ಅತಿಸಾರ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಆರೋಗ್ಯ ತುರ್ತುಸ್ಥಿತಿ ಘೋಷಿಸಿದ ಪುದುಚೇರಿ

ತೀವ್ರವಾದ ಅತಿಸಾರ ಪ್ರಕರಣಗಳ ಹೆಚ್ಚಳದ ಮಧ್ಯೆ ಭಾನುವಾರ ಪುದುಚೇರಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯವು ಕಾರೈಕಲ್ ಪ್ರದೇಶದಲ್ಲಿ 'ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ' ಘೋಷಿಸಿತು.

Written by - Zee Kannada News Desk | Last Updated : Jul 4, 2022, 12:10 AM IST
  • ಪ್ರತಿದಿನ ಹೆಚ್ಚಿನ ಪ್ರಕರಣಗಳು ಆಸ್ಪತ್ರೆಗಳಿಗೆ ಆಗಮಿಸುತ್ತಿವೆ ಎಂದು ಆರೋಗ್ಯ ನಿರ್ದೇಶಕರು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ನಿರ್ಣಯಿಸಲು ಅಧಿಕಾರಿಗಳು ವಿಶೇಷ ವೈದ್ಯರ ತಂಡಗಳನ್ನು ರಚಿಸಿದ್ದಾರೆ.
ಅತಿಸಾರ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಆರೋಗ್ಯ ತುರ್ತುಸ್ಥಿತಿ ಘೋಷಿಸಿದ ಪುದುಚೇರಿ title=
ಸಾಂದರ್ಭಿಕ ಚಿತ್ರ

ನವದೆಹಲಿ: ತೀವ್ರವಾದ ಅತಿಸಾರ ಪ್ರಕರಣಗಳ ಹೆಚ್ಚಳದ ಮಧ್ಯೆ ಭಾನುವಾರ ಪುದುಚೇರಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯವು ಕಾರೈಕಲ್ ಪ್ರದೇಶದಲ್ಲಿ 'ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ' ಘೋಷಿಸಿತು.

ಕಳೆದ ಕೆಲವು ದಿನಗಳಿಂದ ಕೇಂದ್ರಾಡಳಿತ ಪ್ರದೇಶದ ಹೊರವಲಯದಲ್ಲಿ ಪ್ರಕರಣಗಳು ಹೊರಹೊಮ್ಮುತ್ತಿವೆ. ಹೆಚ್ಚಿನ ಸಂಖ್ಯೆಯ ಜನರು ತೀವ್ರವಾದ ಅತಿಸಾರ ಕಾಯಿಲೆಯಿಂದ ಬಳಲುತ್ತಿರುವುದು ಕಂಡುಬಂದಿದೆ. ಈ ಪ್ರದೇಶದಲ್ಲಿ ಕುಡಿಯುವ ನೀರಿನ ಮಾದರಿಗಳನ್ನು ಪರಿಶೀಲಿಸಿದಾಗ ಅದು ಬಳಕೆಗೆ ಯೋಗ್ಯವಾಗಿಲ್ಲ ಎಂದು ಕಂಡುಬಂದಿದೆ ಎಂದು ಆರೋಗ್ಯ ನಿರ್ದೇಶಕ ಜಿ ಶ್ರೀರಾಮುಲು ತಿಳಿಸಿದ್ದಾರೆ. 

ಇದನ್ನೂ ಓದಿ : Rahul Narvekar : ಮಹಾರಾಷ್ಟ್ರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ರಾಹುಲ್ ನಾರ್ವೇಕರ್ ಆಯ್ಕೆ!

ಪ್ರತಿದಿನ ಹೆಚ್ಚಿನ ಪ್ರಕರಣಗಳು ಆಸ್ಪತ್ರೆಗಳಿಗೆ ಆಗಮಿಸುತ್ತಿವೆ ಎಂದು ಆರೋಗ್ಯ ನಿರ್ದೇಶಕರು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ನಿರ್ಣಯಿಸಲು ಅಧಿಕಾರಿಗಳು ವಿಶೇಷ ವೈದ್ಯರ ತಂಡಗಳನ್ನು ರಚಿಸಿದ್ದಾರೆ.ಇಲ್ಲಿಯವರೆಗೆ, ಸುಮಾರು 700 ಜನರನ್ನು ಕಾರೈಕಲ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲವನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಪಿಡಬ್ಲ್ಯುಡಿ ಮತ್ತು ಪುರಸಭೆಗಳ ಸಮನ್ವಯದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮಗಳನ್ನು ಪ್ರಾರಂಭಿಸಲಾಗಿದೆ. ಈಗ ಪ್ರಕರಣಗಳ ಹೆಚ್ಚಳಕ್ಕೆ ಪ್ರಮುಖವಾಗಿ ಮಾಲಿನ್ಯವೇ ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ.ಇಲ್ಲಿನ ಜನರಿಗೆ ಕುದಿಸಿರುವ ನೀರನ್ನು ಮಾತ್ರ ಕುಡಿಯಲು ಸೂಚಿಸಲಾಗಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಕುದಿಸಿದ ನೀರನ್ನು ಮಾತ್ರ ಪೂರೈಸಲು ಇದೇ ರೀತಿಯ ಆದೇಶವನ್ನು ರವಾನಿಸಲಾಗಿದೆ.

ಕಾರೈಕಲ್ ಪ್ರದೇಶದಲ್ಲಿ 'ಕಾಲರಾ ಹರಡುವಿಕೆ'ಯಿಂದಾಗಿ ಪುದುಚೇರಿ ಶಿಕ್ಷಣ ನಿರ್ದೇಶಕ ರುದ್ರ ಗೌಡ್ ಸೋಮವಾರದಿಂದ ಮೂರು ದಿನಗಳ ಕಾಲ ಎಲ್ಲಾ ಶಾಲಾ-ಕಾಲೇಜುಗಳನ್ನು ಮುಚ್ಚಿದ್ದಾರೆ. ಆದಾಗ್ಯೂ, ಪಾಲಿಟೆಕ್ನಿಕ್ ಕಾಲೇಜುಗಳಿಗೆ ಬೋರ್ಡ್ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಲಾಗುವುದು ಎಂದು ನಿರ್ದೇಶಕರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News