Weather Reports: ಹವಾಮಾನ ಇಲಾಖೆಯ (IMD) ಮುನ್ಸೂಚನೆಯ ಪ್ರಕಾರ, ಡಿಸೆಂಬರ್‌ 9ರಿಂದ ಜಮ್ಮು ಮತ್ತು ಕಾಶ್ಮೀರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ತಾಜಾ ಪಾಶ್ಚಾತ್ಯ ಅಡಚಣೆಯು ಪರಿಣಾಮ ಬೀರಬಹುದು. ಈ ಕಾರಣದಿಂದಾಗಿ, ಮುಂದಿನ ಎರಡು ದಿನಗಳವರೆಗೆ ಬಯಲು ಮತ್ತು ತಗ್ಗು ಪ್ರದೇಶಗಳಲ್ಲಿ ಲಘು ಹಿಮಪಾತವಾಗುವ ಸೂಚನೆ ಇದೆ ಎಂದು ಇಲಾಖೆ ಎಚ್ಚರಿಕೆಯನ್ನು ನೀಡಿದೆ, ಇನ್ನು ಎತ್ತರದ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಹಿಮಪಾತವಾಗುವ ಸಾಧ್ಯತೆ ಇದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬಾಲ್ ಕ್ಯಾಚ್ ಹಿಡಿಯಲು ಹೋಗಿ ಹಲ್ಲು ಮುರಿದುಕೊಂಡ ಆಟಗಾರ! Video ನೋಡಿ


ದೆಹಲಿಯ ಹವಾಮಾನ ವರದಿ:


ಹವಾಮಾನ ಇಲಾಖೆ ಪ್ರಕಾರ, ಇಂದು ದೆಹಲಿಯಲ್ಲಿ ಕನಿಷ್ಠ ತಾಪಮಾನ 8 ಡಿಗ್ರಿ ಮತ್ತು ಗರಿಷ್ಠ ತಾಪಮಾನ 25 ಡಿಗ್ರಿ ಇರಲಿದೆ. ಬೆಳಿಗ್ಗೆ ದೆಹಲಿಯಲ್ಲಿ ಲಘು ಮಂಜು ಆಗಿದ್ದು, ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯ (CPCB) ದತ್ತಾಂಶವು ರಾಷ್ಟ್ರೀಯ ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಕಳಪೆ ವರ್ಗದಲ್ಲಿ ಉಳಿದಿದೆ ಎಂದು ತೋರಿಸಿದೆ. ರಾಷ್ಟ್ರ ರಾಜಧಾನಿಯಲ್ಲಿನ ಗಾಳಿಯ ಗುಣಮಟ್ಟವು ಗುರುವಾರ ಸ್ವಲ್ಪ ಸುಧಾರಣೆಯೊಂದಿಗೆ 'ಕಳಪೆ' ವಿಭಾಗದಲ್ಲಿ ದಾಖಲಾಗಿದೆ. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ 8.3 ಡಿಗ್ರಿ ಸೆಲ್ಸಿಯಸ್‌ ತಲುಪಿದೆ.


ಕಾಶ್ಮೀರದಲ್ಲಿ ಹಿಮಪಾತದ ನಡುವೆ ತಾಪಮಾನವು ಶೂನ್ಯದಿಂದ ಮೈನಸ್‌ಗಿಂತ ಕಡಿಮೆಯಾಗಿದೆ. ರಾಜಸ್ಥಾನದ ಸಿಕಾರ್, ಫತೇಪುರ್ ಶೇಖಾವತಿ ಮತ್ತು ಮೌಂಟ್ ಅಬುದಲ್ಲಿ ಚಳಿ ಹೆಚ್ಚಾಗಿದೆ. ಶೇಖಾವತಿ ಪ್ರದೇಶದಲ್ಲಿ ರಾತ್ರಿ ತಾಪಮಾನ 2 ಡಿಗ್ರಿಗೆ ಕುಸಿದಿತ್ತು. ಮುಂದಿನ ಕೆಲ ದಿನಗಳವರೆಗೆ ಇದೇ ರೀತಿ ಚಳಿ ಮುಂದುವರೆಯುವ ಸಾಧ್ಯತೆಯಿದೆ.


