ದೇಹಕ್ಕೆ ನೀರು ಕಡಿಮೆಯಾದ ಕೂಡಲೇ ಮಲಬದ್ಧತೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ.
ಆಹಾರ ಕ್ರಮ, ಜೀವನಶೈಲಿ, ಒತ್ತಡ, ನಿರ್ಜಲೀಕರಣ ಮುಂತಾದವುಗಳಂದ ಮಲಬದ್ಧತೆ ಸಮಸ್ಯೆ ಉಂಟಾಗುತ್ತದೆ.
ದಿನನಿತ್ಯ ಸರಿಯಾಗಿ ನೀರು ಕುಡಿಯುವ ಅಭ್ಯಾಸ ರೂಢಿಸಿಕೊಂಡರೆ ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.
ಮಲಬದ್ಧತೆ ಸಮಸ್ಯೆಯಿಂದ ಬಳಲುವವರು ರಾತ್ರಿ ಮಲಗುವ ಮುನ್ನ 2-3 ಅಂಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು.
ರಾತ್ರಿ ನೆನೆಸಿಟ್ಟ ಕಪ್ಪು ದ್ರಾಕ್ಷಿಯನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ನಿಯಮಿತವಾಗಿ ಸೋಂಪು ಕಾಳಿನ ನೀರಿನ ಸೇವನೆಯಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.
ಬಾರ್ಲಿಯ ನೀರನ್ನು ಕುಡಿಯುವುದರಿಂದ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ.
ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ನುಗ್ಗೆ ಸೊಪ್ಪಿನ ರಸವನ್ನು ಕುದಿಸಿ ಸೇವಿಸಬೇಕು.