ಈ ಜನರು ಅಪ್ಪಿತಪ್ಪಿಯೂ ಸೀತಾಫಲವನ್ನು ಸೇವಿಸಬಾರದು; ದೂರವಿದ್ದಷ್ಟು ಆರೋಗ್ಯಕ್ಕೆ ಉತ್ತಮ

ಕೆಲವು ಆರೋಗ್ಯ ತಜ್ಞರ ಪ್ರಕಾರ, ಸೀತಾಫಲ ಹಣ್ಣಿನ ಎಲೆಗಳು ಮಧುಮೇಹವನ್ನು ಕಡಿಮೆ ಮಾಡಲು ಮತ್ತು ತೂಕವನ್ನು ಕಳೆದುಕೊಳ್ಳುವ ಗುಣವನ್ನು ಹೊಂದಿದೆ ಎಂದು ತಿಳಿಸಿದ್ದಾರೆ. ಯಾರು ಸೀತಾಫಲ ಹಣ್ಣು ಸೇವಿಸಬಾರದು ಎಂದು ತಿಳಿಯಿರಿ...

Written by - Puttaraj K Alur | Last Updated : May 3, 2025, 08:16 PM IST
  • ಸೀತಾಫಲ ಹಣ್ಣು ತಿನ್ನಲು ಪ್ರತಿಯೊಬ್ಬರೂ ಇಷ್ಟಪಡುತ್ತಾರೆ
  • ಮಧುಮೇಹಿಗಳು ಸೀತಾಫಲವನ್ನು ಅಪ್ಪಿತಪ್ಪಿಯೂ ತಿನ್ನಬಾರದು
  • ಈ ಹಣ್ಣಿನಲ್ಲಿ ಫ್ರಕ್ಟೋಸ್ ಇರುವುದರಿಂದ ಮಧುಮೇಹಿಗಳಿಗೆ ಇದು ಒಳ್ಳೆಯದಲ್ಲ
ಈ ಜನರು ಅಪ್ಪಿತಪ್ಪಿಯೂ ಸೀತಾಫಲವನ್ನು ಸೇವಿಸಬಾರದು; ದೂರವಿದ್ದಷ್ಟು ಆರೋಗ್ಯಕ್ಕೆ ಉತ್ತಮ

Custard Apple Benefits: ಸೀತಾಫಲ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಚಳಿಗಾಲ ಪ್ರಾರಂಭವಾದಾಗ ಎಲ್ಲರಿಗೂ ಸೀತಾಫಲ ನೆನಪಾಗುತ್ತದೆ. ಈ ಋತುವಿನಲ್ಲಿ ಲಭ್ಯವಿರುವ ಸೀತಾಫಲವನ್ನು ತಿನ್ನಲು ಪ್ರತಿಯೊಬ್ಬರೂ ಇಷ್ಟಪಡುತ್ತಾರೆ. ಆದರೆ ಮಧುಮೇಹ ಹೊಂದಿರುವ ಜನರು ಸೀತಾಫಲವನ್ನು ಅಪ್ಪಿತಪ್ಪಿಯೂ ತಿನ್ನಬಾರದು. 

Add Zee News as a Preferred Source

ಮಧುಮೇಹ ಇರುವವರು ಸೀತಾಫಲವನ್ನು ತಿನ್ನಬಹುದೇ? ಈ ಬಗ್ಗೆ ವೈದ್ಯಕೀಯ ತಜ್ಞರು ಏನು ಹೇಳುತ್ತಾರೆ? ಪ್ರಸ್ತುತ ಅನೇಕ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಈ ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವ ಹೆಚ್ಚಿನ ಜನರು ಭಾರತದಲ್ಲಿದ್ದಾರೆಂದು ಹಲವಾರು ಅಧ್ಯಯನಗಳು ತೋರಿಸಿವೆ. ಭಾರತವನ್ನು ಮಧುಮೇಹದ ರಾಜಧಾನಿ ಎಂತಲೂ ಕರೆಯಲಾಗುತ್ತದೆ.  

ಇದನ್ನೂ ಓದಿ: ಬ್ಲಡ್ ಶುಗರ್ ಅನ್ನು ಕಂಪ್ಲೀಟ್‌ ಕಂಟ್ರೋಲ್‌ ತರುವ ಶಕ್ತಿ ಈ ತರಕಾರಿಗಷ್ಟೇ ಇರುವುದು! ಚಳಿಗಾಲದಲ್ಲಿ ಮಾತ್ರ ಸಿಗುವ ಇದು ಕ್ಯಾನ್ಸರ್‌ ಕೂಡ ಗುಣಪಡಿಸುವಷ್ಟು ಶಕ್ತಿಶಾಲಿ!

