Raisins Benefits: ಒಣದ್ರಾಕ್ಷಿ ಸೇವನೆಯಿಂದ ನೂರಾರು ರೋಗಗಳಿಂದ ಸಿಗುತ್ತೆ ರಕ್ಷಣೆ

Raisins Benefits: ಆರೋಗ್ಯ ತಜ್ಞರ ಪ್ರಕಾರ, ನಿತ್ಯ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ದ್ರಾಕ್ಷಿ ಸೇವಿಸುವುದರಿಂದ ಜೀರ್ಣಕಾರಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಹಾಗೂ ಮಲಬದ್ಧತೆಯಂತಹ ಸಮಸ್ಯೆಗಳಿಂದ ಶಾಶ್ವತ ಪರಿಹಾರವನ್ನು ಪಡೆಯಬಹುದು ಎನ್ನಲಾಗುವುದು. 

Written by - Yashaswini V | Last Updated : Nov 17, 2023, 12:29 PM IST
  • ಒಣದ್ರಾಕ್ಷಿಗಳ ನಿಯಮಿತ ಸೇವನೆಯು ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸುತ್ತದೆ
  • ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿಯನ್ನು ಸೇವಿಸುವುದರಿಂದ ಹಲವು ರೋಗಗಳಿಂದ ದೂರವಿರಬಹುದು ಎಂದು ಹೇಳಲಾಗುತ್ತದೆ.
  • ಹಾಗಿದ್ದರೆ, ಒಣದ್ರಾಕ್ಷಿ ಸೇವನೆಯಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳು ಲಭ್ಯವಿವೆ ಎಂದು ತಿಳಿಯೋಣ...
Raisins Benefits: ಒಣದ್ರಾಕ್ಷಿ ಸೇವನೆಯಿಂದ ನೂರಾರು ರೋಗಗಳಿಂದ ಸಿಗುತ್ತೆ ರಕ್ಷಣೆ  title=

Raisins Benefits: ಪೋಷಕಾಂಶಗಳ ಗಣಿಯಾಗಿರುವ ಒಣದ್ರಾಕ್ಷಿ ಸೇವನೆಯು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. ಆರೋಗ್ಯ ತಜ್ಞರ ಪ್ರಕಾರ, ಪ್ರತಿ ದಿನ ಒಣದ್ರಾಕ್ಷಿ ಸೇವನೆಯಿಂದ ನೂರಾರು ರೋಗಗಳಿಂದ ರಕ್ಷಣೆ ಸಿಗುತ್ತದೆ ಎಂದು ಹೇಳಲಾಗುತ್ತದೆ. ಹಾಗಿದ್ದರೆ, ಒಣದ್ರಾಕ್ಷಿಯಲ್ಲಿ ಯಾವೆಲ್ಲಾ ಪೋಷಕಾಂಶಗಳು ಲಭ್ಯವಿವೆ. ಇದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳು ಲಭ್ಯವಿವೆ ಎಂದು ತಿಳಿಯೋಣ... 

ಒಣದ್ರಾಕ್ಷಿ ಪೋಷಕಾಂಶಗಳು: 
ಒಣದ್ರಾಕ್ಷಿಯಲ್ಲಿ ಐರನ್, ವಿಟಮಿನ್ ಬಿ1, ಬಿ3, ಬಿ6, ಜಿಂಕ್, ವಿಟಮಿನ್ ಸಿ, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮೇಗ್ನೀಶಿಯಮ್, ಫೈಬರ್ ಸೇರಿದಂತೆ ಹಲವು ಪೋಷಕಾಂಶಗಳು ಕಂಡು ಬರುತ್ತದೆ. ಹಾಗಾಗಿ ಒಣದ್ರಾಕ್ಷಿ ಬಳಕೆಯಿಂದ ಹಲವು ರೋಗಗಳಿಂದ ದೂರ ಉಳಿಯಬಹುದು. ಅದರಲ್ಲೂ ಒಣದ್ರಾಕ್ಷಿಯನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ ಎಂದು ಹೇಳಲಾಗುತ್ತದೆ. 

ನಿತ್ಯ ದ್ರಾಕ್ಷಿ ಸೇವನೆಯಿಂದ ಈ ರೋಗಗಳಿಂದ ದೂರ ಉಳಿಯಬಹುದು: 
ಆಯುರ್ವೇದ ತಜ್ಞರ ಪ್ರಕಾರ, ಪ್ರತಿದಿನ ಒಣದ್ರಾಕ್ಷಿ ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳಿದ್ದು, ಇದರಿಂದ ಹಲವು ರೋಗಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ. ಅವುಗಳೆಂದರೆ... 