'ಮಂಡಸ್' ಪರಿಣಾಮ:


ಡಿಸೆಂಬರ್ 9 ರ ಮಧ್ಯರಾತ್ರಿ ನೆರೆಯ ಆಂಧ್ರಪ್ರದೇಶದ ಶ್ರೀಹರಿಕೋಟಾ ಮತ್ತು ಪುದುಚೇರಿ ನಡುವೆ ಹಾದುಹೋಗುವ ಬಂಗಾಳಕೊಲ್ಲಿಯಲ್ಲಿ 'ಮಂಡೂಸ್' ಚಂಡಮಾರುತವು ರೂಪುಗೊಳ್ಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡು ಸರ್ಕಾರವು ಕಾವೇರಿ ಡೆಲ್ಟಾ ಪ್ರದೇಶದ ನಾಗಪಟ್ಟಣಂ ಮತ್ತು ತಂಜಾವೂರು, ಚೆನ್ನೈ ಮತ್ತು ಕಡಲೂರು ಸೇರಿದಂತೆ ಒಟ್ಟು 10 ಜಿಲ್ಲೆಗಳಲ್ಲಿ ಎನ್‌ಡಿಆರ್‌ಎಫ್ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ನ 400 ಸಿಬ್ಬಂದಿಯ 12 ತಂಡಗಳನ್ನು ನಿಯೋಜಿಸಿದೆ. ಈ ಪ್ರದೇಶಗಳಲ್ಲಿ ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.


ಇಂದು ಈ ಪ್ರದೇಶದಲ್ಲಿ ಭಾರೀ ಮಳೆ:


'ಮಂಡಸ್' ಚಂಡಮಾರುತವು ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಮುನ್ನಡೆದಿದೆ. ಇದು ಚೆನ್ನೈನಿಂದ ಪೂರ್ವ-ಆಗ್ನೇಯಕ್ಕೆ ಸುಮಾರು 480 ಕಿಮೀ ಮತ್ತು ಕರಿಯಾಕಲ್‌ನಿಂದ 390 ಕಿಮೀ ದೂರದಲ್ಲಿದೆ ಎಂದು ಐಎಂಡಿ ತನ್ನ ಬುಲೆಟಿನ್‌ನಲ್ಲಿ ತಿಳಿಸಿದೆ. ಚಂಡಮಾರುತದಿಂದಾಗಿ, ಡಿಸೆಂಬರ್ 9 ರಂದು ಉತ್ತರ ಕರಾವಳಿ ತಮಿಳುನಾಡು, ಪುದುಚೇರಿಯ ಕೆಲವು ಸ್ಥಳಗಳಲ್ಲಿ ಭಾರೀ ಮತ್ತು ಅತಿ ಭಾರೀ ಮಳೆಯೊಂದಿಗೆ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುತ್ತದೆ. ದಕ್ಷಿಣ ಕರಾವಳಿ ಆಂಧ್ರಪ್ರದೇಶ, ಉತ್ತರ ಒಳನಾಡಿನ ತಮಿಳುನಾಡು ಮತ್ತು ರಾಯಲಸೀಮಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದು ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸುವಾಗ ತೀವ್ರ ಚಂಡಮಾರುತವಾಗಿ ರೂಪುಗೊಳ್ಳುವ ನಿರೀಕ್ಷೆಯಿದೆ.


ಇದನ್ನೂ ಓದಿ: ಶೇ 93 ರಷ್ಟು ದೇಶದ ರಾಷ್ಟ್ರೀಯ ಸ್ಮಾರಕಗಳಿಗಿಲ್ಲ ಭದ್ರತೆ...!


ಹವಾಮಾನ ಇಲಾಖೆಯ ಬುಲೆಟಿನ್ ಪ್ರಕಾರ, "ಇದು ಡಿಸೆಂಬರ್ 9 ರ ಮಧ್ಯರಾತ್ರಿ ಸುಮಾರು 70 ಕಿಮೀ ವೇಗದಲ್ಲಿ ಗಾಳಿಯ ವೇಗದೊಂದಿಗೆ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಮತ್ತು ಉತ್ತರ ತಮಿಳುನಾಡು, ಪುದುಚೇರಿ ಮತ್ತು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯನ್ನು ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವೆ ದಾಟುವ ಸಾಧ್ಯತೆಯಿದೆ" ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.


 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.