ಇಂದು ಮಧುಮೇಹವು ದೊಡ್ಡವರಿರಲಿ ಅಥವಾ ಚಿಕ್ಕವರಿರಲಿ ಎಲ್ಲಾ ವಯಸ್ಸಿನ ಜನರಿಗೆ ದೊಡ್ಡ ಸಮಸ್ಯೆಯಾಗಿದೆ. ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯೇ ಮಧುಮೇಹಕ್ಕೆ ಪ್ರಮುಖ ಕಾರಣವೆಂದು ಆರೋಗ್ಯ ತಜ್ಞರು ಹೇಳಿದ್ದಾರೆ.

ಸೀತಾಫಲದಲ್ಲಿ ಆಂಟಿ-ಆಕ್ಸಿಡೆಂಟ್‌ಗಳು, ಕ್ಯಾರಟೆನಾಯ್ಡ್‌ಗಳು, ಫ್ಲೇವನಾಯ್ಡ್‌ಗಳು, ವಿಟಮಿನ್ C, B6, ಮೆಗ್ನೀಸಿಯಮ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಫೈಬರ್ ಸಮೃದ್ಧವಾಗಿದೆ. ಮಧುಮೇಹದಿಂದ ಬಳಲುತ್ತಿರುವವರು ಹೆಚ್ಚಿನ ಗ್ಲೈಸೆಮಿಕ್ ಇಂಡೆಕ್ಸ್ ಇರುವ ಹಣ್ಣುಗಳನ್ನು ಸೇವಿಸುತ್ತಾರೆ. ಗ್ಲೈಸೆಮಿಕ್ ಇಂಡೆಕ್ಸ್ ಇರುವ ಹಣ್ಣುಗಳಲ್ಲಿ ಈ ಸೀತಾಫಲವೂ ಒಂದು. ಈ ಹಣ್ಣಿನಲ್ಲಿ ಫ್ರಕ್ಟೋಸ್ ಇರುವುದರಿಂದ ಮಧುಮೇಹಿಗಳಿಗೆ ಇದು ಒಳ್ಳೆಯದಲ್ಲವೆಂದು ಹೇಳಲಾಗಿದೆ.

ಇದನ್ನೂ ಓದಿಕಿಡ್ನಿ ವೈಫಲ್ಯದ ಈ 5 ಲಕ್ಷಣಗಳು ಮುಖದಲ್ಲಿ ಗೋಚರಿಸುತ್ತವೆ..! ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ

ಇನ್ಸುಲಿನ್ ಬಳಸದ ಮಧುಮೇಹ ರೋಗಿಗಳು ಸೀತಾಫಲವನ್ನು ಮಿತವಾಗಿ ತೆಗೆದುಕೊಳ್ಳಬಹುದು. ಇದನ್ನು 15 ದಿನಕ್ಕೊಮ್ಮೆ ತಿನ್ನುವುದರಿಂದ ಅವರ ಸಕ್ಕರೆಯ ಮಟ್ಟದಲ್ಲಿ ಯಾವುದೇ ಬದಲಾವಣೆಯಾಗಲ್ಲ. ಆದರೆ ಇನ್ಸುಲಿನ್ ತೆಗೆದುಕೊಳ್ಳುವ ಮಧುಮೇಹ ರೋಗಿಗಳು ಈ ಹಣ್ಣನ್ನು ತಿನ್ನುವ ಮೂಲಕ ತಮ್ಮ ಸಕ್ಕರೆ ಮಟ್ಟವನ್ನು ಹೆಚ್ಚಿಸಬಹುದು. ಈ ಸಿಹಿ ಹಣ್ಣನ್ನು ಸೇವಿಸುವುದರಿಂದ ಅವರ ಸಕ್ಕರೆ ಪ್ರಮಾಣ ಹೆಚ್ಚಾದರೆ ಇನ್ಸುಲಿನ್ ಪ್ರಮಾಣವನ್ನು ಮತ್ತೊಮ್ಮೆ ಹೆಚ್ಚಿಸಬೇಕಾಗುತ್ತದೆ. ಅದಕ್ಕಾಗಿಯೇ ಮಧುಮೇಹದಿಂದ ಬಳಲುತ್ತಿರುವವರು ಈ ಹಣ್ಣನ್ನು ತಿನ್ನಬಾರದು ಎಂದು ಸಲಹೆ ನೀಡಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News