ಮಧುಮೇಹ ನಿಯಂತ್ರಣಕ್ಕೆ ಈ 5 ಕಾಳು ತರಕಾರಿಗಳು ನಿಮ್ಮ ಆಹಾರದಲ್ಲಿರಲಿ!

Taming Diabetes Vegetables: ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು, ಔಷಧಿಗಳು ಮಾತ್ರವಲ್ಲದೆ ಈ ಹಸಿರು ಬೀನ್ಸ್ ಅನ್ನು ಕೂಡ ಸೇವಿಸಬಹುದು, ಅವು ಮಧುಮೇಹವನ್ನು ನಿಯಂತ್ರಿಸುವ ಜೊತೆಗೆ ರೋಗಿಗಳಿಗೆ ಅನೇಕ ಪ್ರಯೋಜನಗಳನ್ನು ನೀಡುತ್ತವೆ.(Health News In Kannada)  

Written by - Nitin Tabib | Last Updated : Jan 3, 2024, 10:09 PM IST
  • ಮಧುಮೇಹ ರೋಗಿಗಳಿಗೆ ಚವಳಿ ಸೇವನೆಯು ತುಂಬಾ ಪ್ರಯೋಜನಕಾರಿಯಾಗಿದೆ ಮತ್ತು
  • ಚವಳಿ ಕಾಯಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಗುಣಗಳನ್ನು ಹೊಂದಿದೆ ಎಂದು ಅನೇಕ ಅಧ್ಯಯನಗಳಲ್ಲಿ ಕಂಡುಬಂದಿದೆ.
  • ಮಧುಮೇಹ ರೋಗಿಗಳು ಬೇಯಿಸಿದ ಚವಳಿ ಕಾಯಿಯನ್ನು ಅನ್ನು ಸೇವಿಸಬಹುದು, ಇದು ಅನೇಕ ಇತರ ಪ್ರಯೋಜನಗಳನ್ನು ಕೂಡ ನೀಡುತ್ತದೆ.
ಮಧುಮೇಹ ನಿಯಂತ್ರಣಕ್ಕೆ ಈ 5 ಕಾಳು ತರಕಾರಿಗಳು ನಿಮ್ಮ ಆಹಾರದಲ್ಲಿರಲಿ! title=

ಬೆಂಗಳೂರು: ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು, ನಾವು ಅನೇಕ ರೀತಿಯ ಪರಿಹಾರಗಳನ್ನು ಅಳವಡಿಸಿಕೊಳ್ಳುತ್ತೇವೆ ಮತ್ತು ಇದೇ ವೇಳೆ ನಮ್ಮ ಆಹಾರಕ್ರಮವನ್ನು ಮತ್ತೆ ಮತ್ತೆ ಬದಲಾಯಿಸುತ್ತಿರುತ್ತೇವೆ. ಆದರೆ ಮಧುಮೇಹದಿಂದ ಬಳಲುತ್ತಿರುವ ಹೆಚ್ಚಿನ ಜನರು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಔಷಧಿಗಳ ಮೇಲೆ ಮಾತ್ರ ಅವಲಂಬಿತರಾಗಿರುವುದು ಕಂಡುಬರುತ್ತದೆ. ಆದರೆ ಕೆಲವು ವಿಧದ ಔಷಧಿಗಳಿವೆ, ಅವುಗಳ ನಿರಂತರ ಸೇವನೆಯು ಆರೋಗ್ಯಕ್ಕೆ ಹಾನಿ ಮಾಡುತ್ತದೆ. ಆದ್ದರಿಂದ, ಆರೋಗ್ಯ ತಜ್ಞರು ಮಧುಮೇಹ ರೋಗಿಗಳಿಗೆ ತಮ್ಮ ಆಹಾರದಲ್ಲಿ ಮಧುಮೇಹ ನಿಯಂತ್ರಿಸುವ ಆಹಾರಗಳನ್ನು ಸೇರಿಸಲು ಸಲಹೆ ನೀಡುತ್ತಾರೆ, ಅವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಈ ಲೇಖನದಲ್ಲಿ, ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲ ಬೀನ್ಸ್ ತರಕಾರಿಗಳ ಕುರಿತು ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ.

