Natural remedies for diabetes: ಪ್ರಪಂಚದಾದ್ಯಂತ ಲಕ್ಷಾಂತರ ಜನರು ಜೀವನಶೈಲಿ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಇದರಲ್ಲಿ ಮಧುಮೇಹದ ಅಪಾಯವು ವೇಗವಾಗಿ ಹೆಚ್ಚುತ್ತಿದೆ. ಭಾರತದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ಸಾಕಷ್ಟು ಹೆಚ್ಚಾಗಿದೆ. ಒಮ್ಮೆ ಮಧುಮೇಹ ಬಂದರೆ, ಅದನ್ನು ನಿಯಂತ್ರಿಸುವುದು ತುಂಬಾ ಕಷ್ಟ. ಮಧುಮೇಹದಲ್ಲಿ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಹಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಔಷಧಿಗಳ ಜೊತೆಗೆ ಕೆಲವು ಆಯುರ್ವೇದ ಪರಿಹಾರಗಳು ಸಹ ರಕ್ತದಲ್ಲಿನ ಸಕ್ಕರೆ ಮಟ್ಟವನ್ನ ನಿಯಂತ್ರಿಸಲು ಸಹಾಯ ಮಾಡುತ್ತವೆ.
ಆಯುರ್ವೇದದಲ್ಲಿ ದೇಹದಲ್ಲಿನ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಕೆಲವು ಪರಿಣಾಮಕಾರಿ ಮನೆಮದ್ದುಗಳನ್ನ ಸೂಚಿಸಲಾಗಿದೆ. ಇವುಗಳನ್ನು ಸೇವಿಸುವುದರಿಂದ ಸಕ್ಕರೆ ಕಡಿಮೆಯಾಗುವುದಲ್ಲದೆ, ಬೊಜ್ಜು ಮತ್ತು ಇತರ ಹಲವು ಕಾಯಿಲೆಗಳಿಂದಲೂ ನಿಮಗೆ ಪರಿಹಾರ ದೊರೆಯುತ್ತದೆ. ಮಧುಮೇಹ ನಿಯಂತ್ರಿಸುವ ಮನೆಮದ್ದುಗಳು ಯಾವುವು ಮತ್ತು ಅದನ್ನು ಹೇಗೆ ಕಡಿಮೆ ಮಾಡಬಹುದು ಎಂದು ತಿಳಿಯಿರಿ. ಸಕ್ಕರೆಯನ್ನು ನಿಯಂತ್ರಿಸಲು ಆಯುರ್ವೇದದಲ್ಲಿ ಹಲವು ಪರಿಣಾಮಕಾರಿ ಗಿಡಮೂಲಿಕೆಗಳಿವೆ. ಇದಲ್ಲದೆ ನಿಮ್ಮ ಅಡುಗೆಮನೆಯಲ್ಲಿಯೇ ಅನೇಕ ಮಸಾಲೆಗಳನ್ನ ನೀವು ಟ್ರೈ ಮಾಡಬಹುದು. ಇವುಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ಕಡಿಮೆಯಾಗುತ್ತದೆ.
ಇದನ್ನೂ ಓದಿ: Top 10 Series: ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಟಾಪ್ 10 ಸೂತ್ರಗಳು..!
ಮಧುಮೇಹಕ್ಕೆ ಅದ್ಭುತ ಔಷಧ ಯಾವುದು?
ಮೆಂತ್ಯ: ಆಹಾರದಲ್ಲಿ ಬಳಸುವ ಮೆಂತ್ಯವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಒಳ್ಳೆಯದು ಎಂದು ಪರಿಗಣಿಸಲಾಗುತ್ತದೆ. ಮೆಂತ್ಯವು ಸ್ವಲ್ಪ ಕಹಿ ರುಚಿಯನ್ನು ಹೊಂದಿರುತ್ತದೆ ಆದರೆ ಮೆಂತ್ಯ ಬೀಜಗಳು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು, ಕೀಲು ನೋವನ್ನು ನಿವಾರಿಸಲು, ಬೊಜ್ಜು ಕಡಿಮೆ ಮಾಡಲು ಮತ್ತು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಪರಿಣಾಮಕಾರಿ. ಸಕ್ಕರೆಯನ್ನು ನಿಯಂತ್ರಿಸಲು ಖಾಲಿ ಹೊಟ್ಟೆಯಲ್ಲಿ 1 ಟೀ ಚಮಚ ಮೆಂತ್ಯ ಬೀಜಗಳು ಅಥವಾ ಮೆಂತ್ಯ ಪುಡಿಯನ್ನು ತಿನ್ನಿರಿ. ನೀವು ಮಲಗುವ ಮುನ್ನ ಅದನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ತೆಗೆದುಕೊಳ್ಳಬಹುದು. ನೀವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮೆಂತ್ಯ ನೀರನ್ನು ಸಹ ಕುಡಿಯಬಹುದು. ಇದು ರಕ್ತದಲ್ಲಿನ ಸಕ್ಕರೆಯ ಮೇಲೆ ಪರಿಣಾಮ ಬೀರುತ್ತದೆ.
