ಮಣಿಪುರದಲ್ಲಿ ಬೆಳ್ಳಂಬೆಳಗ್ಗೆ ಬೆಚ್ಚಿ ಬೀಳಿಸಿದ ಭೂಕಂಪ; ಭಯ-ಭೀತರಾಗಿ ಮನೆಯಿಂದ ಹೊರಬಂದ ಜನ

ಮಣಿಪುರದ ಚೂರಚಂದ್ಪುರದ ಪ್ರಾಂತ್ಯದಲ್ಲಿ ಬೆಳಗ್ಗೆ 5.15ರ ಸುಮಾರಿಗೆ ಭೂಕಂಪ ಸಂಭವಿಸಿದೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.  

Last Updated : Jan 28, 2019, 07:52 AM IST
ಮಣಿಪುರದಲ್ಲಿ ಬೆಳ್ಳಂಬೆಳಗ್ಗೆ ಬೆಚ್ಚಿ ಬೀಳಿಸಿದ ಭೂಕಂಪ; ಭಯ-ಭೀತರಾಗಿ ಮನೆಯಿಂದ ಹೊರಬಂದ ಜನ  title=

ನವದೆಹಲಿ: ಸೋಮವಾರ ಬೆಳಿಗ್ಗೆ ಮಣಿಪುರದ ಚೂರಚಂದ್ಪುರ ಪ್ರದೇಶದಲ್ಲಿ ಭಾರೀ ಭೂಕಂಪ ಸಂಭವಿಸಿದೆ. ಬೆಳ್ಳಂಬೆಳಗ್ಗೆ ಬೆಚ್ಚಿ ಬೀಳಿಸಿದ ಭೂಕಂಪದಿಂದ ಭಯ ಭೀತರಾದ ಜನರು ಮನೆಗಳಿಂದ ಹೊರಬಂದಿದ್ದಾರೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.5 ಎಂದು ವರದಿಯಾಗಿದೆ.

ಮಣಿಪುರದ ಚೂರಚಂದ್ಪುರದ ಪ್ರಾಂತ್ಯದಲ್ಲಿ ಬೆಳಗ್ಗೆ 5.15ರ ಸುಮಾರಿಗೆ ಭೂಕಂಪ ಸಂಭವಿಸಿದೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದ್ದು, ಈವರೆಗೂ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.

ಭೂಕಂಪದ ಸಂದರ್ಭದಲ್ಲಿ ಏನು ಮಾಡಬೇಕು?
ಭೂಕಂಪದಂತಹ ನೈಸರ್ಗಿಕ ವಿಪತ್ತಿನಿಂದ ತಪ್ಪಿಸಿಕೊಳ್ಳುವುದು ಕಷ್ಟ ಮತ್ತು ಅದನ್ನು ತಪ್ಪಿಸಲು ಸಾಧ್ಯವಿಲ್ಲ. ಆದರೆ ಕೆಲವು ತಾರ್ಕಿಕ ಕ್ರಿಯೆಗಳನ್ನು ಬಳಸಿಕೊಂಡು ಈ ಸ್ವಾಭಾವಿಕ ಹಾನಿಗಳ ಸಮಯದಲ್ಲಿ ನಿಮ್ಮನ್ನು ನೀವು ರಕ್ಷಿಸಿಕೊಳ್ಳಬಹುದು.

- ಭೂಕಂಪದ ಸಮಯದಲ್ಲಿ ಎಲಿವೇಟರ್ ಅನ್ನು ಬಳಸಬಾರದು.
- ಹೊರಗೆ ಹೋಗಲು ಎಲಿವೇಟರ್ ಬದಲಿಗೆ ಮೆಟ್ಟಿಲುಗಳನ್ನು ಬಳಸಿ.
- ನೀವು ಎಲ್ಲೋ ಸಿಕ್ಕಿಹಾಕಿಕೊಂಡಿದ್ದರೆ ಓಡುವುದು ಸೂಕ್ತವಲ್ಲ. ಭೂಕಂಪದಿಂದಾಗಿ ಇದು ಬಹಳಷ್ಟು ಪ್ರಭಾವ ಬೀರುತ್ತದೆ.
- ನೀವು ಕಾರು ಅಥವಾ ಯಾವುದೇ ವಾಹನವನ್ನು ಚಾಲನೆ ಮಾಡುತ್ತಿದ್ದರೆ, ಅದನ್ನು ತಕ್ಷಣ ನಿಲ್ಲಿಸಿ.
- ನೀವು ಚಾಲನೆ ಮಾಡುತ್ತಿದ್ದರೆ, ಕಟ್ಟಡ, ಸ್ತಂಭಗಳು, ಫ್ಲೈಓವರ್, ರಸ್ತೆ ಸೇತುವೆಯಿಂದ ದೂರ ಸಾಗಿ ಬಳಿಕ ವಾಹನವನ್ನು ನಿಲ್ಲಿಸಿ.
- ಭೂಕಂಪದ ಅನುಭವವಾದ ತಕ್ಷಣವೇ ಸುರಕ್ಷಿತ ಮತ್ತು ತೆರೆದ ಮೈದಾನದ ಬಳಿ ಸೇರಲು ಪ್ರಯತ್ನಿಸಿ. 
- ದೊಡ್ಡ ಕಟ್ಟಡಗಳು, ಮರಗಳು, ವಿದ್ಯುತ್ ಸ್ತಂಭಗಳಿಂದ ದೂರವಿರಿ.

Trending News