ಇದನ್ನೂ ಓದಿ- ಅಂಡರ್ ಆರ್ಮ್ ಪಿಂಪಲ್ಸ್ ಚಿಕಿತ್ಸೆಗೆ 10 ಉತ್ತಮ ಮನೆಮದ್ದುಗಳು

ಆರೋಗ್ಯಕರ ಚರ್ಮ: 
ಒಣದ್ರಾಕ್ಷಿ ಸೇವನೆಯು ಚರ್ಮದ ಆರೋಗ್ಯಕ್ಕೆ ದಿವ್ಯೌಷಧವಾಗಿದೆ. ನಿತ್ಯ ಸೀಮಿತ ಪ್ರಮಾಣದಲ್ಲಿ ಒಣದ್ರಾಕ್ಷಿ ಸೇವಿಸುವುದರಿಂದ ಚರ್ಮದ ಕಾಂತಿ ಕಳೆಗುಂದುವುದಿಲ್ಲ. ಅಷ್ಟೇ ಅಲ್ಲ, ವಯಸ್ಸಾದಂತೆ ಕಾಣುವ ಹಲವು ಚರ್ಮದ ಸಮಸ್ಯೆಗಳಿಂದಲೂ ರಕ್ಷಣೆ ಸಿಗುತ್ತದೆ. 

ಇಮ್ಯುನಿಟಿ: 
ನಿತ್ಯ ಒಣದ್ರಾಕ್ಷಿ ತಿನ್ನುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಸೋಂಕುಗಳ ವಿರುದ್ಧ ನಮ್ಮನ್ನು ರಕ್ಷಿಸಿ ಆರೋಗ್ಯವಾಗಿರಿಸುತ್ತದೆ. 

ರಕ್ತಹೀನತೆಗೆ ಪರಿಹಾರ: 
ಕಪ್ಪು ಒಣದ್ರಾಕ್ಷಿಯಲ್ಲಿ ಐರನ್ ಸಮೃದ್ಧವಾಗಿದ್ದು ಇದರ ಸೇವನೆಯಿಂದ ರಕ್ತಹೀನತೆ ಸಮಸ್ಯೆಯಿಂದ ಪರಿಹಾರ ಪಡೆಯಬಹುದು ಎನ್ನಲಾಗುತ್ತದೆ. 

ಶ್ವಾಸಕೋಶದ ಆರೋಗ್ಯ: 
ಆರೋಗ್ಯ ತಜ್ಞರ ಪ್ರಕಾರ, ಒಣದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಶೋಧಿಸಿ ಇದನ್ನು ಕಷಾಯದ ರೂಪದಲ್ಲಿ ಕುಡಿಯುವುದರಿಂದ ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳಿಂದ ಪರಿಹಾರ ಪಡೆಯಬಹುದು. 

ಇದನ್ನೂ ಓದಿ- ಯಾವುದೇ ಸೈಡ್ ಎಫ್ಫೆಕ್ಟ್ಸ್ ಇಲ್ಲ, ಕೇವಲ 2 ರೂ.ನಲ್ಲಿ ಬಿಳಿ ಕೂದಲನ್ನು ಕಪ್ಪಾಗಿಸಿ

ನರಮಂಡಲಕ್ಕೆ ಸಂಬಂಧಿಸಿದ ಸಮಸ್ಯೆಗಳು: 
ಒಣದ್ರಾಕ್ಷಿಯನ್ನು ರಾತ್ರಿಯಿಡೀ ಒಂದು ಲೋಟದಲ್ಲಿ ನೆನೆಸಿಟ್ಟು ಮುಂಜಾನೆ ಕುಡಿಯುವುದರಿಂದ ನರಮಂಡಲಕ್ಕೆ ಸಂಬಂಧಿಸಿದ ನಾನಾ ರೀತಿಯ ಸಮಸ್ಯೆಗಳಿಂದ ಮುಕ್ತಿ ಹೊಂದಬಹುದು ಎಂದು ಹೇಳಲಾಗುತ್ತದೆ. 

ಕಣ್ಣಿನ ಆರೋಗ್ಯ: 
ನಿತ್ಯ ಸೀಮಿತ ಪ್ರಮಾಣದಲ್ಲಿ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ಸೇವಿಸುವುದರಿಂದ ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯುತ್ತದೆ. 

ಜೀರ್ಣಕಾರಿ, ಮಲಬದ್ಧತೆ ಸಮಸ್ಯೆಗೆ ಶಾಶ್ವತ ಪರಿಹಾರ: 
ಆರೋಗ್ಯ ತಜ್ಞರ ಪ್ರಕಾರ, ನಿತ್ಯ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ದ್ರಾಕ್ಷಿ ಸೇವಿಸುವುದರಿಂದ ಜೀರ್ಣಕಾರಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಹಾಗೂ ಮಲಬದ್ಧತೆಯಂತಹ ಸಮಸ್ಯೆಗಳಿಂದ ಶಾಶ್ವತ ಪರಿಹಾರವನ್ನು ಪಡೆಯಬಹುದು ಎನ್ನಲಾಗುವುದು. 

ಮಹಿಳೆಯರ ಸಮಸ್ಯೆ: 
ಮಹಿಳೆಯರನ್ನು ಸಾಮಾನ್ಯವಾಗಿ ಬಾಧಿಸುವ ಪಿ‌ಸಿ‌ಓ‌ಡಿ, ಪಿ‌ಸಿ‌ಓ‌ಎಸ್, ಗರ್ಭಕೋಶ ಸಂಬಂಧಿತ ಸಮಸ್ಯೆಗಳಿಂದ ಪರಿಹಾರ ಪಡೆಯಲು ಒಣದ್ರಾಕ್ಷಿ ಅತ್ಯುತ್ತಮ ಮನೆಮದ್ದು. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News