ಗುಜರಾತ್‌ನ ಅರಾವಳಿಯಲ್ಲಿ ರಸ್ತೆ ಅಪಘಾತ:  ಗುಜರಾತ್‌ನ ಅರಾವಳಿ ಜಿಲ್ಲೆಯಲ್ಲಿ ಭಾರೀ ರಸ್ತೆ ಅಪಘಾತ ಸಂಭವಿಸಿದೆ.  ಅರಾವಳಿ ಮಾಲ್ಪುರದ ಕೃಷ್ಣಾಪುರ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿ ವೇಗವಾಗಿ ಬರುತ್ತಿದ್ದ ಕಾರು ಪಾದಚಾರಿಗಳ ಮೇಲೆ ಹರಿದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದೇ ವೇಳೆ 7 ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.


COMMERCIAL BREAK
SCROLL TO CONTINUE READING

ಅರಾವಳಿ ಅಪಘಾತದಲ್ಲಿ ಆರು ಜನರ ಧಾರುಣ ಸಾವು:
ರಸ್ತೆ ಅಪಘಾತದ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಘಟನೆಯಲ್ಲಿ  ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಗುರುತಿಸಲಾಗುತ್ತಿದ್ದು, ಅವರ ಕುಟುಂಬಗಳನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. 


Dawood Ibrahim : ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸುಳಿವು ನೀಡಿದ್ರೆ 25 ಲಕ್ಷ ಬಹುಮಾನ!


ಅರಾವಳಿಯಲ್ಲಿ ನಡೆದ ಈ ಭೀಕರ ಅಪಘಾತದಲ್ಲಿ ಪಾದಚಾರಿಗಳಿಗೆ ಢಿಕ್ಕಿ ಹೊಡೆದ ಕಾರಿನ ಮುಂಭಾಗ ತೀವ್ರವಾಗಿ ಜಖಂಗೊಂಡಿರುವುದು ಫೋಟೋದಲ್ಲಿ ಕಂಡು ಬಂದಿದೆ. ಕಾರಿನ ಸ್ಥಿತಿ ನೋಡಿದರೆ ಡಿಕ್ಕಿಯ ರಭಸ ಎಷ್ಟು ಭೀಕರವಾಗಿತ್ತು ಎಂಬುದನ್ನು ಊಹಿಸಬಹುದಾಗಿದೆ. 


ಇದನ್ನೂ ಓದಿ- Weather Update: ದೇಶದ ಈ ಭಾಗಗಳಲ್ಲಿ ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ ನೀಡಿದ ಐಎಂಡಿ


ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆಸಿದ್ದಾರೆ. ಈ ಅಪಘಾತದಲ್ಲಿ ಮೃತಪಟ್ಟ ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲು ಸಿದ್ಧತೆ ನಡೆಸಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು. ಬಳಿಕ ಅವರ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.