ನವದೆಹಲಿ: 2019 ರ ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಸಿದ್ಧತೆಗಳಲ್ಲಿ ನಿರತವಾಗಿವೆ. ಜನಸಾಮಾನ್ಯರು ಎಲ್ಲೆಡೆ ಚುನಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲೂ ಇದು ಮುಂದುವರೆದಿದೆ. ಏತನ್ಮಧ್ಯೆ, ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಟ್ವಿಟ್ಟರ್ನಲ್ಲಿ ವೀಡಿಯೊ ಒಂದನ್ನು ಹಂಚಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಮಾರ್ಚ್ 11, 2019 ರಂದು ಕಿರಣ್ ರಿಜಿಜು ಅವರ ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ವೀಡಿಯೋದಲ್ಲಿ, ಆಟೋ ಚಾಲಕರೊಬ್ಬರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಹೊಗಳಿದ್ದು, 'ಮೋದಿ ಜೀ ಕಲಿಯುಗದ ದೇವರು...' ನರೇಂದ್ರ ಮೋದಿ ಅಧಿಕಾರದಲ್ಲಿ ದೇಶ ಬಹಳ ಮುಂದುವರೆಯಲಿದೆ. ನರೇಂದ್ರ ಮೋದಿ ಅಧಿಕಾರದಲ್ಲಿರುವಾಗ ಯಾರೂ ಭಾರತವನ್ನು ಸ್ಪರ್ಶಿಸಲು ಸಾಧ್ಯವಿಲ್ಲ ಎಂದಿದ್ದಾರೆ.


ಕಿರಣ್ ರಿಜಿಜು ಅವರಿಗೂ ಮೆಚ್ಚುಗೆ:
ಆಟೋ ಚಾಲಕ ಪ್ರಧಾನಿ ಮೋದಿಯವರನ್ನು ಹೋಗಲಿರುವುದು ಮಾತ್ರವಲ್ಲದೆ ಕೇಂದ್ರ ಸಚಿವ ಕಿರಣ್ ರಿಜಿಜು ಅವರಿಗೂ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಿರಣ್ ರಿಜಿಜು ಅವರು ಬಂದ ನಂತರವೇ ರಾಷ್ಟ್ರೀಯ ಮಟ್ಟದಲ್ಲಿ ಅರುಣಾಚಲ ಪ್ರದೇಶದ ನಾಯಕರು ಗುರುತಿಸಲ್ಪಟ್ಟಿದ್ದಾರೆ ಎಂದು ವಿಡಿಯೋದಲ್ಲಿ ಆಟೋ ಚಾಲಕ ವಿಡಿಯೋದಲ್ಲಿ ಹೇಳಿದ್ದಾರೆ.