Juice For Diabetes Patients: ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ ಈ ಗ್ರೀನ್ ಜ್ಯೂಸ್

How To Control Blood Sugar Level: ಮಧುಮೇಹ ಸಮಸ್ಯೆ ಇರುವವರಿಗೆ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ, ಇಲ್ಲದಿದ್ದರೆ ಆರೋಗ್ಯ ಕ್ಷೀಣಿಸುವ ಅಪಾಯವಿದೆ. 

Written by - Yashaswini V | Last Updated : May 20, 2022, 09:28 AM IST
  • ಈ ಆರೋಗ್ಯಕರ ರಸವನ್ನು ಕುಡಿಯುವುದರಿಂದ, ರಕ್ತದಲ್ಲಿನ ಸಕ್ಕರೆಯ ಮಟ್ಟವು ನಿಯಂತ್ರಣದಲ್ಲಿರಲಿದೆ.
  • ಈ ರಸವನ್ನು ಕುಡಿಯುವುದರಿಂದ ಸ್ಥೂಲಕಾಯತೆ ಕಡಿಮೆಯಾಗುತ್ತದೆ
  • ಇದು ಅಧಿಕ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ
Juice For Diabetes Patients: ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ ಈ ಗ್ರೀನ್ ಜ್ಯೂಸ್  title=
Benefits of Wheatgrass Juice

ಮಧುಮೇಹ ರೋಗಿಗಳಿಗೆ ಜ್ಯೂಸ್ : ಮಧುಮೇಹ ರೋಗಿಗಳಿಗೆ ವಿವಿಧ ಆರೋಗ್ಯಕರ ಪದಾರ್ಥಗಳನ್ನು ತಿನ್ನಲು ಸಲಹೆ ನೀಡಲಾಗುತ್ತದೆ, ಅವುಗಳಲ್ಲಿ ಒಂದು ಗೋಧಿಯ ತಾಜಾ ಮತ್ತು ಹಸಿರು ಎಲೆಗಳಿಂದ ತಯಾರಿಸಿದ ವೀಟ್‌ಗ್ರಾಸ್ ಜ್ಯೂಸ್, ಆರೋಗ್ಯಕ್ಕೆ ಇದು ಸಾಕಷ್ಟು ಪ್ರಯೋಜನಕಾರಿಯಾಗಿದೆ. ಇದು ಮಧುಮೇಹದಂತಹ ಗಂಭೀರ ಕಾಯಿಲೆಗಳಿಗೆ ಪರಿಹಾರ ನೀಡುವುದಲ್ಲದೆ, ಇತರ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪ್ರಯೋಜನವನ್ನು ಒದಗಿಸುತ್ತದೆ.

ಗೋಧಿ ಹುಲ್ಲಿನ ರಸವನ್ನು ಕುಡಿಯುವುದರಿಂದ ಸಿಗುವ ಪ್ರಯೋಜನಗಳು:
ಗೋಧಿ ಹುಲ್ಲಿನಲ್ಲಿ  ಪ್ರೋಟೀನ್, ಫ್ಲೇವನಾಯ್ಡ್ಗಳು, ಕ್ಲೋರೊಫಿಲ್, ವಿಟಮಿನ್-ಸಿ ಮತ್ತು ವಿಟಮಿನ್-ಇ, ಖನಿಜಗಳು, ಫೈಬರ್ ಮತ್ತು ಆಂಟಿ-ಆಕ್ಸಿಡೆಂಟ್ ಗುಣಲಕ್ಷಣಗಳು ಹೇರಳವಾಗಿ ಕಂಡುಬರುತ್ತವೆ. ಇದನ್ನು ಪ್ರತಿದಿನ ಕುಡಿದರೆ ದೇಹದಲ್ಲಿನ ಎಲ್ಲಾ ಪೋಷಕಾಂಶಗಳ ಕೊರತೆ ನೀಗುತ್ತದೆ. ಗೋಧಿ ಹುಲ್ಲಿನ ಜ್ಯೂಸ್ ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಯೋಣ.

