Bharat Ratna: ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಮತ್ತು ಪಿವಿ ನರಸಿಂಹ ರಾವ್ ಅವರಿಗೆ ಅತ್ಯುನ್ನತ ನಾಗರಿಕ ಗೌರವ 'ಭಾರತ ರತ್ನ' ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೂ ಭಾರತ ರತ್ನ ನೀಡುವುದಾಗಿ ಘೋಷಿಸಲಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು 'ಎಕ್ಸ್' ನಲ್ಲಿ ಪ್ರಕಟಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: “ಕೊಹ್ಲಿ-ಅನುಷ್ಕಾ 2ನೇ ಮಗು ವಿಚಾರದಲ್ಲಿ ನಾನು ಸುಳ್ಳು ಹೇಳಿದೆ"- ಯುಟರ್ನ್ ಹೊಡೆದ ಎಬಿಡಿ


ಈ ಹಿಂದೆ ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಮತ್ತು ದೇಶದ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಈ ಗೌರವವನ್ನು ನೀಡುವುದಾಗಿ ಘೋಷಿಸಲಾಗಿದೆ. ಅಡ್ವಾಣಿ ಅವರನ್ನು ಹೊರತುಪಡಿಸಿ ಉಳಿದ ನಾಲ್ವರು ವ್ಯಕ್ತಿಗಳಿಗೆ ಮರಣೋತ್ತರವಾಗಿ ಈ ಗೌರವವನ್ನು ನೀಡಲಾಗುತ್ತಿದೆ.


“ದೇಶದ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ನಮ್ಮ ಸರ್ಕಾರದ ಸೌಭಾಗ್ಯ. ದೇಶಕ್ಕೆ ಅವರು ನೀಡಿದ ಅನುಪಮ ಕೊಡುಗೆಗೆ ಈ ಗೌರವ ಸಮರ್ಪಿಸಲಾಗಿದೆ. ಅವರು ತಮ್ಮ ಇಡೀ ಜೀವನವನ್ನು ರೈತರ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ಮುಡಿಪಾಗಿಟ್ಟಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ, ದೇಶದ ಗೃಹ ಸಚಿವರಾಗಿ ಮತ್ತು ಶಾಸಕರಾಗಿಯೂ ರಾಷ್ಟ್ರ ನಿರ್ಮಾಣಕ್ಕೆ ಉತ್ತೇಜನ ನೀಡಿದರು. ತುರ್ತು ಪರಿಸ್ಥಿತಿಯ ವಿರುದ್ಧವೂ ಅವರು ದೃಢವಾಗಿ ನಿಂತಿದ್ದರು. ನಮ್ಮ ರೈತ ಸಹೋದರ ಸಹೋದರಿಯರಿಗೆ ಅವರ ಸಮರ್ಪಣೆ ಮತ್ತು ತುರ್ತು ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವಕ್ಕೆ ಅವರ ಬದ್ಧತೆ ಇಡೀ ರಾಷ್ಟ್ರಕ್ಕೆ ಸ್ಫೂರ್ತಿದಾಯಕವಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ.


ಇದನ್ನೂ ಓದಿ: “ರವೀಂದ್ರ ಜಡೇಜಾಗೂ ನಮಗೂ ಸಂಬಂಧವಿಲ್ಲ, ಮಾತು ಬಿಟ್ಟು ವರ್ಷಗಳೇ ಕಳೆದಿವೆ”- ಜಡ್ಡು ತಂದೆಯ ಹೇಳಿಕೆ


ಪ್ರಧಾನಿ ಮೋದಿ ಅವರು ಮೂವರು ಗಣ್ಯರ ಬಗ್ಗೆ ಟ್ವೀಟ್‌ ಮೂಲಕ ಬರೆದುಕೊಂಡಿದ್ದು, ಭಾರತ ರತ್ನ ಘೋಷಣೆ ಮಾಡಿದ್ದಾರೆ.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.