ʼಬಾಬ್ರಿ ಮಸೀದ್‌ ಜೀವಂತವಾಗಿದೆʼ ಭಾರತದಲ್ಲಿ ಕೋಮುಗಲಭೆ ಎಬ್ಬಿಸಲು ʼಪಾಕ್‌ʼ ಸಂಚು.!

Ayodhya Ram Mandir : ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮ ದೇವಾಲಯ ಉದ್ಘಾಟನೆ ಮತ್ತು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯಿತು. ಈ ದಿನ ಭಾರತೀಯ ಇತಿಹಾಸದಲ್ಲಿ ಸುರ್ವಣ ಗಳಿಗೆ. ಅಂದೇ ಎಕ್ಸ್‌ ಖಾತೆಯಲ್ಲಿ #BabriZindaHai ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಆಗಿತ್ತು.

Written by - Krishna N K | Last Updated : Jan 24, 2024, 12:49 PM IST
  • ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ.
  • ಭಾರತದಲ್ಲಿ ಕೋಮು ಉದ್ವಿಗ್ನತೆ ಎಬ್ಬಿಸಲು ಯೋಜನೆ ರೂಪಿಸಿರುವ ಪಾಕಿಸ್ತಾನದ ಷಡ್ಯಂತ್ರ ಬಯಲಾಗಿದೆ.
  • ಸೋಷಿಯಲ್‌ ಮೀಡಿಯಾದಲ್ಲಿ ಬಾಬ್ರಿ ಮಸೀದ್‌ ಕುರಿತ ಕೂಗು ಹೆಚ್ಚುತ್ತಿದೆ.
ʼಬಾಬ್ರಿ ಮಸೀದ್‌ ಜೀವಂತವಾಗಿದೆʼ ಭಾರತದಲ್ಲಿ ಕೋಮುಗಲಭೆ ಎಬ್ಬಿಸಲು ʼಪಾಕ್‌ʼ ಸಂಚು.! title=

BabriZindaHai viral : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ. ರಾಮಲಲ್ಲಾ ಮಂದಿರ ಲೋಕಾರ್ಪಣೆಗೊಳಿಸಲಾಗಿದೆ. ಹೀಗಿರುವಾಗ ಭಾರತದಲ್ಲಿ ಕೋಮು ಉದ್ವಿಗ್ನತೆ ಎಬ್ಬಿಸಲು ಯೋಜನೆ ರೂಪಿಸಿರುವ ಪಾಕಿಸ್ತಾನದ ಷಡ್ಯಂತ್ರ ಬಯಲಾಗಿದೆ. ಅಲ್ಲದೆ, ಸೋಷಿಯಲ್‌ ಮೀಡಿಯಾದಲ್ಲಿ ಬಾಬ್ರಿ ಮಸೀದ್‌ ಕುರಿತ ಕೂಗು ಹೆಚ್ಚುತ್ತಿದೆ. 

ಹೌದು.. ಜನವರಿ 22, 2024, ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮ ದೇವಾಲಯ ಉದ್ಘಾಟನೆ ಮತ್ತು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆದಿದೆ. ಈ ದಿನ ಭಾರತೀಯ ಇತಿಹಾಸದಲ್ಲಿ ಸುರ್ವಣ ಗಳಿಗೆ. ಅಂದು ಶ್ರೀರಾಮನನ್ನು ಸ್ವಾಗತಿಸಲು ಮನೆಗಳಲ್ಲಿ ದೀಪಗಳನ್ನು ಬೆಳಗಿಸಲಾಯಿತು. ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದ ಅನೇಕ ದೇಶಗಳಲ್ಲಿ ದಶರಥ ಪುತ್ರನನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. 

ಇದನ್ನೂ ಓದಿ:ರಾಮನ ಎದುರು ಭಾವುಕರಾಗಿ ಸಾಷ್ಟಾಂಗ ನಮಸ್ಕಾರ ಹಾಕಿದ ಪ್ರಧಾನಿ ಮೋದಿ‌

ಆದರೆ ನೆರೆಯ ಪಾಕಿಸ್ತಾನಕ್ಕೆ ಲಕ್ಷಾಂತರ ಭಾರತೀಯರ ಸಂತೋಷವನ್ನು ಸಹಿಸಲಾಗಲಿಲ್ಲ ಅನಿಸುತ್ತೆ. ಅದಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿ ಲಿಖಿತ ಹೇಳಿಕೆಯನ್ನು ನೀಡಿದೆ. ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿ ದೇವಾಲಯ ನಿರ್ಮಿಸಲಾಗಿದೆ ಎಂದು ಪಾಕಿಸ್ತಾನವು ಬಾಬರಿ ಮಸೀದಿ ವಿವಾದವನ್ನು ಮತ್ತೆ ಕೆಣಕಿದೆ.

ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐನ ಆಜ್ಞೆಯ ಮೇರೆಗೆ ಪ್ರಾಣ ಪ್ರತಿಷ್ಠಾಪನಾ ದಿನದಂದು ಭಾರತದಲ್ಲಿ ಹಿಂಸಾಚಾರವನ್ನು ಪ್ರಚೋದಿಸಲು ಯೋಜನೆ ರೂಪಿಸಲಾಗಿತ್ತು. ಭಾರತದಲ್ಲಿ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮುಗಲಭೆಗಳನ್ನು ಪಾಕಿಸ್ತಾನ ನಿರೀಕ್ಷಿಸಿತ್ತು. ಈ ನಿಟ್ಟಿನಲ್ಲಿ, ಸೋಮವಾರ ಬೆಳಿಗ್ಗೆಯಿಂದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ #BabriZindaHai ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಆಗಿತ್ತು.

ಇದನ್ನೂ ಓದಿ:ರಾಮ ಜನ್ಮ ಭೂಮಿಯಲ್ಲಿ ಕ್ರಿಕೆಟರ್ ಗಳು !ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಸ್ಟಾರ್ ಆಟಗಾರರು

ಈ ಪೋಸ್ಟ್‌ಗಳನ್ನು ನೋಡಿದ್ರೆ, ದೇಶದಲ್ಲಿ ಧಾರ್ಮಿಕ ಸಾಮರಸ್ಯವನ್ನು ಕದಡುವ ಸಂಚನ್ನು ರೂಪಿಸಲಾಗಿತ್ತಾ ಎನ್ನುವ ಅನುಮಾನಗಳನ್ನು ಹುಟ್ಟುಹಾಕಿದೆ. ಹಾಗಾಗಿ, #BabriZindaHai ಎಂಬ ಹ್ಯಾಶ್‌ಟ್ಯಾಗ್ ಹಿಂದೆ ಯಾರಿದ್ದಾರೆ, ನಿಜವಾದ ಉದ್ದೇಶವೇನು ಮತ್ತು ವಿಶೇಷವಾಗಿ ದೇವಾಲಯದ ತೆರೆಯುವ ದಿನದಂದೇ ಏಕೆ ಈ ರೀತಿ ಮಾಡಲಾಯಿತು..? ಎಂಬ ತನಿಖೆ ಶುರುಮಾಡಲಾಯಿತು. 

ಜನವರಿ 22 ರಂದು ಬೆಳಗ್ಗೆ 6.30ಕ್ಕೆ #BabriZindaHai ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಮೊದಲ ಪೋಸ್ಟ್ ಅನ್ನು ಪೋಸ್ಟ್ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಹ್ಯಾಶ್‌ಟ್ಯಾಗ್ ವಿಶ್ಲೇಷಕರ ಫಲಿತಾಂಶಗಳ ಪ್ರಕಾರ, #BabriZindaHai ಎಂಬ ಹ್ಯಾಶ್‌ಟ್ಯಾಗ್ ಬಳಸುವ ಶೇಕಡ 25 ಪೋಸ್ಟ್‌ಗಳು ಪಾಕಿಸ್ತಾನದಿಂದ ಬಂದಿವೆ ಎನ್ನಲಾಗಿದೆ.

ಇದನ್ನೂ ಓದಿ:ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಹೊಸ ಆಪ್ ಬಿಡುಗಡೆ ಮಾಡಿದ ಡಾ.ಸುಭಾಷ್ ಚಂದ್ರ

ಎಕ್ಸ್ ಸೈಟ್‌ನಲ್ಲಿ #BabriZindaHai ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಭಾರತದಲ್ಲಿನ ಮುಸ್ಲಿಮರ ಭಾವನೆಗಳನ್ನು ಕೆರಳಿಸುವ ಪ್ರಯತ್ನವಾಗಿ ಕಂಡುಬಂದಿದೆ. ಅದೇ ಸಮಯದಲ್ಲಿ ರಾಮಮಂದಿರ ಧ್ವಂಸವನ್ನು ಎತ್ತಿ ಹಿಡಿಯುವ ಮೂಲಕ ಹಿಂದೂಗಳನ್ನು ಪ್ರಚೋದಿಸುವ ಪಿತೂರಿಯಾಗಿ ಕಂಡುಬರುತ್ತದೆ. ಪಾಕಿಸ್ತಾನದ ಷಡ್ಯಂತ್ರ ಗೊತ್ತಿಲ್ಲದ ಅನೇಕರು ಇದನ್ನು ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News