ಹುಬ್ಬಳ್ಳಿ: ಯಾವುದೇ ಸರಕಾರದಲ್ಲಿ ಇವರನ್ನೇ ಮುಖ್ಯಮಂತ್ರಿ ಮಾಡಿ ಅಂತಾ ಹೇಳೋದು ಮಠಾಧೀಶರ ಕೆಲಸವಲ್ಲ ಎಂದು ಕೂಡಲಸಂಗಮ ಪಂಚಮಸಾಲಿ‌ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.


COMMERCIAL BREAK
SCROLL TO CONTINUE READING

ಮುಖ್ಯಮಂತ್ರಿ ಮಾಡೋದು ಆಡಳಿತ ಪಕ್ಷದ ಶಾಸಕರ ಕೆಲಸ!
ಕಳೆದ ವಾರ ವಿಶ್ವವೊಕ್ಕಲಿಗ ಮಹಾಸಮಸ್ತಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿಂದು ಪ್ರತಿಕ್ರಿಯಿಸಿದ ಪಂಚಮಸಾಲಿ‌ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಮುಖ್ಯಮಂತ್ರಿ ಮಾಡೋದು ಆಡಳಿತ ಪಕ್ಷದ ಶಾಸಕರ ಕೆಲಸ. ಸಲಹೆ ಕೇಳಿದ್ರೆ ಸಮಾಜದ ಗುರುಗಳಾಗಿ ಸಲಹೆ ಕೊಡಬೇಕು. ಮೀಸಲಾತಿ ಪಾದಯಾತ್ರೆಯ ನಂತರ ಇವರನ್ನೇ ಮಂತ್ರಿ ಮಾಡಿ ಅಂತಾ ಹೇಳೋದು ಬಿಟ್ಟಿದ್ದೇವೆ. ನಮ್ಮ ಗುರಿಯೇನಿದ್ದರೂ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡಿಸೋದು ಎಂದರು. 


ಇದನ್ನೂ ಓದಿ- ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್


ಮರಾಠ ಮೀಸಲಾತಿ ಹೋರಾಟದಿಂದ ಸ್ಫೂರ್ತಿ: 
ಸರ್ಕಾರ ಪಂಚಮಸಾಲಿ ಸಮಾಜದ ಬೇಡಿಕೆಗೆ ಸ್ಪಂಧಿಸಿ ಮೀಸಲಾತಿ ಕೊಡುತ್ತೆ ಅನ್ನೋ  ನಂಬಿಕೆ ಇದೆ. ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಹೋರಾಟದಿಂದ ಸ್ಪೂರ್ತಿಪಡೆದು ಹೋರಾಟ ಮಾಡುತ್ತಿದ್ದೇವೆ ಎಂದವರು ಇದೇ ವೇಳೆ ತಿಳಿಸಿದರು. 


ಇದನ್ನೂ ಓದಿ- 


ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಸಿಗುವವರೆಗೆ ಹೋರಾಟ: 
ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಸಿಗುವವರೆಗೆ ಹೋರಾಟ ಮಾಡುತ್ತೇವೆ. ರಾಜ್ಯ ಸರ್ಕಾರ ಮಳೆಗಾಲದ ಅಧಿವೇಶನದಲ್ಲಿ 2A ಮೀಸಲಾತಿ ಘೋಷಿಸಬೇಕು ಎಂದು ಆಗ್ರಹಿಸದ ಅವರು ಅಧಿವೇಶನದಲ್ಲಿ ಮೀಸಲಾತಿ ಹಕ್ಕು ಪ್ರತಿಪಾದಿಸಲು ಪಂಚಮಸಾಲಿ ಸಮಾಜದ ಶಾಸಕರನ್ನು ಒತ್ತಾಯಿಸಲಾಗುವುದು. ಜುಲೈ 6ರಂದು ಹುಬ್ಬಳ್ಳಿಯಲ್ಲಿ ಪತ್ರ ಚಳುವಳಿ ನಡೆಯಲಿದೆ. ಶಾಸಕ ಎಮ್‌.ಆರ್. ಪಾಟೀಲ್, ಅರವಿಂದ ಬೆಲ್ಲದ್ ಮನೆಗೆ ಹೋಗಿ ಆಗ್ರಹ ಪತ್ರ ನೀಡಲಾಗುವುದು. ನಮ್ಮ ಶಾಸಕರು ಅಧಿವೇಶನದಲ್ಲಿ ಮೀಸಲಾತಿಗೆ ಆಗ್ರಹಿಸದೆ ಇರುವುದು ಸಮಾಜಕ್ಕೆ ನಿರಾಸೆ ಮೂಡಿಸಿದೆ ಎಂದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.