ನವದೆಹಲಿ: ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರು ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಹಿನ್ನೆಲೆಯಲ್ಲಿ ಉಗ್ರಗಾಮಿ ಸಂಘಟನೆ ಅಲ್-ಖೈದಾ ಭಾರತದ ಗುಜರಾತ್, ಉತ್ತರ ಪ್ರದೇಶ, ಮುಂಬೈ ಮತ್ತು ದೆಹಲಿಯಲ್ಲಿ ಭಯೋತ್ಪಾದಕ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸತ್ಯೇಂದ್ರ ಜೈನ್ ಮನೆ ಮೇಲೆ ED ದಾಳಿ : 2.85 ಕೋಟಿ ನಗದು, ಚಿನ್ನದ ನಾಣ್ಯ ವಶ


ದೇಶದಲ್ಲಿ ಆತ್ಮಾಹುತಿ ಬಾಂಬ್​​ ದಾಳಿ ನಡೆಸುವುದಾಗಿ ಅಲ್ ಖೈದಾ ಉಗ್ರಗಾಮಿ ಸಂಘಟನೆ ಬೆದರಿಕೆ ಹಾಕಿದೆ. ಜೂ.6 ರಂದು ಹೊರಡಿಸಿದ ತನ್ನ ಅಧಿಕೃತ ಪತ್ರದಲ್ಲಿ ಈ ಬಗ್ಗೆ ತಿಳಿಸಿದೆ. ಕೆಲ ದಿನಗಳ ಹಿಂದೆ ಪ್ರವಾದಿ ಮೊಹಮ್ಮದ್ ಪೈಗಂಬರ್‌ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. 


ಇದಕ್ಕೆ ಮುಸ್ಲಿಂ ಸಮುದಾಯದಿಂದ ತೀವ್ರ ಖಂಡನೆ ವ್ಯಕ್ತವಾಗಿತ್ತು. ಅಲ್ಲದೇ ಮುಸ್ಲಿಂ ರಾಷ್ಟ್ರಗಳು ಸಹ ಅಸಮಾಧಾನ ಹೊರ ಹಾಕಿದ್ದವು. ಬಿಜೆಪಿಯು ಭಾನುವಾರ ನೂಪುರ್ ಶರ್ಮಾ ಅವರನ್ನು ಅಮಾನತುಗೊಳಿಸಿದೆ. ಅಲ್ಲದೇ ಪ್ರವಾದಿ ಬಗೆಗಿನ ಆಕ್ಷೇಪಾರ್ಹ ಟ್ವೀಟ್‌ಗಾಗಿ ದೆಹಲಿ ಘಟಕದ ಮಾಧ್ಯಮ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಅವರನ್ನು ಬಿಜೆಪಿ ಉಚ್ಚಾಟಿಸಿದೆ. 


ಪ್ರವಾದಿ ಮೊಹಮ್ಮದ್‌ ಗೌರವಕ್ಕಾಗಿ ಆತ್ಮಾಹುತಿ ಬಾಂಬ್‌ ದಾಳಿ ನಡೆಸುವುದಾಗಿ ಅಲ್ ಖೈದಾ ಬೆದರಿಕೆ ಹಾಕಿದೆ. "ಕೇಸರಿ ಭಯೋತ್ಪಾದಕರು ಈಗ ದೆಹಲಿ, ಮುಂಬೈ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ ತಮ್ಮ ಅಂತ್ಯವನ್ನು ಕಾಯಬೇಕು" ಎಂದು ಅಲ್​ಖೈದಾ ಉಗ್ರ ಸಂಘಟನೆ ಎಚ್ಚರಿಕೆ ನೀಡಿದೆ. 


ಇದನ್ನೂ ಓದಿ: Nupur Sharma : ನೂಪುರ್ ಶರ್ಮಾಗೆ ಸಮನ್ಸ್ ನೀಡಿದ ಮುಂಬೈ ಪೊಲೀಸರು!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.