ಎಲ್ಲಾ ಸರ್ಕಾರಿ ಶಾಲೆಗಳಿಗೂ ಸಿಬಿಎಸ್‌ಇ ಮಾನ್ಯತೆ ಕೊಡಿಸಲು ಮುಂದಾದ ಈ ರಾಜ್ಯ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಸಿಬಿಎಸ್‌ಇ ಅಂಗೀಕಾರವನ್ನು ಪಡೆಯಲು ಮತ್ತು 2024 ರಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಿಬಿಎಸ್‌ಇ ಪರೀಕ್ಷೆಗಳನ್ನು ಬರೆಯುವುದನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ನಿರ್ದೇಶನ ನೀಡಿದ್ದಾರೆ.

Written by - Zee Kannada News Desk | Last Updated : Oct 12, 2021, 04:38 AM IST
  • ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಸಿಬಿಎಸ್‌ಇ ಅಂಗೀಕಾರವನ್ನು ಪಡೆಯಲು ಮತ್ತು 2024 ರಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಿಬಿಎಸ್‌ಇ ಪರೀಕ್ಷೆಗಳನ್ನು ಬರೆಯುವುದನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ನಿರ್ದೇಶನ ನೀಡಿದ್ದಾರೆ.
ಎಲ್ಲಾ ಸರ್ಕಾರಿ ಶಾಲೆಗಳಿಗೂ ಸಿಬಿಎಸ್‌ಇ ಮಾನ್ಯತೆ ಕೊಡಿಸಲು ಮುಂದಾದ ಈ ರಾಜ್ಯ  title=
ಸಾಂದರ್ಭಿಕ ಚಿತ್ರ

ನವದೆಹಲಿ: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಸಿಬಿಎಸ್‌ಇ ಅಂಗೀಕಾರವನ್ನು ಪಡೆಯಲು ಮತ್ತು 2024 ರಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಿಬಿಎಸ್‌ಇ ಪರೀಕ್ಷೆಗಳನ್ನು ಬರೆಯುವುದನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ನಿರ್ದೇಶನ ನೀಡಿದ್ದಾರೆ.

ಅಮರಾವತಿಯಲ್ಲಿನ ಕ್ಯಾಂಪ್ ಕಚೇರಿಯಲ್ಲಿ ಸೋಮವಾರ ನಡೆದ ಪರಿಶೀಲನಾ ಸಭೆಯಲ್ಲಿ, ಮುಖ್ಯಮಂತ್ರಿಗಳು ಪ್ರತಿ ಶಾಲೆಯು ಆಟದ ಮೈದಾನವನ್ನು ಹೊಂದಿರಬೇಕು ಮತ್ತು ಆಟದ ಮೈದಾನಗಳನ್ನು ಹೊಂದಿರದ ಶಾಲೆಗಳನ್ನು ನಕ್ಷೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ಆ ಶಾಲೆಗಳಿಗೆ ಆಟದ ಮೈದಾನಗಳನ್ನು ಮಂಜೂರು ಮಾಡಲು ಅಧಿಕಾರಿಗಳಿಗೆ ತಿಳಿಸಲಾಗಿದೆ.

ಸಾಂಕ್ರಾಮಿಕದ ನಂತರ ಶಾಲೆಗಳಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಗಳ ವಿವರವಾದ ವಿಮರ್ಶೆ, ಶಾಲೆಗಳಲ್ಲಿ ಕೋವಿಡ್ ತಡೆಗಟ್ಟುವ ಕ್ರಮಗಳು ಮತ್ತು ವಿದ್ಯಾರ್ಥಿಗಳ ಹಾಜರಾತಿಯನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

ಇದನ್ನೂ ಓದಿ: Coronavirus Latest Update: Corona ಮೂರನೇ ಅಲೆ , ಎರಡನೇ ಅಲೆಗಿಂತ ಹೆಚ್ಚು ವ್ಯಾಪಕವಾಗುವ ಸಾಧ್ಯತೆ, AIIMS ನಿರ್ದೇಶಕರ ಗಂಭೀರ ಎಚ್ಚರಿಕೆ

