ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಮಧುಮೇಹಕ್ಕೆ ವರದಾನ ಈ ಹಸಿರು ತರಕಾರಿ! ಇಂದೇ ನಿಮ್ಮ ಆಹಾರದಲ್ಲಿ ಶಾಮೀಲುಗೊಳಿಸಿ

Food To Control High Cholesterol: ನೀವೂ ಕೂಡ ಒಂದು ವೇಳೆ ನಿಮ್ಮ ದೇಹದಲ್ಲಿ ಹೆಚ್ಚಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಬಯಸುತ್ತಿದ್ದರೆ, ನಾರಿನಂಶ ಹೆಚ್ಚಾಗಿರುವ ಪದಾರ್ಥಗಳನ್ನು ನೀವು ನಿಮ್ಮ ಆಹಾರದಲ್ಲಿ ಶಾಮೀಲುಗೊಳಿಸಬಹುದು.  

Written by - Nitin Tabib | Last Updated : Mar 2, 2023, 12:39 PM IST
  • ಉತ್ತಮ ಆರೋಗ್ಯಕ್ಕಾಗಿ, ನಾವು ಆರೋಗ್ಯಕರ ಆಹಾರವನ್ನು ನಮ್ಮ ಡಯಟ್ ನಲ್ಲಿ ಸೇರಿಸಿಕೊಳ್ಳಬೇಕು.
  • ಅಂತಹುದೇ ಒಂದು ಹಸಿರು ತರಕಾರಿಯ ಬಗ್ಗೆ ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ,
  • ಇದರ ಸೇವನೆಯು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೋಗಲಾಡಿಸುತ್ತದೆ, ಅಷ್ಟೇ ಅಲ್ಲ ಇದು ದೇಹದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಹ ನಿಯಂತ್ರಿಸುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಮಧುಮೇಹಕ್ಕೆ ವರದಾನ ಈ ಹಸಿರು ತರಕಾರಿ! ಇಂದೇ ನಿಮ್ಮ ಆಹಾರದಲ್ಲಿ ಶಾಮೀಲುಗೊಳಿಸಿ title=
ಬೆಂಡೆಕಾಯಿಯಿಂದ ಕೊಲೆಸ್ಟ್ರಾಲ್ ನಿಯಂತ್ರಣ

Benefits of Eating Lady Finger: ಕಳಪೆ ಮಟ್ಟದ ಜೀವನಶೈಲಿ ಹಾಗೂ ಬೇಕಾಬಿಟ್ಟಿ ಆಹಾರವನ್ನು ಸೇವಿಸುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಹೃದಯಾಘಾತ ಮತ್ತು ಮಧುಮೇಹದ ಅಪಾಯ ಕಾಡುತ್ತದೆ. ಉತ್ತಮ ಆರೋಗ್ಯಕ್ಕಾಗಿ, ನಾವು ಆರೋಗ್ಯಕರ ಆಹಾರವನ್ನು ನಮ್ಮ ಡಯಟ್ ನಲ್ಲಿ ಸೇರಿಸಿಕೊಳ್ಳಬೇಕು. ಅಂತಹುದೇ ಒಂದು ಹಸಿರು ತರಕಾರಿಯ ಬಗ್ಗೆ ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ, ಇದರ ಸೇವನೆಯು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೋಗಲಾಡಿಸುತ್ತದೆ, ಅಷ್ಟೇ ಅಲ್ಲ ಇದು ದೇಹದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಹ ನಿಯಂತ್ರಿಸುತ್ತದೆ.

ಬೆಂಡೆಕಾಯಿ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ
ಬೆಂಡೆಕಾಯಿ ಸಾಮಾನ್ಯವಾಗಿ ವಿಟಮಿನ್ಗಳು, ಖನಿಜಗಳು ಮತ್ತು ಫೈಬರ್ ನಿಂದ ಸಮೃದ್ಧವಾಗಿದೆ. ಇದಲ್ಲದೆ, ಇದರಲ್ಲಿ ಪೆಕ್ಟಿನ್ ಕೂಡ ಕಂಡುಬರುತ್ತದೆ, ಇದರ ಸಹಾಯದಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವು ಕಡಿಮೆಯಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ ರಕ್ತದೊತ್ತಡವೂ ನಿಯಂತ್ರಣದಲ್ಲಿರುತ್ತದೆ. ನೆನಪಿಡಿ, ಹೆಚ್ಚಿನ ಕೊಲೆಸ್ಟ್ರಾಲ್ ಅನ್ನು ಅನೇಕ ಗಂಭೀರ ಕಾಯಿಲೆಗಳ ಮೂಲವೆಂದು ಪರಿಗಣಿಸಲಾಗುತ್ತದೆ.

ಮಧುಮೇಹ ನಿಯಂತ್ರಿಸುವಲ್ಲಿ ಸಹಕಾರಿ
ಬೆಂಡೆಕಾಯಿ ಫೈಬರ್‌ನ ಸಮೃದ್ಧ ಮೂಲವಾಗಿದೆ. ಇದು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸರಿಯಾಗಿಡುತ್ತದೆ, ಇದು ಹಸಿವನ್ನು ಉಂಟುಮಾಡುವುದಿಲ್ಲ. ಮಧುಮೇಹಿಗಳಿಗೆ ಇದು ಪ್ರಯೋಜನಕಾರಿಯಾಗಿದೆ ಏಕೆಂದರೆ ಈ ಹಸಿರು ತರಕಾರಿಯನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ.

ಇದನ್ನೂ ಓದಿ-Diabetes ನಿಯಂತ್ರಿಸಬೇಕೆ? ಇಂದಿನಿಂದಲೇ ಈ 6 ಮನೆ ಉಪಾಯಗಳನ್ನು ನಿಮ್ಮದಾಗಿಸಿಕೊಳ್ಳಿ!

ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ
ಕೊರೊನಾವೈರಸ್ ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಲಾಗುತ್ತಿದೆ, ಇಂತಹ ಪರಿಸ್ಥಿತಿಯಲ್ಲಿ ಲೇಡಿ ಫಿಂಗರ್ ನಿಮಗೆ ಹೆಚ್ಚು ಉಪಯುಕ್ತವಾಗಬಹುದು. ನೀವು ಈ ತರಕಾರಿಯನ್ನು ದೈನಂದಿನ ಆಹಾರದಲ್ಲಿ ಸೇರಿಸಿಕೊಂಡರೆ, ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ಇದನ್ನೂ ಓದಿ-Alert! ನಿಮಗೂ ಪದೇ ಪದೇ ಆಕಳಿಕೆ ಬರುತ್ತದೆಯಾ? ಮರೆತೂ ಕೂಡ ನಿರ್ಲಕ್ಷಿಸಬೇಡಿ! ಕಾರಣ ಇಲ್ಲಿದೆ...

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News