ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದು 21 ಕಾರ್ಯಕರ್ತರು ಮೃತಪಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಕರುಣಾನಿಧಿಯವರು ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದು ಆಘಾತದಿಂದಾಗಿ 21 ಕಾರ್ಯಕರ್ತರು ಸಾವಿಗೀಡಾಗಿರುವುದು ಬಹಳ ದುಃಖ ತಂದಿದೆ ಎಂದಿರುವ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ. ಸ್ಟಾಲಿನ್, ಸಾವನ್ನಪ್ಪಿದ 21 ಮಂದಿ ಕಾರ್ಯಕರ್ತರ ಕುಟುಂಬಗಳಿಗೆ ಸ್ಟಾಲಿನ್ ಸಾಂತ್ವನ ಹೇಳಿದ್ದಾರೆ. ಡಿಎಂಕೆ ಮುಖ್ಯಸ್ಥರ ಅನಾರೋಗ್ಯದ ವಿಚಾರವಾಗಿ ಜನರು ಯಾವುದೇ ರೀತಿಯ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. 


ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಕರುಣಾನಿಧಿ ಅವರನ್ನು ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.