ಸೀತಾಪುರ: ಚಲಿಸುತ್ತಿದ್ದ ಕಾರೊಂದು ಹಸುವಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, 7 ಮಂದಿ ತೀವ್ರ ಗಾಯಗೊಂಡ ದಾರುಣ ಘಟನೆ ಉತ್ತರಪ್ರದೇಶದ ಸೀತಾಪುರ ಬಳಿಯ ಹರ್ಗಾನ್ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.


COMMERCIAL BREAK
SCROLL TO CONTINUE READING

ಶುಕ್ರವಾರ ಬೆಳಿಗ್ಗೆ ಒಂದೇ ಕುಟುಂಬದವರು ಮದುವೆ ಮುಗಿಸಿ ಎಸ್‌ಯುವಿ ಕಾರಿನಲ್ಲಿ ವಾಪಸ್ ಬರುತ್ತಿದ್ದಾಗ ಸೀತಾಪುರ-ಲಕ್ಷಿಮ್ಪುರ್ ರಸ್ತೆಯ ಬಡೆಲಿಯಾ ಗ್ರಾಮದ ಬಳಿ ಹಸುವಿಗೆ ಗುದ್ದಿ ಪಲ್ಟಿ ಹೊಡೆದ ಕಾರಣ ಕಾರಿನಲ್ಲಿದ್ದ 11 ಜನರಲ್ಲಿ ನಾಲ್ವರು ಸಾವನ್ನಪ್ಪಿದ್ದು, ಏಳು ಜನರು ಗಂಭೀರ ಗಾಯಗೊಂಡಿದ್ದಾರೆ ಎಂದು  ಹೆಚ್ಚುವರಿ ಪೋಲಿಸ್ ಅಧೀಕ್ಷಕ ಮಧುವನ್ ಕುಮಾರ್ ಸಿಂಗ್ ತಿಳಿಸಿದ್ದಾರೆ.


ಮೃತರನ್ನು ಸಾವಿತ್ರಿ(35), ಕಿರಣ್(30), ನೀತು(15) ಮತ್ತು ಮೋಹಿನಿ(14) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳಿಯರ ಸಹಾಯದಿಂದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.