ಅಗರ್ತಲಾ: ಬಿಜೆಪಿ ರಾಜ್ಯ ಅಧ್ಯಕ್ಷ ಬಿಪ್ಲಾಬ್ ಕುಮಾರ್ ದೇಬ್ ಶುಕ್ರವಾರದಂದು ತ್ರಿಪುರಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.


COMMERCIAL BREAK
SCROLL TO CONTINUE READING

ಇದೆ ಸಂದರ್ಭದಲ್ಲಿ ಜಿಷ್ಣು ದೇವ್ ಬರ್ಮನ್ ಅವರು ತ್ರಿಪುರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ತಥಾಗತ್ ರಾಯ್ ಇವರಿಗೆ ಪ್ರಮಾಣವಚನ ಭೋದಿಸಿದರು.


ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಮತ್ತು ಬಿಜೆಪಿ ಆಡಳಿತವಿರುವ  ಇತರ ರಾಜ್ಯದ ನಾಯಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.


ತ್ರಿಪುರಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಇಂಡಿಯಜಿಯಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (ಐಪಿಎಫ್ಟಿ) ಒಕ್ಕೂಟವು ಮೊದಲ ಬಾರಿಗೆ ಎಡಪಕ್ಷಗಳನ್ನು ಸೋಲಿಸಿ ಅಧಿಕಾರಕ್ಕೆ ಬಂದಿವೆ. ಒಟ್ಟು 59 ಕ್ಷೇತ್ರಗಳಲ್ಲಿ ಬಿಜೆಪಿ 35 ಸ್ಥಾನಗಳನ್ನು ಗೆಲುವು ಸಾಧಿಸಿದೆ.