ಬೇಸಿಗೆಯಲ್ಲಿ ಮೊಟ್ಟೆಗಳನ್ನು ತಿನ್ನಬೇಕೋ ಅಥವಾ ಬೇಡವೋ? ಇಲ್ಲಿದೆ ತಜ್ಞರ ಮಹತ್ವದ ಸಲಹೆಗಳು 

Written by - Manjunath N | Last Updated : May 9, 2024, 04:09 AM IST
  • ಸ್ವಾತಿ ಶರ್ಮಾ ಹೇಳುವ ಪ್ರಕಾರ ಮೊಟ್ಟೆಯಲ್ಲಿ ಹೆಚ್ಚಿನ ಪ್ರಮಾಣದ ಪ್ರೊಟೀನ್ ಇರುತ್ತದೆ.
  • ಇವುಗಳ ಜೀರ್ಣಕ್ರಿಯೆಗೆ ದೇಹಕ್ಕೆ ಸ್ವಲ್ಪ ಹೆಚ್ಚು ಶಕ್ತಿಯ ಅಗತ್ಯವಿರುತ್ತದೆ. ಆದರೆ ಬೇಸಿಗೆಯಲ್ಲಿ ಮೊಟ್ಟೆಗಳನ್ನು ತಿನ್ನಬಾರದು ಎಂದು ಇದರ ಅರ್ಥವಲ್ಲ.
  • ವಾಸ್ತವವಾಗಿ, ಮೊಟ್ಟೆಯಲ್ಲಿರುವ ವಿಟಮಿನ್ ಬಿ 12 ಮತ್ತು ಕೋಲೀನ್ ಮೆದುಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ
ಬೇಸಿಗೆಯಲ್ಲಿ ಮೊಟ್ಟೆಗಳನ್ನು ತಿನ್ನಬೇಕೋ ಅಥವಾ ಬೇಡವೋ? ಇಲ್ಲಿದೆ ತಜ್ಞರ ಮಹತ್ವದ ಸಲಹೆಗಳು  title=

ಬೇಸಿಗೆ ಕಾಲ ಬಂತೆಂದರೆ ಜನ ಮೊಟ್ಟೆ ತಿನ್ನುವುದನ್ನು ನಿಲ್ಲಿಸುವ ಯೋಚನೆ ಮಾಡುತ್ತಾರೆ. ಮೊಟ್ಟೆಯು ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ ಎಂದು ನಂಬಲಾಗಿದೆ, ಆದ್ದರಿಂದ ಇದನ್ನು ಬೇಸಿಗೆಯಲ್ಲಿ ಸೇವಿಸಬಾರದು ಎನ್ನುವ ಮಾತುಗಳು ಆಗಾಗ ಕೇಳಿ ಬರುತ್ತದೆ. ಹಾಗಾದರೆ ಇದು ಎಷ್ಟರ ಮಟ್ಟಿಗೆ ಸತ್ಯ ಎನ್ನುವುದನ್ನು ನಾವು ಈಗ ತಜ್ಞರ ಮೂಲಕವೇ ತಿಳಿಯೋಣ ಬನ್ನಿ.

ಈ ಕುರಿತಾಗಿ ಈಗ ಪೌಷ್ಟಿಕತಜ್ಞೆ ಡಾ.ಸ್ವಾತಿ ಶರ್ಮಾ ಮಾತನಾಡಿ, ಮೊಟ್ಟೆಯಲ್ಲಿ ಪ್ರೋಟೀನ್, ವಿಟಮಿನ್ ಮತ್ತು ಖನಿಜಾಂಶಗಳು ಹೇರಳವಾಗಿವೆ. ಇದು ಸಂಪೂರ್ಣ ಆಹಾರದ ಪ್ರಮುಖ ಭಾಗವಾಗಿದೆ. ಬೇಸಿಗೆಯಲ್ಲಿ ದೇಹವು ಪೌಷ್ಟಿಕಾಂಶದ ಕೊರತೆಯಿಂದ ಬಳಲದಂತೆ ಮೊಟ್ಟೆಗಳನ್ನು ಸೇವಿಸುವುದು ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ: KSRTC : ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ, ಮೇ 15ರಿಂದ ದಾಖಲಾತಿ ಪರಿಶೀಲನೆ