ಸರ್ಕಾರವು ಕೈಗೊಂಡಿರುವ ತಡೆಗಟ್ಟುವ ಕ್ರಮಗಳಿಂದಾಗಿ ಪ್ರಸ್ತುತ ಶಾಲೆಗಳಲ್ಲಿ COVID-19 ರ ಯಾವುದೇ ಮಹತ್ವದ ಪರಿಣಾಮವಿಲ್ಲ ಎಂದು ಅಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದರು ಮತ್ತು ಎಲ್ಲಾ ಶಿಕ್ಷಕರಿಗೆ ಲಸಿಕೆ ಹಾಕಲಾಗಿದೆ ಮತ್ತು ಶಾಲೆಗಳಿಗೆ ಹಾಜರಾಗುತ್ತಿದ್ದಾರೆ ಎಂದು ಹೇಳಿದರು.ಆಗಸ್ಟ್ ನಲ್ಲಿ ವಿದ್ಯಾರ್ಥಿಗಳ ಹಾಜರಾತಿ ಶೇ .73 ರಷ್ಟಿದ್ದರೆ, ಸೆಪ್ಟೆಂಬರ್ ನಲ್ಲಿ ಶೇ .82 ಮತ್ತು ಅಕ್ಟೋಬರ್ ಮೊದಲ ವಾರದಲ್ಲಿ ಶೇ .85 ರಷ್ಟಿತ್ತು. ಎಂದು ಮಾಹಿತಿ ನೀಡಲಾಗಿದೆ.

ಮುಖ್ಯಮಂತ್ರಿಗಳು ಕ್ರೀಡಾ ಉಡುಪುಗಳು, ಶೂಗಳು, ಶಾಲಾ ಬ್ಯಾಗ್‌ಗಳ ಗುಣಮಟ್ಟವನ್ನು ಪರಿಶೀಲಿಸಿದರು ಮತ್ತು ಅವುಗಳಲ್ಲಿ ಕೆಲವು ಬದಲಾವಣೆಗಳನ್ನು 'ಜಗನ್ ಅಣ್ಣ ವಿಧುಯಕ' ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲು ಸೂಚಿಸಿದರು.ನಿರ್ವಹಣಾ ಕೆಲಸಕ್ಕಾಗಿ ಪ್ರತಿ ಸರ್ಕಾರಿ ಶಾಲೆಗೆ 1 ಲಕ್ಷ ರೂ.ಗಳನ್ನು ಮೀಸಲಿಡಲು ಪರಿಶೀಲನಾ ಸಭೆಯಲ್ಲಿ ನಿರ್ಧರಿಸಲಾಯಿತು.

ಇದನ್ನೂ ಓದಿ: Coronavirus Update: ಕೊರೊನಾ ಪ್ರೋಟೋಕಾಲ್ ಮರೆತರೆ ಮತ್ತೆ ನಿರ್ಬಂಧಗಳು ಜಾರಿ: ಕೇಂದ್ರ

ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಸಾಮಾಜಿಕ ಲೆಕ್ಕಪರಿಶೋಧನೆಯ ಮೂಲಕ ಶಾಲೆಗಳ ಕಾರ್ಯಕ್ಷಮತೆಯ ಶ್ರೇಯಾಂಕಗಳನ್ನು ನೀಡುವ ಪ್ರಸ್ತಾವನೆಯನ್ನು ಸಹ ರೂಪಿಸಲಾಗುವುದು.ಇದಲ್ಲದೇ, ಶಿಕ್ಷಕರ ಮ್ಯಾಪಿಂಗ್ ಕೂಡ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಮತ್ತು ಪಠ್ಯಕ್ರಮವನ್ನು ಸುಧಾರಿಸಲು ವಿಷಯವಾರು ಶಿಕ್ಷಕರ ನೀತಿಯನ್ನು ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News