

High Uric Acid Level: ನಿಮ್ಮ ದೇಹದಲ್ಲಿ ಯೂರಿಕ್ ಆಮ್ಲದ ಪ್ರಮಾಣ ಹೆಚ್ಚಾದಾಗ ಕೀಲುಗಳಲ್ಲಿ ಅಸಹನೀಯ ನೋವು ಮತ್ತು ಊತವನ್ನು ಅನುಭವಿಸಬಹುದು. ಯೂರಿಕ್ ಆಮ್ಲವನ್ನು ನಿಯಂತ್ರಿಸಲು ನೀವು ನಿಮ್ಮ ಆಹಾರದ ಬಗ್ಗೆ ವಿಶೇಷ ಗಮನ ಹರಿಸಬೇಕು. ಖಾಲಿ ಹೊಟ್ಟೆಯಲ್ಲಿ ಸರಿಯಾದ ಪ್ರಮಾಣದಲ್ಲಿ ಪೌಷ್ಟಿಕ ಆಹಾರವನ್ನು ಸೇವಿಸಿದರೆ, ಹೆಚ್ಚಿನ ಯೂರಿಕ್ ಆಮ್ಲದ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಆಮ್ಲಾ ಪ್ರಯೋಜನಕಾರಿ

ಅಜ್ಜಿಯರ ಕಾಲದಿಂದಲೂ ಆಮ್ಲಾ ಅನೇಕ ಕಾಯಿಲೆಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಯೂರಿಕ್ ಆಮ್ಲದ ಮಟ್ಟವನ್ನ ನಿಯಂತ್ರಿಸಲು ನಿಮ್ಮ ದೈನಂದಿನ ಆಹಾರ ಯೋಜನೆಯಲ್ಲಿ ಆಮ್ಲಾವನ್ನು ಸೇರಿಸಿಕೊಳ್ಳಬೇಕು. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಆಮ್ಲಾ ತಿನ್ನಿರಿ ಅಥವಾ ಆಮ್ಲಾ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಬೆರೆಸಿ ಸೇವಿಸಿರಿ.

ಇದನ್ನೂ ಓದಿ: ಬೆಳಗ್ಗೆ ಎದ್ದ ತಕ್ಷಣ ಈ 5 ಲಕ್ಷಣ ಕಂಡುಬಂದ್ರೆ ಎಚ್ಚರ! ಇದು ಕಡಿಮೆ ಬಿಪಿಯ ಸಂಕೇತವಾಗಿರಬಹುದು!

ನಿಂಬೆ ನೀರು 

ಆರೋಗ್ಯ ತಜ್ಞರ ಪ್ರಕಾರ, ಹೆಚ್ಚಿನ ಯೂರಿಕ್ ಆಮ್ಲದ ಸಮಸ್ಯೆಯಿಂದ ಮುಕ್ತಿ ಪಡೆಯಲು ನೀವು ನಿಂಬೆ ನೀರನ್ನು ಸಹ ಸೇವಿಸಬಹುದು. ವಿಟಮಿನ್ ʼಸಿʼ ಭರಿತ ನಿಂಬೆ ನೀರು ಯೂರಿಕ್ ಆಮ್ಲವನ್ನು ತಟಸ್ಥಗೊಳಿಸುವಲ್ಲಿ ಪರಿಣಾಮಕಾರಿ. ಬೆಳಗ್ಗೆ ಎದ್ದು ಒಂದು ಲೋಟ ಉಗುರು ಬೆಚ್ಚಗಿನ ನೀರಿನಲ್ಲಿ ಅರ್ಧ ನಿಂಬೆಹಣ್ಣನ್ನು ಹಿಂಡಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ ಮತ್ತು ಸಕಾರಾತ್ಮಕ ಪರಿಣಾಮಗಳನ್ನು ಅನುಭವಿಸಿ. ಬೇಕಾದ್ರೆ ಔಷಧೀಯ ಗುಣಗಳಿಂದ ತುಂಬಿರುವ ಈ ಪಾನೀಯದಲ್ಲಿ ಪೌಷ್ಟಿಕ ಜೇನುತುಪ್ಪವನ್ನು ಸಹ ಬೆರೆಸಿ ಸೇವಿಸಬಹುದು.

ಅಗಸೆ ಬೀಜಗಳು 

ಅಗಸೆ ಬೀಜಗಳಲ್ಲಿ ಕಂಡುಬರುವ ಅಂಶಗಳು ಯೂರಿಕ್ ಆಮ್ಲದ ಸಮಸ್ಯೆಯನ್ನು ನಿವಾರಿಸುವಲ್ಲಿ ಪರಿಣಾಮಕಾರಿ. ಒಂದು ಚಮಚ ಅಗಸೆ ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ, ಮರುದಿನ ಬೆಳಗ್ಗೆ ಅದನ್ನು ನೀರಿನೊಂದಿಗೆ ಸೇವಿಸಿ. ಉತ್ತಮ ಫಲಿತಾಂಶಗಳನ್ನು ಪಡೆಯಲು ಖಾಲಿ ಹೊಟ್ಟೆಯಲ್ಲಿ ಅಗಸೆ ಬೀಜಗಳನ್ನು ಸೇವಿಸಬೇಕು.

ಇದನ್ನೂ ಓದಿ: ಮಜ್ಜಿಗೆಗೆ ಈ ಎಲೆ ಬೆರೆಸಿ ಕುಡಿದರೆ ಯೂರಿಕ್‌ ಆಸಿಡ್‌ ಕರಗಿಹೋಗುವುದು! ಕಿಡ್ನಿಸ್ಟೋನ್‌ಗೂ ಇದೇ ಮದ್ದು..

(ಗಮನಿಸಿ: ಈ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಮನೆಮದ್ದುಗಳನ್ನು ಆಧರಿಸಿರುತ್ತದೆ. ಇಲ್ಲಿನ ಸಲಹೆ ಸೂಚನೆಗಳನ್ನು ಅಳವಡಿಸಿಕೊಳ್ಳವು ಮೊದಲು ನೀವು ಕಡ್ಡಾಯವಾಗಿ ತಜ್ಞರ ಸಲಹೆ ಪಡೆದುಕೊಳ್ಳಬೇಕು. Zee Kannada News ಇದನ್ನು ದೃಢಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

Trending News