ಅಖಿಲೇಶ್ ಯಾದವ್ ಇಂದಿನ ಔರಂಗಜೇಬ್ ಇದ್ದ ಹಾಗೆ : ಶಿವರಾಜ್ ಸಿಂಗ್ ಚೌಹಾಣ್

ಉತ್ತರ ಪ್ರದೇಶದಲ್ಲಿ ಚುನಾವಣಾ ಕಣ ಕಾವೇರಿರುವ ಬೆನ್ನಲ್ಲೇ ಈಗ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದರು.  

Written by - Zee Kannada News Desk | Last Updated : Feb 20, 2022, 08:51 PM IST
  • ಉತ್ತರ ಪ್ರದೇಶದಲ್ಲಿ ಚುನಾವಣಾ ಕಣ ಕಾವೇರಿರುವ ಬೆನ್ನಲ್ಲೇ ಈಗ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದರು.
ಅಖಿಲೇಶ್ ಯಾದವ್ ಇಂದಿನ ಔರಂಗಜೇಬ್ ಇದ್ದ ಹಾಗೆ : ಶಿವರಾಜ್ ಸಿಂಗ್ ಚೌಹಾಣ್ title=

ನವದೆಹಲಿ: ಉತ್ತರ ಪ್ರದೇಶದಲ್ಲಿ ಚುನಾವಣಾ ಕಣ ಕಾವೇರಿರುವ ಬೆನ್ನಲ್ಲೇ ಈಗ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: "ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುತ್ತಿರುವುದು ಅಸಹ್ಯ ರಾಜಕಾರಣದ ಪರಮಾವಧಿ"

 ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಚೌಹಾಣ್, ಅಖಿಲೇಶ್ ಅವರನ್ನು ಮೊಘಲ್ ದೊರೆ ಔರಂಗಜೇಬ್‌ಗೆ ಹೋಲಿಸಿ ಉತ್ತರ ಪ್ರದೇಶದ ಮಾಜಿ ಸಿಎಂ ವಿರುದ್ಧ ಹರಿಹಾಯ್ದರು. "ಅಖಿಲೇಶ್ ಇಂದಿನ ಔರಂಗಜೇಬ್, ತಮ್ಮ ತಂದೆಗೆ ನಿಷ್ಠರಾಗದವರು, ಅವರು ನಿಮಗೆ ಹೇಗೆ ನಿಷ್ಠನಾಗಿರುತ್ತಾರೆ ಹೇಳಿ ?" ಎಂದು ಚೌಹಾಣ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಬಿಜೆಪಿಯ ನಿಲುವೇನು?: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ಅಖಿಲೇಶ್ ಅವರ ಮೇಲಿನ ದಾಳಿಯನ್ನು ಮುಂದುವರಿಸುತ್ತಾ, ಚೌಹಾಣ್, "ಔರಂಗಜೇಬ್ ತಮ್ಮ ತಂದೆಯನ್ನು ಜೈಲಿಗೆ ಹಾಕಿದರು, ಅವರ ಸಹೋದರರನ್ನು ಕೊಂದರು.ಅಖಿಲೇಶ್ ಮಾಡಿದ ರೀತಿಯಲ್ಲಿ ಯಾರೂ ಅವರನ್ನು ಅವಮಾನಿಸಿಲ್ಲ ಎಂದು ಮುಲಾಯಂ ಜಿ ಹೇಳುತ್ತಾರೆ," ಎಂದು ಕಿಡಿ ಕಾರಿದ್ದಾರೆ.

ಈ ಮಧ್ಯೆ ಉತ್ತರ ಪ್ರದೇಶದಲ್ಲಿ ಮೂರನೇ ಹಂತದ ಚುನಾವಣೆ ಮುಕ್ತಾಯವಾಗಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. 16 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News