ಸ್ವಾತಿ ಶರ್ಮಾ ಹೇಳುವ ಪ್ರಕಾರ ಮೊಟ್ಟೆಯಲ್ಲಿ ಹೆಚ್ಚಿನ ಪ್ರಮಾಣದ ಪ್ರೊಟೀನ್ ಇರುತ್ತದೆ, ಇವುಗಳ ಜೀರ್ಣಕ್ರಿಯೆಗೆ ದೇಹಕ್ಕೆ ಸ್ವಲ್ಪ ಹೆಚ್ಚು ಶಕ್ತಿಯ ಅಗತ್ಯವಿರುತ್ತದೆ. ಆದರೆ ಬೇಸಿಗೆಯಲ್ಲಿ ಮೊಟ್ಟೆಗಳನ್ನು ತಿನ್ನಬಾರದು ಎಂದು ಇದರ ಅರ್ಥವಲ್ಲ. ವಾಸ್ತವವಾಗಿ, ಮೊಟ್ಟೆಯಲ್ಲಿರುವ ವಿಟಮಿನ್ ಬಿ 12 ಮತ್ತು ಕೋಲೀನ್ ಮೆದುಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ ಎಂದು ಅವರು ವಿವರಿಸುತ್ತಾರೆ. ಅಲ್ಲದೆ, ಮೊಟ್ಟೆಯಲ್ಲಿರುವ ಕಬ್ಬಿಣ ಮತ್ತು ಸತುವು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ, ಇದು ಬೇಸಿಗೆಯ ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.

ಹಾಗಾದರೆ, ಬೇಸಿಗೆಯಲ್ಲಿ ಮೊಟ್ಟೆಗಳನ್ನು ಸೇವಿಸುವುದು ಹೇಗೆ?

ಬೆಳಗಿನ ಉಪಾಹಾರಕ್ಕೆ ಬೇಯಿಸಿದ ಮೊಟ್ಟೆಯನ್ನು ಸೇವಿಸಿ. ಬೇಯಿಸಿದ ಮೊಟ್ಟೆ ಜೀರ್ಣವಾಗುವುದು ಸುಲಭ.
ಆಮ್ಲೆಟ್ ಮಾಡಿ ಆದರೆ ಕಡಿಮೆ ಎಣ್ಣೆ ಬಳಸಿ. ಇದಕ್ಕೆ ತರಕಾರಿಗಳು, ಚೀಸ್ ಅಥವಾ ಚಿಕನ್ ನಂತಹ ವಸ್ತುಗಳನ್ನು ಸೇರಿಸುವ ಮೂಲಕ ನೀವು ಆಮ್ಲೆಟ್ ಅನ್ನು ಹೆಚ್ಚು ಪೌಷ್ಟಿಕವಾಗಿಸಬಹುದು.
ಸಲಾಡ್ನಲ್ಲಿ ಮೊಟ್ಟೆಗಳನ್ನು ಸೇರಿಸಿ. ಸಲಾಡ್‌ಗೆ ಕತ್ತರಿಸಿದ ಮೊಟ್ಟೆಗಳನ್ನು ಸೇರಿಸುವುದರಿಂದ ಪ್ರೋಟೀನ್‌ನ ಪ್ರಮಾಣವು ಹೆಚ್ಚಾಗುತ್ತದೆ ಮತ್ತು ರುಚಿಕರವಾಗಿರುತ್ತದೆ.
ದಿನಕ್ಕೆ ಒಂದಕ್ಕಿಂತ ಹೆಚ್ಚು ಬಾರಿ ಮೊಟ್ಟೆಗಳನ್ನು ಸೇವಿಸಬೇಡಿ.

ಇದನ್ನೂ ಓದಿ: ಪೆನ್ ಡ್ರೈವ್ ಪ್ರಕರಣ: ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ಜೊತೆ ಚಿಟ್ ಚಾಟ್

ಸೂಚನೆ : ಆತ್ಮೀಯ ಓದುಗರೇ, ನಮ್ಮ ಸುದ್ದಿಗಳನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಯಾವುದನ್ನಾದರೂ ನೀವು ಎಲ್ಲಿಯಾದರೂ ಓದಿದ್ದರೆ, ಅದನ್ನು ಅಳವಡಿಸಿಕೊಳ್ಳುವ ಮೊದಲು ಖಂಡಿತವಾಗಿಯೂ ವೈದ್ಯರನ್ನು ಸಂಪರ್ಕಿಸಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

 

Trending News