ಖರ್ಜೂರದಲ್ಲಿ ನಾರಿನಂಶ ಅಧಿಕವಿದ್ದು, ಸುಲಭವಾಗಿ ಜೀರ್ಣವಾಗುತ್ತದೆ. ಇದು ದೇಹಕ್ಕೆ ಬೇಗನೆ ಶಕ್ತಿಯನ್ನು ತುಂಬುತ್ತದೆ.
ಪ್ರತಿದಿನ ಖರ್ಜೂರ ತಿಂದರೆ ಹೊಟ್ಟೆಯಲ್ಲಿ ಆರೋಗ್ಯಕರ ಬ್ಯಾಕ್ಟೀರಿಯಾ ಹೆಚ್ಚು ಉತ್ಪತ್ತಿಯಾಗಿ ಕರುಳಿನ ಕಾರ್ಯಕ್ಕೆ ಸಹಾಯ ಮಾಡುತ್ತದೆ.
ನಿಯಮಿತವಾಗಿ ಖರ್ಜೂರ ತಿನ್ನುವುದರಿಂದ ಕ್ಯಾನ್ಸರ್ ರಕ್ತ ಕಣಗಳು ಹರಡುವುದನ್ನು ತಡೆಗಟ್ಟಬಹುದು.
ರಾತ್ರಿ ನೀರಿನಲ್ಲಿ ಖರ್ಜೂರವನ್ನು ನೆನೆಹಾಕಿ ಬೆಳಗ್ಗೆ ಅದನ್ನು ಜ್ಯೂಸ್ ರೀತಿ ಮಾಡಿ ಕುಡಿದರೆ ಹೃದಯ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ.
ಖರ್ಜೂರದಲ್ಲಿ ಕಬ್ಬಿಣದ ಅಂಶವಿರುವುದರಿಂದ ರಕ್ತಹೀನತೆಯನ್ನು ತಡೆಗಟ್ಟಬಹುದು.
ಅಸಿಡಿಟಿ ಮತ್ತು ಹೃದಯದ ಉರಿ ಕಡಿಮೆಯಾಗಲು ಖರ್ಜೂರ ಸಹಾಯ ಮಾಡುತ್ತದೆ.
ಖರ್ಜೂರವು ಹೆರಿಗೆಯ ನಂತರ ತಾಯಿಯ ಎದೆ ಹಾಲು ಹೆಚ್ಚು ಉತ್ಪತ್ತಿ ಮಾಡುತ್ತದೆ.
ಖರ್ಜೂರ ಹಾಕಿ ಕಾಯಿಸಿದ ಹಾಲು ಮಕ್ಕಳಿಗೆ ಅತ್ಯುತ್ತಮವಾದ ಪೋಷಕಾಂಶವಾಗಿದೆ.