ಉತ್ತರ ಪ್ರದೇಶ ಸರ್ಕಾರವು ಪೊಲೀಸ್ ಮತ್ತು ಸಂಬಂಧಿತ ಸೇವೆಗಳಲ್ಲಿ ನೇಮಕಾತಿ ಜಾರಿಗೆ ತಂದಿರುವ 'ಅಗ್ನಿವೀರ್' ಯೋಜನೆಗೆ ಆದ್ಯತೆ ನೀಡಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ. ಈ ಬಗ್ಗೆ ಸಿಎಂ ಆದಿತ್ಯನಾಥ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

"ಮಾತೆ ಭಾರತಿಯ ಸೇವೆಯ ನಂತರ, ಉತ್ತರ ಪ್ರದೇಶ ಸರ್ಕಾರವು ರಾಜ್ಯ ಪೊಲೀಸ್ ಮತ್ತು ಇತರ ಸಂಬಂಧಿತ ಸೇವೆಗಳಲ್ಲಿ ಅಗ್ನಿವೀರರಿಗೆ ಆದ್ಯತೆ ನೀಡಲಿದೆ. ಬಿಜೆಪಿಯ ಡಬಲ್ ಇಂಜಿನ್ ಸರ್ಕಾರವು ನಿರಂತರವಾಗಿ ಸಮರ್ಪಿತವಾಗಿದೆ. ಯುವಕರ ಸುರಕ್ಷಿತ ಭವಿಷ್ಯಕ್ಕಾಗಿ ಸಂಪೂರ್ಣವಾಗಿ ಬದ್ಧವಾಗಿದೆ. ಜೈ ಹಿಂದ್" ಎಂದು ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಈ ರೀತಿ ತುಳಸಿ ಒಣಗದಂತೆ ಕಾಪಾಡಿ, ಲಕ್ಷ್ಮೀ ನಾರಾಯಣ ಕೃಪೆಗೆ ಪಾತ್ರರಾಗಿ


ದೇಶದ ಯುವ ಶಕ್ತಿಗೆ ‘ಅಗ್ನಿವೀರ್’ ರೂಪದಲ್ಲಿ ತಾಯಿ ಭಾರತಿಯ ಸೇವೆ ಮಾಡುವ ಅವಕಾಶವನ್ನು ಒದಗಿಸಲಿರುವ ‘ಅಗ್ನಿಪಥ್ ಯೋಜನೆ’ ಭಾರತೀಯ ಸೇನಾ ಇತಿಹಾಸದಲ್ಲಿ ಸುವರ್ಣ ಅಧ್ಯಾಯವನ್ನು ರಚಿಸಲಿದೆ ಎಂದು ಮುಖ್ಯಮಂತ್ರಿ ಕಳೆದ ದಿನ ಹೇಳಿದ್ದರು. ಸಶಸ್ತ್ರ ಪಡೆಗಳ ಬಲವನ್ನು ಹೆಚ್ಚಿಸಲು ತೆಗೆದುಕೊಂಡಿರುವ ಈ ನಿರ್ಧಾರ ಶ್ಲಾಘನೀಯ.


ರಾಷ್ಟ್ರವು ಎದುರಿಸುತ್ತಿರುವ ಭವಿಷ್ಯದ ಭದ್ರತಾ ಸವಾಲುಗಳನ್ನು ಎದುರಿಸಲು, ಸರ್ಕಾರವು ಮಂಗಳವಾರ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳಲ್ಲಿ ಸೈನಿಕರ ನೇಮಕಾತಿಗಾಗಿ 'ಅಗ್ನಿಪಥ್' ಯೋಜನೆಯನ್ನು ಘೋಷಿಸಿದೆ. ದಶಕಗಳ ಹಿಂದಿನ ರಕ್ಷಣಾ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ಮಾಡಿದೆ.


ಅಗ್ನಿಪಥ್ ಯೋಜನೆಯಡಿ 17.5 ವರ್ಷದಿಂದ 21 ವರ್ಷದೊಳಗಿನ ಯುವಕರನ್ನು ಜಲ, ಭೂಮಿ ಮತ್ತು ವಾಯುಸೇನೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅವರನ್ನು 4 ವರ್ಷಗಳ ಕಾಲ ಸೇವೆಯಲ್ಲಿ ಇರಿಸಲಾಗುವುದು. 10ನೇ 12ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಯೋಜನೆಯಡಿ ಈ ವರ್ಷ ಮೂರು ಸೇವೆಗಳಲ್ಲಿ 46,000 ಸೈನಿಕರನ್ನು ನೇಮಿಸಿಕೊಳ್ಳಲಾಗುವುದು. ಇವುಗಳನ್ನು ಮೊದಲ ನಾಲ್ಕು ವರ್ಷಗಳವರೆಗೆ ಇಡಲಾಗುತ್ತದೆ. ಸೇನೆಯಲ್ಲಿ ಹುದ್ದೆ ಖಾಲಿಯಾದರೆ, ಅರ್ಹತೆಯ ಆಧಾರದ ಮೇಲೆ ಈ ಯುವಕರಲ್ಲಿ ಕೆಲವರನ್ನು ಉಳಿಸಿಕೊಳ್ಳಲಾಗುವುದು.


ಇದನ್ನೂ ಓದಿ: ಮನೆಯ ಹಿತ್ತಲದಲ್ಲಿ ಅರಳಿದ 'ರಾತ್ರಿ ರಾಣಿ': ಕತ್ತಲಲಿ ಪರಿಮಳ ಸೂಸಿ, ಮುಂಜಾನೆ ಮುದುಡಿದ ಬ್ರಹ್ಮ ಕಮಲ


ಅಗ್ನಿಪಥ್ ದೇಶಭಕ್ತಿ ಮತ್ತು ಪ್ರೇರಿತ ಯುವಕರಿಗೆ ನಾಲ್ಕು ವರ್ಷಗಳ ಅವಧಿಗೆ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡುತ್ತದೆ. ಕೇಂದ್ರ ರಕ್ಷಣಾ ಸಚಿವಾಲಯದ ಪ್ರಕಾರ, ಸಶಸ್ತ್ರ ಪಡೆಗಳ ಯುವ ಪ್ರೊಫೈಲ್ ಅನ್ನು ಸಕ್ರಿಯಗೊಳಿಸಲು ಅಗ್ನಿಪಥ್ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.