Rahul Gandhi's PA  Arrested : ಕೇರಳದ ವಯನಾಡಿನಲ್ಲಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕಚೇರಿ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಾಲ್ವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರ ಆಪ್ತ ಕಾರ್ಯದರ್ಶಿ ರಿತೀಶ್ ಕುಮಾರ್ ಅವರನ್ನೂ ಪೊಲೀಸರು ಬಂಧಿಸಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ರಿತೀಶ್ ಕುಮಾರ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.


COMMERCIAL BREAK
SCROLL TO CONTINUE READING

ಏನಿದು ಪ್ರಕರಣ..!


ಜೂನ್ 24 ರಂದು ವಯನಾಡ್ ಸಂಸದ ರಾಹುಲ್ ಗಾಂಧಿಯವರ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಆ ವೇಳೆ ಸಿಪಿಎಂನ ವಿದ್ಯಾರ್ಥಿ ಘಟಕದ ಬೆಂಬಲಿಗರು ರಾಹುಲ್ ಗಾಂಧಿ ಕಚೇರಿಗೆ ಘೇರಾವ್ ಹಾಕಿದರು. ಸಂಸದರಾದ ನಂತರವೂ ವಯನಾಡು ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ಸರಿಯಾಗಿ ಮಾಡುತ್ತಿಲ್ಲ, ಅದಕ್ಕಾಗಿಯೇ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ರಾಹುಲ್ ಗಾಂಧಿ ವಿರುದ್ಧ ಆರೋಪಿಸಿದ್ದರು.


ಇದನ್ನೂ ಓದಿ : Anti-dumping duty : ಚೀನಾದ ಔಷಧಿಗಳ ಬಗ್ಗೆ ಕಠಿಣ ನಿರ್ಧಾರಕ್ಕೆ ಮುಂದಾದ ಭಾರತ ಸರ್ಕಾರ 


ಮಾರ್ಗಸೂಚಿಯಂತೆ ವಯನಾಡಿನಲ್ಲಿ ವಿಶೇಷ ಆರ್ಥಿಕ ವಲಯ ಸ್ಥಾಪನೆಯನ್ನು ಕೂಡಲೇ ಮಾಡಬೇಕು ಎಂದು ಆಗ್ರಹಿಸಲಾಯಿತು. ಪ್ರತಿಭಟನೆಯ ನಂತರ ರಾಹುಲ್ ಗಾಂಧಿ ಅವರ ವಯನಾಡ್ ಕಚೇರಿಯಿಂದ ಕೆಲವು ಫೋಟೋಗಳನ್ನು ಬಿಡುಗಡೆ ಮಾಡಲಾಗಿದ್ದು, ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಫೋಟೋ ನೆಲದ ಮೇಲೆ ಒಡೆದಿರುವುದು ಮತ್ತು ಪ್ರತಿಭಟನಾ ನಿರತ ಎಸ್‌ಎಫ್‌ಐ ಕಾರ್ಯಕರ್ತರು ಮಹಾತ್ಮ ಗಾಂಧಿಯವರ ಫೋಟೋವನ್ನು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.


ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವಿಧಾನಸಭೆಯಲ್ಲಿ ಈ ವಿಷಯದ ಕುರಿತು ಮಾತನಾಡಿದ ಕೇರಳ ಸಿಎಂ ಪೆನರಾಯ್ ವಿಜಯನ್, ಇಡೀ ಘಟನೆಯನ್ನು ಕಾಂಗ್ರೆಸ್ ಹೇಳುತ್ತಿರುವ ರೀತಿ, ನಿಜವಾಗಿಯೂ ಇಂತಹದ್ದೇನಾದರೂ ನಡೆದಿದೆಯೇ ಎಂಬ ಆತಂಕವಿದೆ ಎಂದು ಹೇಳಿದ್ದರು.


ಇದನ್ನೂ ಓದಿ : ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಸಿಸೋಡಿಯಾ ಹೆಸರು, ಅದಕ್ಕೆ ಸಿಬಿಐ ದಾಳಿ ಗಿಫ್ಟ್!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.