2024ರ ಲೋಕಸಭಾ ಚುನಾವಣೆಗೆ ಮುನ್ನವೇ ಮತ್ತೊಬ್ಬ ಸೂಪರ್ ಸ್ಟಾರ್ ರಾಜಕೀಯಕ್ಕೆ ಎಂಟ್ರಿ...!

  2024ರ ಲೋಕಸಭೆ ಚುನಾವಣೆಗೂ ಮುನ್ನವೇ ದಕ್ಷಿಣದ ಮತ್ತೊಬ್ಬ ಚಿತ್ರರಂಗದ ವ್ಯಕ್ತಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

Written by - Zee Kannada News Desk | Last Updated : Feb 2, 2024, 03:13 PM IST
  • ಅಧಿಕೃತ ಹೇಳಿಕೆಯಲ್ಲಿ ಚುನಾವಣಾ ಆಯೋಗದಲ್ಲಿ ಪಕ್ಷವನ್ನು ನೋಂದಾಯಿಸಲಾಗಿದೆ ಎಂದು ಹೇಳಿದ್ದಾರೆ.
  • ಪಕ್ಷದ ಕಾರ್ಯಕಾರಿ ಸಮಿತಿಯು 2024 ರ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದೆ
  • 2026 ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಪಕ್ಷದ ಗುರಿಯಾಗಿದೆ.
 2024ರ ಲೋಕಸಭಾ ಚುನಾವಣೆಗೆ ಮುನ್ನವೇ ಮತ್ತೊಬ್ಬ ಸೂಪರ್ ಸ್ಟಾರ್ ರಾಜಕೀಯಕ್ಕೆ ಎಂಟ್ರಿ...! title=

ಚೆನ್ನೈ:  2024ರ ಲೋಕಸಭೆ ಚುನಾವಣೆಗೂ ಮುನ್ನವೇ ದಕ್ಷಿಣದ ಮತ್ತೊಬ್ಬ ಚಿತ್ರರಂಗದ ವ್ಯಕ್ತಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ನಟ ವಿಜಯ್ ಅವರು 'ತಮಿಳಗ ವೆಟ್ರಿ ಕಳಗಂ' ಎಂಬ ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ. ಆದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ. ಅವರು ಪಕ್ಷದ ಅಧ್ಯಕ್ಷರಾಗಿದ್ದು, 2026ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ನೇರವಾಗಿ ಸ್ಪರ್ಧಿಸಲಿದೆ.

ಇದನ್ನೂ ಓದಿ-ದಕ್ಷಿಣ ಭಾರತದ ತೆರಿಗೆ ಹಣದಿಂದ ಉತ್ತರ ಭಾರತದ ಅಭಿವೃದ್ಧಿಗೆ ನನ್ನದೂ ವಿರೋಧವಿದೆ- ಸಚಿವ ಸಂತೋಷ್ ಲಾಡ್ 

ವಾಸ್ತವವಾಗಿ, ದಕ್ಷಿಣ ಚಿತ್ರರಂಗದ ತಾರೆಯರು ರಾಜಕೀಯಕ್ಕೆ ಪ್ರವೇಶಿಸುವ ಟ್ರೆಂಡ್ ಸಾಕಷ್ಟು ಹಳೆಯದು.ದಳಪತಿ ವಿಜಯ್ ಅವರಿಗಿಂತ ಮುಂಚೆಯೇ, ಎಂಜಿ ರಾಮಚಂದ್ರನ್, ಜಯಲಲಿತಾ, ಎನ್‌ಟಿ ರಾಮರಾವ್, ರಜನಿಕಾಂತ್, ಕಮಲ್ ಹಾಸನ್, ಚಿರಂಜೀವಿ, ದಿವ್ಯ ಸ್ಪಂದನ್ ಮುಂತಾದವರು ರಾಜಕೀಯ ಪ್ರವೇಶಿಸಿದ್ದರು.

ಇದನ್ನೂ ಓದಿ- Political updates in Karnataka: ನಾನು ಪುಟ್ಬಾಲ್ ಅಲ್ಲ, ಯಾವುದೇ ಕಾರಣಕ್ಕೂ ಎಂಪಿ ಸ್ಥಾನಕ್ಕೆ ಸ್ಪರ್ಧೆ ಇಲ್ಲ: ಪ್ರಕಾಶ್ ಹುಕ್ಕೇರಿ

ಅಧಿಕೃತ ಹೇಳಿಕೆಯಲ್ಲಿ ನಟ ವಿಜಯ್ "ಚುನಾವಣಾ ಆಯೋಗದಲ್ಲಿ ಪಕ್ಷವನ್ನು ನೋಂದಾಯಿಸಲಾಗಿದೆ.ಪಕ್ಷದ ಕಾರ್ಯಕಾರಿ ಸಮಿತಿಯು 2024 ರ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದೆ ಅಥವಾ ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ನಾನು ತಿಳಿಸಲು ಬಯಸುತ್ತೇನೆ. 2026 ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಪಕ್ಷದ ಗುರಿಯಾಗಿದೆ.ನಾವು ಜನರಿಗೆ ರಾಜಕೀಯ ಬದಲಾವಣೆಯನ್ನು ನೀಡಲು ಬಯಸುತ್ತೇವೆ" ಎಂದು ಹೇಳಿದ್ದಾರೆ.

ರಾಜಕೀಯ ವೃತ್ತಿಯಲ್ಲ: 

ರಾಜಕೀಯ ನನಗೆ ಮತ್ತೊಂದು ವೃತ್ತಿಯಲ್ಲ. ಜನಸೇವೆ ಒಂದು ಪವಿತ್ರ ಕೆಲಸ ಅಂತ ನಾನೇ ಬಹಳ ದಿನಗಳಿಂದ ತಯಾರಿ ಮಾಡಿಕೊಳ್ಳುತ್ತಿದ್ದೆ. ರಾಜಕೀಯ ನನಗೆ ಹವ್ಯಾಸವಲ್ಲ, ಅದು ನನ್ನ ಮನದಾಳದ ಆಸೆ.ನೀವು ಪ್ರಸ್ತುತ ರಾಜಕೀಯ ವಾತಾವರಣವನ್ನು ನೋಡುತ್ತಿದ್ದೀರಿ. ಒಂದೆಡೆ ಆಡಳಿತಾತ್ಮಕ ಅವ್ಯವಹಾರ ನಡೆದರೆ ಮತ್ತೊಂದೆಡೆ ಭ್ರಷ್ಟ ರಾಜಕೀಯ ಸಂಸ್ಕೃತಿ ಬೆಳೆದಿದೆ. ವಿಭಜಕ ರಾಜಕೀಯ ಸಂಸ್ಕೃತಿಯು ನಮ್ಮ ಜನರನ್ನು ಜಾತಿ ಮತ್ತು ಧರ್ಮದ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುತ್ತಿದೆ. ಇದನ್ನು ಬದಲಾಯಿಸಬೇಕಾಗಿದೆ ಎಂದು ವಿಜಯ್ ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News