ನವದೆಹಲಿ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರು ಒಂದು ದಿನದ ಹಿಂದೆ ತಮ್ಮ ಮೇಲೆ ನಡೆದ ದಾಳಿಯು ಪೂರ್ವ ನಿಯೋಜಿತವಾಗಿತ್ತು ಎಂದು ಹೇಳಿದ್ದಾರೆ. ಅಲ್ಲದೆ, ಈ ದಾಳಿ ಉತ್ತರ ಪ್ರದೇಶದ ಕಳಪೆ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.


COMMERCIAL BREAK
SCROLL TO CONTINUE READING

ತಮ್ಮ  ಮೇಲೆ ನಡೆದ ದಾಳಿಯ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಚಂದ್ರಶೇಖರ್‌ ಅಜಾದ್‌ ಅವರು, ಕೆಲವರು ನನ್ನ ಧ್ವನಿಯನ್ನು ಹತ್ತಿಕ್ಕಲು ಬಯಸುತ್ತಾರೆ. ಆದರೆ ನಾನು ವಕೀಲ. ನಾನು ನನ್ನ ಯುದ್ಧವನ್ನು ಸಂವಿಧಾನಾತ್ಮಕವಾಗಿ ಎದುರಿಸುತ್ತೇನೆ. ಪೊಲೀಸರು ನಿಜವಾದ ಕ್ರಮ ತೆಗೆದುಕೊಳ್ಳುತ್ತಾರೆ ಮತ್ತು [ಗುಂಡು ಹಾರಿಸಿದ ಘಟನೆಯಲ್ಲಿ] ಭಾಗಿಯಾಗಿರುವವರನ್ನು ಬಂಧಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಆಜಾದ್ ಹೇಳಿದ್ದಾರೆ.


ಇದನ್ನೂ ಓದಿ: ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ ತಮಿಳುನಾಡು ರಾಜ್ಯಪಾಲ


ನನ್ನ ಮೇಲೆ ನಡೆದ ದಾಳಿ ನಡೆಸಿ ನನ್ನನ್ನು ಕೊಂದ ನಂತರ ದಾಳಿಕೋರರು ಶರಣಾಗಲು ಬಯಸಿದ್ದರು ಎಂದು ತೋರುತ್ತದೆ. ಘಟನೆಯು ಉತ್ತರ ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯನ್ನು ತೋರಿಸುತ್ತದೆ ಎಂದು ಆಜಾದ್ ಯೋಗಿ ಸರ್ಕಾರ ವಿರುದ್ಧ ಗುಡುಗಿದ್ದಾರೆ.


ದಿಯೋಬಂದ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಭೀಮ್ ಆರ್ಮಿ ಮುಖ್ಯಸ್ಥ ಗಾಯಗೊಂಡಿದ್ದರು. ಆಜಾದ್ ಅವರ ಸೊಂಟದ ಮೇಲೆ ಗುಂಡು ಹೊಕ್ಕಿದ್ದು, ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.


ಇದನ್ನೂ ಓದಿ: 17 ನೇ ಭಾರತೀಯ ಸಹಕಾರಿ ಸಮಾವೇಶಕ್ಕೆ ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ


ಚಂದ್ರಶೇಖರ್ ಆಜಾದ್ ಅವರು ತಮ್ಮ ಬೆಂಬಲಿಗರೊಬ್ಬರ ಮನೆಯಲ್ಲಿ ನಡೆದ 'ತೆರಹವಿ' ಆಚರಣೆಯಲ್ಲಿ ಪಾಲ್ಗೊಳ್ಳಲು ದೇವಬಂದ್‌ಗೆ ತೆರಳಿದ್ದರು. ಆಜಾದ್ ತನ್ನ ಎಸ್‌ಯುವಿಯಲ್ಲಿ ಸ್ಥಳದಿಂದ ತೆರಳುತ್ತಿದ್ದಾಗ ಅವರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆದಿತ್ತು.


ಘಟನೆಯ ನಂತರ ಭೀಮ್ ಆರ್ಮಿ ಮತ್ತು ಆಜಾದ್ ಸಮಾಜ ಪಕ್ಷದ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಯಲ್ಲಿ ಜಮಾಯಿಸಿದ್ದು, ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಭೀಮ್ ಆರ್ಮಿ ಒತ್ತಾಯಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.