ಆಂಧ್ರಪ್ರದೇಶ ರೈಲ್ವೆ ದುರಂತ: ಆರು ಸಾವು, ಹಲವರಿಗೆ ಗಂಭೀರ ಗಾಯ 

ಆಂಧ್ರಪ್ರದೇಶದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದರಿಂದಾಗಿ ಪ್ಯಾಸೆಂಜರ್ ರೈಲು ಹಳಿ ತಪ್ಪಿದೆ. ಈ ಅವಘಡದಲ್ಲಿ ಆರು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Written by - Manjunath N | Last Updated : Oct 29, 2023, 10:15 PM IST
  • ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಪ್ರಕಾರ, ಅಪಘಾತ ಪರಿಹಾರ ರೈಲುಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.
  • ಆದರೆ ರೈಲ್ವೇ ಬೋರ್ಡ್ ಗ್ರೂಪ್‌ನಲ್ಲಿರುವ ಡಿಆರ್‌ಎಂ ಸೌರಭ್ ಪ್ರಸಾದ್ ರೈಲು ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ.
  • ಹಳಿ ತಪ್ಪಿದ ಘಟನೆಯ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ.
ಆಂಧ್ರಪ್ರದೇಶ ರೈಲ್ವೆ ದುರಂತ: ಆರು ಸಾವು, ಹಲವರಿಗೆ ಗಂಭೀರ ಗಾಯ  title=
ಸಾಂದರ್ಭಿಕ ಚಿತ್ರ

ನವದೆಹಲಿ: ಆಂಧ್ರಪ್ರದೇಶದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದರಿಂದಾಗಿ ಪ್ಯಾಸೆಂಜರ್ ರೈಲು ಹಳಿ ತಪ್ಪಿದೆ. ಈ ಅವಘಡದಲ್ಲಿ ಆರು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಏತನ್ಮಧ್ಯೆ, ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಎಎನ್‌ಐ ಸುದ್ದಿ ಸಂಸ್ಥೆ ಪ್ರಕಾರ, ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣಂ-ರಗ್ಡಾ ಪ್ಯಾಸೆಂಜರ್ ರೈಲು ನಡುವೆ ಡಿಕ್ಕಿ ಸಂಭವಿಸಿದೆ.ಈ ಅವಘಡದಲ್ಲಿ 3 ಬೋಗಿಗಳಿಗೆ ಹಾನಿಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಈ ಅಪಘಾತದಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಸಹಾಯಕ್ಕಾಗಿ ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲಾಗಿದೆ ಜೊತೆಗೆ ಸ್ಥಳೀಯ ಆಡಳಿತ ಮತ್ತು ಎನ್‌ಡಿಆರ್‌ಎಫ್‌ ಗೂ ಕೂಡ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ-ವರುಣ್ ತೇಜ್-ಲಾವಣ್ಯ ಲಗ್ನಪತ್ರಿಕೆ ಬೆಲೆ ಎಷ್ಟು ಗೊತ್ತಾ? ಕೇಳಿದ್ರೆ ಶಾಕ್‌ ಆಗೋದು ಗ್ಯಾರಂಟಿ!

ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಪ್ರಕಾರ, ಅಪಘಾತ ಪರಿಹಾರ ರೈಲುಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಆದರೆ ರೈಲ್ವೇ ಬೋರ್ಡ್ ಗ್ರೂಪ್‌ನಲ್ಲಿರುವ ಡಿಆರ್‌ಎಂ ಸೌರಭ್ ಪ್ರಸಾದ್ ರೈಲು ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ. ಹಳಿ ತಪ್ಪಿದ ಘಟನೆಯ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ. ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ತೆರಳಿವೆ ಎಂದು ಡಿಆರ್‌ಎಂ ತಿಳಿಸಿದ್ದಾರೆ. ಈ ಅವಘಡದಲ್ಲಿ ಆರು ಜನರು ಸಾವನ್ನಪ್ಪಿರುವ ಸುದ್ದಿಯಿದೆ. ರೈಲುಗಳ ಡಿಕ್ಕಿಯಿಂದಾಗಿ ಸ್ಥಳದಲ್ಲಿ ವಿದ್ಯುತ್ ತಂತಿಗಳು ತುಂಡಾಗಿವೆ. ಇದರಿಂದಾಗಿ ಪ್ರದೇಶ ಕತ್ತಲೆಯಲ್ಲಿ ಮುಳುಗಿತು. ರಾತ್ರಿಯಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೊಂದರೆಯಾಗಿದೆ.

ಇದನ್ನೂ ಓದಿ-'Friends' ಖ್ಯಾತಿಯ ನಟ ಮ್ಯಾಥ್ಯೂ ಪೆರ್ರಿ ಅನುಮಾನಾಸ್ಪದ ಸಾವು.!

ಈ ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಆದಾಗ್ಯೂ, ಪೂರ್ವ ಮಧ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಾರ, ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಇದೆ ಆದರೆ ಅಂತಿಮ ಅಂಕಿಅಂಶಗಳು ಇನ್ನೂ ದೃಢಪಟ್ಟಿಲ್ಲ. ಅಪಘಾತದ ಸುದ್ದಿ ತಿಳಿದ ಮುಖ್ಯಮಂತ್ರಿಗಳು ಗಾಯಗೊಂಡಿರುವ ಎಲ್ಲ ಪ್ರಯಾಣಿಕರಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News