ಬೆಂಗಳೂರು: ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ನಿಲ್ದಾಣದಲ್ಲಿ ನಡೆಯುವ ಪ್ರತಿಷ್ಠಿತ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 12ನೇ ಆವೃತ್ತಿಯು, ಬೆಂಗಳೂರಿನಿಂದ ಬೇರೆ ರಾಜ್ಯಕ್ಕೆ ಸ್ಥಳಾಂತರಗೊಳ್ಳಲಿದೆ ಎಂಬ ಊಹಾಪೋಹಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಬೆಂಗಳೂರಿನಲ್ಲಿ ಈ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ನಿರ್ಮಲಾ ಸೀತಾರಾಮನ್, ಏರ್ ಶೋ ನಡೆಸುವ ಬಗ್ಗೆ ಬೇರೆ ಬೇರೆ ರಾಜ್ಯಗಳು ಮನವಿ ಸಲ್ಲಿಸಿವೆ. ಆದರೆ ಇಲ್ಲಿಯವರೆಗೆ ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.


ಏರ್ ಶೋ ಸ್ಥಳಾಂತರದ ಬಗ್ಗೆ ಇನ್ನೂ ಕೂಡ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಆದರೆ, ಈ ಮೊದಲು ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಬೆಂಗಳೂರಿನಿಂದ ಗೋವಾಗೆ ಸ್ಥಳಾಂತರಿಸಬಹುದು ಎಂದು ಸುದ್ದಿಯಾಗಿತ್ತು. ಇತ್ತೀಚೆಗೆ ಪ್ರತಿಷ್ಠಿತ ಏರೋ ಇಂಡಿಯಾ ವೈಮಾನಿಕ ಪ್ರದರ್ಶನವು ಉತ್ತರ ಪ್ರದೇಶಕ್ಕೆ ಶಿಫ್ಟ್ ಆಗಲಿದೆ ಎಂದು ಮಾಹಿತಿ ಲಭಿಸಿತ್ತು.


ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ರಕ್ಷಣಾ ಸಚಿವರು ಏರ್ ಶೋ ಸ್ಥಳಾಂತರದ ಬಗ್ಗೆ ಇದುವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಬೆಂಗಳೂರಿನಲ್ಲೇ ನಡೆಯಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.