ನವದೆಹಲಿ: ಪ್ರವಾದಿ ಮುಹಮ್ಮದ್ ಕುರಿತು ನೂಪುರ್ ಶರ್ಮಾ ಅವರ ಹೇಳಿಕೆಗಳ ವಿವಾದ ತೀವ್ರಗೊಳ್ಳುತ್ತಿದ್ದಂತೆ, ಅಲ್ ಖೈದಾ ಹೊರಡಿಸಿದ ಬೆದರಿಕೆಗಳನ್ನು ಉಲ್ಲೇಖಿಸಿ, ದೇಶದ ಸಾಮಾಜಿಕ ಸಾಮರಸ್ಯವನ್ನು ಕದಡುವುದಕ್ಕೆ ಪ್ರಮುಖವಾಗಿ ಭಾರತೀಯ ಜನತಾ ಪಕ್ಷವು ಹೊಣೆಯಾಗಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಬಿಜೆಪಿಯ ಮಾಜಿ ವಕ್ತಾರ ನೂಪುರ್ ಶರ್ಮಾ ಅವರು ಮಾಧ್ಯಮದ ಜೊತೆಗಿನ ಚರ್ಚೆಯೊಂದರಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಕೆಲವು ಟೀಕೆಗಳನ್ನು ಮಾಡಿದ ನಂತರ ಭಯೋತ್ಪಾದಕ ಸಂಘಟನೆ ಅಲ್ ಖೈದಾ ಇತ್ತೀಚೆಗೆ ಭಾರತದ ನಗರಗಳಾದ್ಯಂತ ಸರಣಿ ಆತ್ಮಾಹುತಿ ದಾಳಿಗಳನ್ನು ನಡೆಸುವುದಾಗಿ ಬೆದರಿಕೆ ಹಾಕಿತು.


ಇದನ್ನೂ ಓದಿ: ಹೊಂಬಾಳೆಯ ಮತ್ತೊಂದು ಅದ್ಧೂರಿ ಚಿತ್ರ... ಶ್ರೀಮುರುಳಿಯ ʻಬಘೀರʼಗೆ ಚಾಲನೆ..!


ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, “ದೇಶದಲ್ಲಿ ಎಲ್ಲವೂ ಚೆನ್ನಾಗಿದೆ, ಆದರೆ ಬಿಜೆಪಿಯ ವಕ್ತಾರರು ಎರಡು ಧರ್ಮಗಳ ನಡುವೆ ಘರ್ಷಣೆಯನ್ನು ಬಯಸುತ್ತಾರೆ.ದೇಶದಲ್ಲಿ ಏನಾದರೂ ನಡೆದರೆ ಅದಕ್ಕೆ ಬಿಜೆಪಿಯೇ ಹೊಣೆ. ನಾವು ನಮ್ಮ ಕೆಲಸವನ್ನು ಮಾಡುತ್ತೇವೆ, ಆದರೆ ಈ ಎಲ್ಲದರ ಹಿಂದೆ ಇರುವವರನ್ನು ಅವರು ಯಾವಾಗ ಗುರುತಿಸುತ್ತಾರೆ? ”ಎಂದು ಅವರು ಪ್ರಶ್ನಿಸಿದರು.


ಇದನ್ನೂ ಓದಿ: ನಟ ಕಿಚ್ಚ ಸುದೀಪ್‌ ಸಿನಿಮಾಗೆ ಆನೆಬಲ..! ‘ವಿಕ್ರಾಂತ್ ರೋಣ’ನಿಗೆ ‘ಪಿವಿಆರ್‌’ ಸಾಥ್..!‌


ನೂಪುರ್ ಶರ್ಮಾ ವಿವಾದದ ನಡುವೆಯೇ ಉಪಖಂಡದಲ್ಲಿನ ಭಯೋತ್ಪಾದಕ ಸಂಘಟನೆ ಅಲ್-ಖೈದಾ (ಎಕ್ಯೂಐಎಸ್) ಗುಜರಾತ್, ಉತ್ತರ ಪ್ರದೇಶ, ಮುಂಬೈ ಮತ್ತು ದೆಹಲಿಯಲ್ಲಿ ಆತ್ಮಾಹುತಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದೆ.ಹಲವಾರು ಗಲ್ಫ್ ರಾಷ್ಟ್ರಗಳು ಟಿವಿ ಚರ್ಚೆಯ ಸಂದರ್ಭದಲ್ಲಿ ಶರ್ಮಾ ಮಾಡಿದ ಹೇಳಿಕೆಗಳನ್ನು ಖಂಡಿಸಿವೆ.


ಇದಕ್ಕೂ ಮುನ್ನ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಪ್ರವಾದಿ ಮುಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಪಕ್ಷದಿಂದ ಅಮಾನತುಗೊಳಿಸಿತ್ತು. ಟ್ವಿಟರ್‌ನಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ಪೋಸ್ಟ್ ಮಾಡಿದ್ದಕ್ಕಾಗಿ ಬಿಜೆಪಿ ಮಾಧ್ಯಮ ಉಸ್ತುವಾರಿ ನವೀನ್ ಜಿಂದಾಲ್ ಅವರನ್ನು ಪಕ್ಷದಿಂದ ಹೊರಹಾಕಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.