ಬೆಂಗಳೂರು : ಮಧ್ಯರಾತ್ರಿ ವಿಧಾನಸೌಧ ನೋಡಲು ಬರುತ್ತಿದ್ದ ಸ್ನೇಹಿತರ ಬೈಕ್ ಅಪಘಾತವಾಗಿ ಓರ್ವ ಮೃತಪಟ್ಟು ಮತ್ತೋರ್ವ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ತಡರಾತ್ರಿ ಹೈಗ್ರೌಂಡ್ ಸಂಚಾರಿ ಠಾಣಾ ವ್ಯಾಪ್ತಿಯ ಸವೆನ್ ಮಿನಿಸ್ಟರ್ಸ್ ಕ್ವಾಟ್ರಸ್ ಬಳಿ ನಡೆದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Political : ಸಿದ್ದರಾಮಯ್ಯ , ಡಿಕೆಶಿ, ಖರ್ಗೆಯವರ ಮಕ್ಕಳು ಬಿಜೆಪಿ ಸೇರಲಿದ್ದಾರೆ..!


ಬೈಕ್ ನಿಯಂತ್ರಣ ತಪ್ಪಿ ಪಾದಚಾರಿ ಮಾರ್ಗಕ್ಕೆ ಡಿಕ್ಕಿಯಾದ ಪರಿಣಾಮ ರಾಜೇಶ್ ಎಂಬಾತ ಮೃತಪಟ್ಟಿದ್ದಾನೆ.ಇನ್ನೂ ಪರಶುರಾಮ್ ಎಂಬಾತ ಪಾರಾಗಿದ್ದಾನೆ. ಖಾಸಗಿ ಆಸ್ಪತ್ರೆಯಲ್ಲಿ ಎಸಿ ಟೆಕ್ನಿಶಿಯನ್ ಆಗಿದ್ದ ರಾಜೇಶ್, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿದ್ದ ಗೋವಿಂದರಾಜು, ಹಾಗೂ ಪರಶುರಾಮ ಒಂದೇ ರೂಮಿನಲ್ಲಿ ವಾಸವಿದ್ದವರು. ತಡರಾತ್ರಿ ಮದ್ಯಪಾನ ಮಾಡಿ ಬಳಿಕ ವಿಧಾನಸೌಧ ವೀಕ್ಷಿಸಲು ಬೈಕಿನಲ್ಲಿ ತೆರಳಿದ್ದರು.


ಇದನ್ನೂ ಓದಿ: ಗಾಂಧಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಸಿಎಂ ಬೊಮ್ಮಾಯಿ


ರಾಜೇಶ್ ಹಾಗೂ ಪರಶುರಾಮ್ ಒಂದು ಬೈಕಿನಲ್ಲಿದ್ದರೆ, ಗೋವಿಂದರಾಜು ಮತ್ತೊಂದು ಬೈಕಿನಲ್ಲಿದ್ದ.ರಾತ್ರಿ 2 ಗಂಟೆ ಸುಮಾರಿಗೆ ತೆರಳುತ್ತಿರುವಾಗ ಪ್ಯಾಲೇಸ್ ರಸ್ತೆಯ ಸೆವೆನ್ ಮಿನಿಸ್ಟರ್ಸ್ ಕ್ವಾರ್ಟರ್ಸ್ ಬಳಿ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಬೈಕ್ ಪಾದಚಾರಿ ಮಾರ್ಗಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸ್ನೇಹಿತರಿಬ್ಬರನ್ನ ಗೋವಿಂದರಾಜು ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾಜೇಶ್ ಸಾವನ್ನಪ್ಪಿದ್ದಾನೆ.


ಇಬ್ಬರೂ ಸಹ ಮದ್ಯಪಾನ ಮಾಡಿದ್ದು, ಹೆಲ್ಮೆಟ್ ಧರಿಸದಿರುವುದು ಅನಾಹುತಕ್ಕೆ ಕಾರಣವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಹೈಗ್ರೌಂಡ್ಸ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.