1. ಮಧುಮೇಹ ರೋಗಿಗಳಿಗೆ ಪರಿಹಾರ:
ಗೋಧಿ ಹುಲ್ಲಿನ ರಸವನ್ನು ಕುಡಿಯುವುದರಿಂದ, ರಕ್ತದಲ್ಲಿನ ಸಕ್ಕರೆಯ ಮಟ್ಟವು ನಿಯಂತ್ರಣದಲ್ಲಿರಲಿದೆ. ಅದಕ್ಕಾಗಿಯೇ ಮಧುಮೇಹ ರೋಗಿಗಳು ಇದನ್ನು ನಿಯಮಿತವಾಗಿ ಸೇವಿಸಲು ಸಲಹೆ ನೀಡಲಾಗುತ್ತದೆ.

ಇದನ್ನೂ ಓದಿ- Diabetes: ಬ್ಲಡ್ ಶುಗರ್ ನಿಯಂತ್ರಣದಲ್ಲಿಡಲು ಮಧುಮೇಹಿಗಳು ಈ ಹಣ್ಣನ್ನು ತಪ್ಪದೇ ಸೇವಿಸಿ

2. ತೂಕ ನಷ್ಟದಲ್ಲಿ ಪರಿಣಾಮಕಾರಿ:
ಗೋಧಿ ಹುಲ್ಲಿನ ರಸವನ್ನು ಕುಡಿಯುವುದರಿಂದ ಸ್ಥೂಲಕಾಯತೆ ಕಡಿಮೆಯಾಗುತ್ತದೆ. ಏಕೆಂದರೆ ಇದು ಕಡಿಮೆ ಕ್ಯಾಲೋರಿಗಳು ಮತ್ತು ಹೆಚ್ಚಿನ ಫೈಬರ್ ಅನ್ನು ಹೊಂದಿರುತ್ತದೆ. ಈ ಜ್ಯೂಸ್ ಕುಡಿಯುವುದರಿಂದ ಹೊಟ್ಟೆ ತುಂಬಿದ ಅನುಭವವಾಗುವುದರಿಂದ ಹೆಚ್ಚು ಹೊತ್ತು ಹಸಿವಾಗುವುದಿಲ್ಲ ಮತ್ತು ಹೆಚ್ಚು ಆಹಾರ ಸೇವಿಸದೇ ಇದ್ದರೆ ಕ್ರಮೇಣ ತೂಕ ಕಡಿಮೆಯಾಗತೊಡಗುತ್ತದೆ.

3. ಅಧಿಕ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ:
ರಕ್ತನಾಳಗಳಲ್ಲಿ ಕೊಬ್ಬು ಶೇಖರಣೆಯಾದರೆ, ಅದು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗುತ್ತದೆ, ಅದು ಹೃದಯಾಘಾತಕ್ಕೆ ಕಾರಣವಾಗಬಹುದು ಎಂದು ಹೇಳಲಾಗುತ್ತದೆ. ಆದರೆ, ಗೋಧಿ ಹುಲ್ಲಿನ ರಸವನ್ನು ಕುಡಿಯುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ, ಇದು ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುವುದಿಲ್ಲ.

ಇದನ್ನೂ ಓದಿ- Diabetes Diet:ನೆಲ್ಲಿಕಾಯಿಯೊಂದಿಗೆ ಈ ವಸ್ತುವನ್ನು ಬೆರೆಸಿದರೆ ಮಧುಮೇಹ ರೋಗಿಗಳಿಗೆ ಸಿಗುತ್ತದೆ ಪರಿಹಾರ

4. ಡಿಟಾಕ್ಸ್: 
ಗೋಧಿ ಹುಲ್ಲಿನ ರಸದಲ್ಲಿ ಕ್ಲೋರೊಫಿಲ್ ಪ್ರಮಾಣವು ಕಂಡುಬರುತ್ತದೆ, ಇದರಿಂದಾಗಿ ದೇಹದ ವಿಷಗಳು ಹೊರಬರುತ್ತವೆ. ದೇಹದ ನಿರ್ವಿಶೀಕರಣದ ಕಾರಣ, ಯಕೃತ್ತು ಸರಿಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಜೀರ್ಣಕ್ರಿಯೆಯೂ ಉತ್ತಮವಾಗಿರುತ್ತದೆ. ಇದಲ್ಲದೆ, ದೇಹವು ಹೆಚ್ಚಿನ ಶಕ್ತಿಯನ್ನು ಪಡೆಯಲು ಪ್ರಾರಂಭಿಸುತ್ತದೆ. 

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News