ಮಧುಮೇಹದ ಜೊತೆಗೆ ಈ ಐದು ಕಾಯಿಲೆಗಳನ್ನು ಶಾಶ್ವತವಾಗಿ ದೂರ ಮಾಡುತ್ತದೆ ಬಾಳೆಕಾಯಿ !

Benefits of Raw Banana:ಬಾಳೆಕಾಯಿ ಸೇವಿಸುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು.  ನಿತ್ಯವೂ ಹಸಿ ಬಾಳೆಹಣ್ಣನ್ನು ಸೇವಿಸುವುದರಿಂದ ಹಲವು ರೋಗಗಳಿಂದ ಮುಕ್ತಿ ಸಿಗುತ್ತದೆ.  

Written by - Ranjitha R K | Last Updated : Dec 21, 2023, 04:18 PM IST
  • ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ
  • ರಕ್ತದೊತ್ತಡ ನಿಯಂತ್ರಿಸಲು ಸಹಕಾರಿ
  • ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ
ಮಧುಮೇಹದ ಜೊತೆಗೆ ಈ ಐದು ಕಾಯಿಲೆಗಳನ್ನು ಶಾಶ್ವತವಾಗಿ ದೂರ ಮಾಡುತ್ತದೆ ಬಾಳೆಕಾಯಿ  ! title=

Benefits of Raw Banana : ಬಾಳೆಹಣ್ಣು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ದೇಹ ತೂಕವನ್ನು ಹೆಚ್ಚಿಸಬೇಕಾದರೆ ಬಾಳೆಹಣ್ಣು ತಿನ್ನುವಂತೆ ಸಲಹೆ ನೀಡಲಾಗುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಅನೇಕ ರೀತಿಯ ಪ್ರಯೋಜನಗಳಿವೆ. ಅದೇ ರೀತಿ ಬಾಳೆಕಾಯಿ ಕೂಡಾ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ವಿವಿಧ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಬಾಳೆಕಾಯಿ ಸೇವಿಸುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು. ನಿತ್ಯವೂ ಹಸಿ ಬಾಳೆಹಣ್ಣನ್ನು ಸೇವಿಸುವುದರಿಂದ ಹಲವು ರೋಗಗಳಿಂದ ಮುಕ್ತಿ ಸಿಗುತ್ತದೆ.

ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ : 
ಮಧುಮೇಹ ರೋಗಿಗಳಿಗೆ ಹಸಿ ಬಾಳೆಹಣ್ಣು ರಾಮಬಾಣಕ್ಕಿಂತ ಕಡಿಮೆಯಿಲ್ಲ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವಲ್ಲಿ ಬಾಳೆಕಾಯಿ ಪರಿಣಾಮಾತ್ಮಕವಾಗಿ ಕೆಲಸ ಮಾಡುತ್ತದೆ. ಬಾಳೆಕಾಯಿಯ ಗ್ಲೈಸೆಮಿಕ್ ಸೂಚ್ಯಂಕವು ತುಂಬಾ ಕಡಿಮೆಯಾಗಿರುತ್ತದೆ. ಇದು ನಮ್ಮ ಇನ್ಸುಲಿನ್ ಹಾರ್ಮೋನ್ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದನ್ನು ಆಹಾರದಲ್ಲಿ ಸೇರಿಸಿದರೆ, ಸಕ್ಕರೆ ಮಟ್ಟವನ್ನು ಸುಲಭವಾಗಿ ನಿಯಂತ್ರಿಸಬಹುದು.

ಇದನ್ನೂ ಓದಿ : ನೀವೇನಾದ್ರು ಮುಟ್ಟಿನ ನೋವಿಗೆ ಮಾತ್ರೆ ತೆಗೆದುಕೊಳ್ಳುತ್ತ ಇದ್ದಿರಾ ? ಹಾಗಾದರೆ ಈ ಸ್ಟೋರಿ ನಿಮ್ಗೆ..

