ಹೈದರಾಬಾದ್: 12ನೇ ತರಗತಿಯ ವಿದ್ಯಾರ್ಥಿಯೊಬ್ಬ ಪರೀಕ್ಷೆ ಬರೆಯುತ್ತಿರುವ ವೇಳೆಯೇ ಮೃತಪಟ್ಟ ಧಾರುಣ ಘಟನೆ ಸಿಕಂದರಾಬಾದ್ ನಲ್ಲಿ ನಡೆದಿದೆ.ಇದರಿಂದ ಸಹಪಾಠಿಗಳು ಮತ್ತು ಶಿಕ್ಷಕರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಮೃತಪಟ್ಟಿರುವ ವಿದ್ಯಾರ್ಥಿಯನ್ನು ಗೋಪಿರಾಜು(16) ಎಂದು ಗುರುತಿಸಲಾಗಿದ್ದು, ಸಿಕಂದರಾಬಾದ್ ನಲ್ಲಿನ ಶ್ರೀ ಚೈತನ್ಯ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರದಲ್ಲಿ ಏಕಾಏಕಿ  ಕುಸಿದುಬಿದ್ದಿದ್ದಾರೆ.ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸುವುದಕ್ಕೂ ಮೊದಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ


ಈ ವಿದ್ಯಾರ್ಥಿಯನ್ನು ಯಲ್ಲರೆಡ್ಡಿಗುಡಾ ಪ್ರದೇಶದಲ್ಲಿರುವ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಎನ್ನಲಾಗಿದೆ. ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.