ನವದೆಹಲಿ: ಸಂಸತ್ತಿನ ಬಜೆಟ್(BUDGET)  ಅಧಿವೇಶನ ಶುಕ್ರವಾರ (ಜನವರಿ 31) ಆರಂಭವಾಗಲಿದೆ. ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್(Nirmala Sitharaman) ಅವರು 2019-20ರ ಆರ್ಥಿಕ ಸಮೀಕ್ಷೆಯನ್ನು ಸದನದಲ್ಲಿ ಮಂಡಿಸಲಿದ್ದಾರೆ. ಶನಿವಾರ ಲೋಕಸಭೆಯಲ್ಲಿ ಬಜೆಟ್ ಮಂಡಿಸಲಾಗುವುದು.


COMMERCIAL BREAK
SCROLL TO CONTINUE READING

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬೆಳಿಗ್ಗೆ 11 ಗಂಟೆಗೆ ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ಭಾಷಣ ಮಾಡಲಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ರಾಜ್ಯಸಭೆಯ ನಾಯಕರ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಅಧಿವೇಶನದ ಮೊದಲ ಹಂತವು ಫೆಬ್ರವರಿ 11 ರಂದು ಮುಕ್ತಾಯಗೊಳ್ಳಲಿದ್ದು, ಅಧಿವೇಶನದ ಎರಡನೇ ಭಾಗವು ಮಾರ್ಚ್ 2 ರಿಂದ ಪ್ರಾರಂಭವಾಗಿ ಏಪ್ರಿಲ್ 3 ಕ್ಕೆ ಕೊನೆಗೊಳ್ಳಲಿದೆ.


ಬಜೆಟ್ ಅಧಿವೇಶನದ ಮುನ್ನ, ಕೇಂದ್ರ ಸರ್ಕಾರವು ಗುರುವಾರ ಸರ್ವಪಕ್ಷ ಸಭೆ ಕರೆಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ, ಹಿರಿಯ ಮಂತ್ರಿಗಳಾದ ಆನಂದ್ ಶರ್ಮಾ ಮತ್ತು ಕಾಂಗ್ರೆಸ್ ನ ಗುಲಾಮ್ ನಬಿ ಆಜಾದ್ ಮತ್ತು ಟಿಎಂಸಿಯ ಸುದೀಪ್ ಬಂಡೋಪಾಧ್ಯಾಯ, ಇತರ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.


ಕೇಂದ್ರ ಬಜೆಟ್‌ನ ಇತಿಹಾಸ ಏನು? ಬಜೆಟ್‌ಗೆ ಸಂಬಂಧಿಸಿದ ಆಸಕ್ತಿದಾಯಕ ವಿಷಯಗಳಿವು!


ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಸರ್ಕಾರ ಎಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ ಮುಕ್ತವಾಗಿದೆ ಮತ್ತು ಆರ್ಥಿಕ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕು ಎಂಬ ಸಂಸದರ ಬೇಡಿಕೆಗೆ ಒಪ್ಪಿಗೆ ಸೂಚಿಸಿದೆ ಎಂದು ಪ್ರಧಾನಿ ಹೇಳಿದರು. ಬಜೆಟ್ ಅಧಿವೇಶನದ ಮುನ್ನಾದಿನದಂದು ನಡೆದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ, ಅಧಿವೇಶನವು ದೇಶದ ಚಾಲ್ತಿಯಲ್ಲಿರುವ ಆರ್ಥಿಕ ಪರಿಸ್ಥಿತಿಗಳ ಬಗ್ಗೆ ಗಮನಹರಿಸಬೇಕು ಎಂಬ ಹೆಚ್ಚಿನ ಸದಸ್ಯರ ಸಲಹೆಗಳನ್ನು ಸ್ವಾಗತಿಸಿದರು.


"ಹೆಚ್ಚಿನ ಸದಸ್ಯರು ದೇಶಕ್ಕೆ ಸಂಬಂಧಿಸಿದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಚರ್ಚೆಯನ್ನು ಕೇಳಿದ್ದಾರೆ. ನಾನು ಇದನ್ನು ಸ್ವಾಗತಿಸುತ್ತೇನೆ ಮತ್ತು ನೀವೆಲ್ಲರೂ ಸೂಚಿಸಿದಂತೆ ನಾವು ಆರ್ಥಿಕ ವಿಷಯಗಳ ಬಗ್ಗೆ ಚರ್ಚಿಸಬೇಕಾಗಿದೆ" ಎಂದು ಪ್ರಧಾನಿ ಸದಸ್ಯರನ್ನು ಒತ್ತಾಯಿಸುತ್ತಾ ದೇಶದಿಂದ ದೇಶವು ಹೇಗೆ ಲಾಭ ಗಳಿಸಬಹುದು ಎಂಬುದನ್ನು ನೋಡಬೇಕು ಎಂದು ಕರೆ ನೀಡಿದರು.


ಭಾರತೀಯ ಜನತಾ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ಮಧ್ಯಾಹ್ನ 2 ಗಂಟೆಗೆ ಸಂಸತ್ತಿನ ಗ್ರಂಥಾಲಯದಲ್ಲಿ ನಡೆಯಲಿದ್ದು, ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟ (ಎನ್‌ಡಿಎ) ಸಭೆ ಇಂದು ಮಧ್ಯಾಹ್ನ 3: 30 ಕ್ಕೆ ಸಂಸತ್ತಿನ ಗ್ರಂಥಾಲಯದಲ್ಲಿ ನಡೆಯಲಿದೆ.


ವಿಶೇಷವೆಂದರೆ, ತಿದ್ದುಪಡಿ ಮಾಡಿದ ಪೌರತ್ವ ಕಾನೂನು ಸೇರಿದಂತೆ ಸರ್ಕಾರದ ಪೌರತ್ವ ಕ್ರಮಗಳ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳ ನಡುವೆ ಬಜೆಟ್ ಅಧಿವೇಶನ ನಡೆಯುತ್ತಿದೆ, ವಿರೋಧ ಪಕ್ಷಗಳು ನರೇಂದ್ರ ಮೋದಿ ಸರ್ಕಾರದ ವಿರುದ್ಧ ದಾಳಿ ನಡೆಸಲು ಒಗ್ಗೂಡಿವೆ.