1. ಮಧುಮೇಹಕ್ಕೆ ಅವರೆ
ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸೋಯಾಬೀನ್ ಅನ್ನು ಸೇವಿಸುವುದು ಉತ್ತಮ ಆಯ್ಕೆಯಾಗಿದೆ. ಸೋಯಾಬೀನ್ ಮಾತ್ರವಲ್ಲದೆ ಅದರ ಹಸಿರು ಬೀನ್ಸ್ ಉತ್ತಮ ಪ್ರಮಾಣದ ಫೈಬರ್ ಮತ್ತು ಇತರ ಅನೇಕ ಪೋಷಕಾಂಶಗಳನ್ನು ಹೊಂದಿರುತ್ತದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ನಿಮಗೆ ಸಹಾಯ ಮಾಡುತ್ತದೆ

2. ಮಧುಮೇಹಕ್ಕೆ ಚವಳಿ ಕಾಯಿ
ಮಧುಮೇಹ ರೋಗಿಗಳಿಗೆ ಚವಳಿ ಸೇವನೆಯು ತುಂಬಾ ಪ್ರಯೋಜನಕಾರಿಯಾಗಿದೆ ಮತ್ತು ಚವಳಿ ಕಾಯಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಗುಣಗಳನ್ನು ಹೊಂದಿದೆ ಎಂದು ಅನೇಕ ಅಧ್ಯಯನಗಳಲ್ಲಿ ಕಂಡುಬಂದಿದೆ. ಮಧುಮೇಹ ರೋಗಿಗಳು ಬೇಯಿಸಿದ ಚವಳಿ ಕಾಯಿಯನ್ನು ಅನ್ನು ಸೇವಿಸಬಹುದು, ಇದು ಅನೇಕ ಇತರ ಪ್ರಯೋಜನಗಳನ್ನು ಕೂಡ ನೀಡುತ್ತದೆ.

3. ಮಧುಮೇಹಕ್ಕೆ ಮೂಲಂಗಿ ಕಾಯಿ ಪಲ್ಯೆ 
ಮೂಲಂಗಿ ಕಾಯಿ ಪಲ್ಯ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂಬುದು ಬಹುತೇಕರಿಗೆ ತಿಳಿದಿಲ್ಲ. ಚಳಿಗಾಲದಲ್ಲಿ ಸಿಗುವ ಮೂಲಂಗಿ ಕಾಯಿ ಪಲ್ಯೆಯನ್ನು ಚಟ್ನಿ ರೂಪದಲ್ಲಿ ಅಥವಾ ತರಕಾರಿಯಾಗಿ ಸೇವಿಸಿದರೆ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ. 

4. ಮಧುಮೇಹಕ್ಕೆ ಹುರಳಿ ಕಾಳು ಪಲ್ಯ
ಮಧುಮೇಹ ರೋಗಿಗಳು ತಮ್ಮ ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ತಮ್ಮ ಆಹಾರದಲ್ಲಿ ಲೀಮಾ ಬೆನ್ಸ್ ಅಥವಾ ಹುರಳಿಕಾಳು ಪಲ್ಯೆವನ್ನು ಶಾಮೀಲುಗೊಳಿಸಬಹುದ. ಈ ಬೇನ್ಸ್  ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಮಾತ್ರವಲ್ಲ, ಅವುಗಳಲ್ಲಿ ಇರುವ ಫೈಬರ್ ಮತ್ತು ಇತರ ಪೋಷಕಾಂಶಗಳು ಮಲಬದ್ಧತೆ ಮತ್ತು ಇತರ ಜೀರ್ಣಕಾರಿ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ-ನಿತ್ಯ ಬೆಳಗ್ಗೆ ಈ ಹೂವಿನ ಚಹಾ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತೆ!

5. ಮಧುಮೇಹಕ್ಕೆ ನುಗ್ಗೆಕಾಯಿ ಪಲ್ಯೆ
ಹಲವಾರು ರೀತಿಯ ಆರೋಗ್ಯ ಗುಣಗಳು ನುಗ್ಗೆಕಾಯಿಯಲ್ಲಿ ಕಂಡುಬರುತ್ತವೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು, ನುಗ್ಗೆಕಾಯಿಗಳನ್ನು ನೀವು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು. 

ಇದನ್ನೂ ಓದಿ-ಅಡುಗೆ ಮನೆಯಲ್ಲಿರುವ ಈ ಮಸಾಲೆ ಪದಾರ್ಥದ ಚಹಾ ಸೇವನೆಯಿಂದಲೂ ಮಧುಮೇಹ ನಿಯಂತ್ರಣಕ್ಕೆ ಬರುತ್ತೆ!

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News