ನವದೆಹಲಿ: ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಶನಿವಾರದಂದು ಉತ್ತರ ಪ್ರದೇಶದಲ್ಲಿ ಬಾಬು ಸಿಂಗ್ ಕುಶ್ವಾಹಾ ಮತ್ತು ಭಾರತ್ ಮುಕ್ತಿ ಮೋರ್ಚಾದೊಂದಿಗೆ ತಮ್ಮ ಮೈತ್ರಿಯನ್ನು ಘೋಷಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Watch: ಉಲ್ಟಾ ಬ್ಲೌಸ್ ಧರಿಸಿ ಸುದ್ದಿಯಾದ ಬಿಗ್ ಬಾಸ್ ಒಟಿಟಿ ಖ್ಯಾತಿಯ ಉರ್ಫಿ ಜಾವೇದ್..!


ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಇಬ್ಬರು ಮುಖ್ಯಮಂತ್ರಿಗಳಾಗುತ್ತಾರೆ, ಒಬ್ಬರು ಒಬಿಸಿ ಸಮುದಾಯದವರು ಮತ್ತು ಇನ್ನೊಬ್ಬರು ದಲಿತ ಸಮುದಾಯದವರು, ಮುಸ್ಲಿಂ ಸಮುದಾಯ ಸೇರಿದಂತೆ 3 ಉಪಮುಖ್ಯಮಂತ್ರಿಗಳು ಇರುತ್ತಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಇದನ್ನೂ ಓದಿ : KL Rahul : ಸರಣಿ ಸೋಲಿನಿಂದ ಬೇಸತ್ತ ಕೆಎಲ್ ರಾಹುಲ್ : ದುಃಖದಿಂದ ಸೋಲಿಗೆ ಕಾರಣ ತಿಳಿಸಿದ ಕ್ಯಾಪ್ಟನ್


ಇದು ಬಲವಂತದಿಂದ ರಚನೆಯಾದ ಮೈತ್ರಿಯೇ ಎಂದು ಪ್ರಶ್ನಿಸಿದಾಗ, ಇದು ಬಲವಂತದ ಅಲ್ಲ, ನಾವು ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕಾಗಿ ದೀರ್ಘಕಾಲ ಕೆಲಸ ಮಾಡಿದ್ದೇವೆ ಎಂದು ಬಾಬು ಸಿಂಗ್ ಕುಶ್ವಾಹಾ ಹೇಳಿದರು.


ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ.ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.