ಚೆನ್ನೈ: ತಮಿಳುನಾಡಿನ ವಿಕ್ರವಂಡಿ ಮತ್ತು ನಂಗುನೇರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಎಐಎಡಿಎಂಕೆ ಬುಧವಾರ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.


COMMERCIAL BREAK
SCROLL TO CONTINUE READING

ವಿಕ್ರವಂಡಿ ವಿಧಾನಸಭಾ ಕ್ಷೇತ್ರದಿಂದ ಎಂ.ಆರ್. ಮುಥಮಿಜ್ಸೆಲ್ವಂ ಮತ್ತು ನಂಗುನೇರಿ ಕ್ಷೇತ್ರದಿಂದ ರೆಡ್ಡಿಯಾರ್ಪಟ್ಟಿ ವಿ ನಾರಾಯಣನ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸುತ್ತಿರುವುದಾಗಿ ಎಐಎಡಿಎಂಕೆ ಘೋಷಿಸಿದೆ.


ತಮಿಳುನಾಡಿನ ಈ ಎರಡೂ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದ್ದು, ಅ.24ರಂದು ಫಲಿತಾಂಶ ಹೊರಬೀಳಲಿದೆ.


ಉಪಚುನಾವಣೆ ಬಗ್ಗೆ ಸೆ.23ರಂದು ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ನಾಮಪತ್ರ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಅಕ್ಟೋಬರ್ 1 ರಂದು ನಾಮಪತ್ರಗಳನ್ನು ಪರಿಶೀಲಿಸಲಿದ್ದು, ಅಕ್ಟೋಬರ್ 3 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.