ನವದೆಹಲಿ: ಟಿಕ್ರಿ ಗಡಿಯ ಸಮೀಪವಿರುವ ಕೃಷಿ ಕಾನೂನುಗಳ ಪ್ರತಿಭಟನಾ ಸ್ಥಳದಿಂದ ತಮ್ಮ ಮನೆಗೆ ಹಿಂದಿರುಗುತ್ತಿದ್ದ ಇಬ್ಬರು ರೈತರು ಹರಿಯಾಣದಲ್ಲಿ ತಮ್ಮ ಟ್ರ್ಯಾಕ್ಟರ್ ಟ್ರಕ್‌ಗೆ ಡಿಕ್ಕಿ ಹೊಡೆದ ನಂತರ ಶನಿವಾರದಂದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಪೊಲೀಸರ ಪ್ರಕಾರ, ಅವರು ಸವಾರಿ ಮಾಡುತ್ತಿದ್ದ ಟ್ರ್ಯಾಕ್ಟರ್-ಟ್ರೇಲರ್ ಹರಿಯಾಣದ ಹಿಸಾರ್‌ನಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಇಬ್ಬರು ರೈತರು ಸಾವನ್ನಪ್ಪಿದ್ದಾರೆ.ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಸಾವಿರಾರು ರೈತರು ಶನಿವಾರ ತಮ್ಮ ಮನೆಗಳಿಗೆ 'ವಿಜಯ ಮೆರವಣಿಗೆ' ಆರಂಭಿಸುತ್ತಿದ್ದಂತೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಿ ಗಡಿ ನಿವೇಶನಗಳನ್ನು ಖಾಲಿ ಮಾಡಿದರು.


ಇದನ್ನೂ ಓದಿ: ಕಳುವಾಗಿದ್ದ ಮರಡೋನಾ ಅವರ 20 ಲಕ್ಷ ರೂ.ಮೌಲ್ಯದ ವಾಚ್ ಅಸ್ಸಾಂನಲ್ಲಿ ವಶಕ್ಕೆ..!


ನವೆಂಬರ್ 19 ರಂದು, ಪ್ರಧಾನಿ ಮೋದಿ ಅವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದರು,ಇದಾದ ನಂತರ ಕಾನೂನು ರದ್ದತಿ ಮಸೂದೆಯನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಸಂಸತ್ತಿನಲ್ಲಿ ಮಂಡಿಸಿದರು ಇದಕ್ಕೆ ಎರಡು ಸದನಗಳು ಅಂಗೀಕರಿಸಿದವು


ಇದನ್ನೂ ಓದಿ-Alia Bhatt: ರಣಬೀರ್ ಹೆಸರು ಕೇಳಿ ಇದ್ದಕ್ಕಿದ್ದಂತೆ ನಾಚಿಕೆಪಟ್ಟ ಆಲಿಯಾ ಭಟ್..!


ನಂತರ,ಕನಿಷ್ಠ  ಬೆಂಬಲ ಬೆಲೆ ಮತ್ತು ಪ್ರತಿಭಟನಾಕಾರರ ವಿರುದ್ಧದ ಕಾನೂನು ಪ್ರಕರಣಗಳನ್ನು ಹಿಂಪಡೆಯುವುದು ಮುಂತಾದ ತಮ್ಮ ಇತರ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಲು ಸಮಿತಿಯನ್ನು ರಚಿಸಲು ಕೇಂದ್ರವು ರೈತ ಸಂಘಗಳನ್ನು ಆಹ್ವಾನಿಸಿತು.ಇದು ಘೋಷಣೆಯಾದ ನಂತರ, ಡಿಸೆಂಬರ್ 12 ರಂದು ಪ್ರತಿಭಟನೆಯನ್ನು ಕೊನೆಗೊಳಿಸಿ ನಿವೇಶನಗಳನ್ನು ತೆರವು ಮಾಡುವುದಾಗಿ ರೈತ ಮುಖಂಡರು ಘೋಷಿಸಿದರು.


ಮುಖ್ಯವಾಗಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ಕಳೆದ ವರ್ಷ ನವೆಂಬರ್ 26 ರಂದು ದೆಹಲಿಯ ಗಡಿ ಪ್ರದೇಶಗಳಲ್ಲಿ ಈಗ ರದ್ದಾದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.