ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿಕೆ
ಚುನಾವಣೆ ದೃಷ್ಟಿಯಿಂದ ಹಲವು ಬಾರಿ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಾಗುತ್ತದೆ.
ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಾವು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
ಉತ್ತರಪ್ರದೇಶದ ನಾಗಿನ ಅಥವಾ ಅಕ್ಬರ್ ಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಈ ಬಾರಿಯ ಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತಿಲ್ಲ. ಯಾವ ಸಮಯದಲ್ಲಾದರೂ ಚುನಾವಣೆಯಲ್ಲಿ ಗೆದ್ದು ಸಂಸತ್ ಸದಸ್ಯರಾಗಿ ಹೋಗಬಹುದು. ಆದರೆ, ಚುನಾವಣೆ ದೃಷ್ಟಿಯಿಂದ ಹಲವು ಬಾರಿ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದಿದ್ದಾರೆ.
ಮೂಲಗಳ ಪ್ರಕಾರ, ಎಸ್ಪಿ-ಬಿಎಸ್ಪಿ ಮೈತ್ರಿ ಕೂಟ ಒಟ್ಟಾಗಿ ಚುನಾವಣೆಯ ಎದುರಿಸುತ್ತಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರದ ಕಡೆ ಗಮನಹರಿಸಬೇಕಿರುವುದರಿಂದ ಮಾಯಾವತಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.