ದಾಲ್ಚಿನ್ನಿ: ಆಯುರ್ವೇದದಲ್ಲಿ ದಾಲ್ಚಿನ್ನಿಯನ್ನು ಪ್ರಬಲವಾದ ಉತ್ಕರ್ಷಣ ನಿರೋಧಕವೆಂದು ಪರಿಗಣಿಸಲಾಗುತ್ತದೆ. ನೀವು ಖಂಡಿತ ನಿಮ್ಮ ಆಹಾರದಲ್ಲಿ ದಾಲ್ಚಿನ್ನಿ ಸೇವಿಸಬಹುದು. ದಾಲ್ಚಿನ್ನಿ ತಿನ್ನುವುದರಿಂದ ಮಧುಮೇಹ ಕಡಿಮೆಯಾಗುತ್ತದೆ. ಇದು ಇನ್ಸುಲಿನ್ ಪ್ರತಿರೋಧವನ್ನು ಕಡಿಮೆ ಮಾಡುತ್ತದೆ ಮತ್ತು ಕೊಲೆಸ್ಟ್ರಾಲ್ ಅನ್ನು ಸಹ ಕಡಿಮೆ ಮಾಡುತ್ತದೆ. ಬೊಜ್ಜು ಕಡಿಮೆ ಮಾಡುವಲ್ಲಿ ದಾಲ್ಚಿನ್ನಿ ಕೂಡ ಪರಿಣಾಮಕಾರಿಯಾಗಿದೆ. 1 ಚಮಚ ದಾಲ್ಚಿನ್ನಿಯನ್ನು ಅರ್ಧ ಚಮಚ ಮೆಂತ್ಯ ಪುಡಿ ಮತ್ತು ಅರಿಶಿನದೊಂದಿಗೆ ಬೆರೆಸಿ ಖಾಲಿ ಹೊಟ್ಟೆಯಲ್ಲಿ ತಿನ್ನಿರಿ. ಇವುಗಳನ್ನ ಸೇರಿಸಿ ನೀವು ಅದನ್ನು ಚಹಾ ತಯಾರಿಸಿ ಕುಡಿಯಬಹುದು. ಚಹಾಕ್ಕೆ ಒಂದು ತುಂಡು ದಾಲ್ಚಿನ್ನಿ ಸೇರಿಸಿಯೂ ಕುಡಿಯಬಹುದು.
ಇದನ್ನೂ ಓದಿ: ರಾತ್ರಿ ಹೊತ್ತು ಊಟದಲ್ಲಿ ಈ ತರಕಾರಿ ತಿಂದರೆ ಸಾಕು.. ಬೆಳಗಾಗುವಷ್ಟರಲ್ಲೇ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ ಬ್ಲಡ್ ಶುಗರ್ !
ಕರಿಮೆಣಸು: ಮಧುಮೇಹ ರೋಗಿಗಳು ಕರಿಮೆಣಸನ್ನು ಸಹ ಸೇವಿಸಬೇಕು. ಕರಿಮೆಣಸು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಲು ಸಹಾಯವಾಗುತ್ತದೆ. ಕರಿಮೆಣಸಿನಲ್ಲಿ ಪೈಪರಿನ್ ಎಂಬ ಅಂಶವಿದ್ದು, ಇದು ಸಕ್ಕರೆಯನ್ನು ಕಡಿಮೆ ಮಾಡುತ್ತದೆ. 1 ಟೀ ಚಮಚ ಕರಿಮೆಣಸಿನಲ್ಲಿ ಸ್ವಲ್ಪ ಅರಿಶಿನ ಬೆರೆಸಿ ನೀರಿನೊಂದಿಗೆ ಸೇವಿಸಿ. ರಾತ್ರಿ ಮಲಗುವ ಮುನ್ನ ಕರಿಮೆಣಸನ್ನು ಸೇವಿಸುವುದು ಉತ್ತಮ.
(ಗಮನಿಸಿ: ಈ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಮನೆಮದ್ದುಗಳನ್ನು ಆಧರಿಸಿರುತ್ತದೆ. ಇಲ್ಲಿನ ಸಲಹೆ ಸೂಚನೆಗಳನ್ನು ಅಳವಡಿಸಿಕೊಳ್ಳವು ಮೊದಲು ನೀವು ಕಡ್ಡಾಯವಾಗಿ ತಜ್ಞರ ಸಲಹೆ ಪಡೆದುಕೊಳ್ಳಬೇಕು. Zee Kannada News ಇದನ್ನು ದೃಢಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.