ರಕ್ತದೊತ್ತಡ ನಿಯಂತ್ರಿಸಲು ಸಹಕಾರಿ : 
ಬಾಳೆಕಾಯಿಯಲ್ಲಿರುವ ಪೊಟ್ಯಾಸಿಯಮ್ ನಮ್ಮ ರಕ್ತದೊತ್ತಡದ ಮಟ್ಟವನ್ನು ನಿಯಂತ್ರಿಸುವ ಕೆಲಸ ಮಾಡುತ್ತದೆ. ಇದರಿಂದಾಗಿ ಹೃದಯ ಸಂಬಂಧಿ ಸಮಸ್ಯೆಗಳಿಂದಲೂ  ರಕ್ಷಣೆ ಸಿಗುತ್ತದೆ. ಪ್ರತಿದಿನ ಬಾಳೆಕಾಯಿ ಸೇವಿಸಿದರೆ, ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಬಾಳೆಕಾಯಿ ಸೇವಿಸಲು ಆರಂಭಿಸಬೇಕು. 

ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ : 
ಬಾಳೆಕಾಯಿ ತೂಕ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಕ್ಕೆ ಕಾರಣ ಅದರಲ್ಲಿ ಕಂಡುಬರುವ ಆಹಾರದ ಫೈಬರ್. ನೀವು ಪ್ರತಿದಿನ  ಬಾಳೆಕಾಯಿ ಸೇವಿಸಿದರೆ, ಅದು ನಿಮ್ಮ ಹೊಟ್ಟೆಯು ದೀರ್ಘಕಾಲದವರೆಗೆ ತುಂಬಿರುವಂತೆ ಮಾಡುತ್ತದೆ. 

ಇದನ್ನೂ ಓದಿ : Turmeric: ಚಳಿಗಾಲದಲ್ಲಿ ಕಾಡುವ ಕೆಮ್ಮು ಕಫಕ್ಕೆ ರಾಮಬಾಣ ಈ ಮಸಾಲೆ

ಬಾಳೆ ಕಾಯಿಯಲ್ಲಿ ಹೆಚ್ಚಿನ ಪ್ರಮಾಣದ ನಾರಿನಂಶವಿದ್ದು, ಹೊಟ್ಟೆ ಉಬ್ಬುವುದು, ಅಜೀರ್ಣ, ಗ್ಯಾಸ್, ಮಲಬದ್ಧತೆ ಮುಂತಾದ ಹೊಟ್ಟೆಗೆ ಸಂಬಂಧಿಸಿದ  ಕಾಯಿಲೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಇದರ ನಿಯಮಿತ ಸೇವನೆಯು ಜೀರ್ಣಕಾರಿ ಶಕ್ತಿಯನ್ನು ಬಲಪಡಿಸುತ್ತದೆ. 

ಚಯಾಪಚಯ ಸುಧಾರಿಸುತ್ತದೆ : 
ಬಾಳೆಕಾಯಿಯಲ್ಲಿ ವಿಟಮಿನ್-ಸಿ, ವಿಟಮಿನ್-ಬಿ, ವಿಟಮಿನ್-ಕೆ, ವಿಟಮಿನ್-ಇ ಮುಂತಾದ ಹಲವು ಪೋಷಕಾಂಶಗಳಿರುತ್ತವೆ. ಇದು ನಮ್ಮ ದೇಹದ ಎಂಜೈಮ್ಯಾಟಿಕ್ ಪ್ರಕ್ರಿಯೆಗಳಿಗೆ ಸಹಾಯ ಮಾಡುತ್ತದೆ. ಬಾಳೆಕಾಯಿಯ ಸೇವನೆಯು ನಮ್ಮ ಮೆಟಾಬಾಲಿಸಂ ಮಟ್ಟವನ್ನು ಹೆಚ್ಚಿಸಲು ಇದೇ ಕಾರಣ.

 ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News