ವಾರ್ದಾ : ಮಹಾರಾಷ್ಟ್ರದ ವಾರ್ದಾದಲ್ಲಿ ಭೀಕರ ಅಪಘಾತ (Wardha accident) ಸಂಭವಿಸಿದೆ. ಕಾರು ಸೇತುವೆಯಿಂದ  ಉರುಳಿ ಬಿದ್ದಿದ್ದು, ಅಪಘಾತದಲ್ಲಿ ಬಿಜೆಪಿ ಶಾಸಕ ವಿಜಯ್ ರಹಂಗ್‌ಡೇಲ್ (Vijay Rahangdale) ಪುತ್ರ, ಆವಿಷ್ಕರ್ ರಹಂಗ್‌ಡೇಲ್ (Avishkar Rahangdale) ಸೇರಿದಂತೆ 7 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.


COMMERCIAL BREAK
SCROLL TO CONTINUE READING

ವಾರ್ಧಾದ ಸೆಲ್ಸೂರ ಬಳಿ ನಿನ್ನೆ ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಬಿಜೆಪಿ ಶಾಸಕ ವಿಜಯ್ ರಹಂಗ್‌ಡೇಲ್ (Vijay Rahangdale) ಪುತ್ರ, ಆವಿಷ್ಕರ್ ರಹಂಗ್‌ಡೇಲ್ (Avishkar Rahangdale) ಸೇರಿದಂತೆ 7 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ವಾರ್ಧಾ ಎಸ್ಪಿ ಪ್ರಶಾಂತ್ ಹೋಳ್ಕರ್ ಈ ವಿಷಯ ಸ್ಪಷ್ಟಪಡಿಸಿದ್ದಾರೆ. ಮೃತರು ವಾರ್ಧಾಗೆ ತೆರಳುತ್ತಿದ್ದ ವೇಳೆ, ಮಾರ್ಗಮಧ್ಯೆ ಅವರ ಕಾರು ಸೇತುವೆಯಿಂದ (Car Accident) ಕೆಳಗೆ ಬಿದ್ದಿದೆ ಎಂದು ಅವರು ತಿಳಿಸಿದ್ದಾರೆ. 


7th Pay Commission : ಕೇಂದ್ರ ನೌಕರರ ವೇತನದಲ್ಲಿ ಮತ್ತೆ ₹20,484 ಹೆಚ್ಚಳ! ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ ನೋಡಿ


ವಿಜಯ್ ರಹಂಗ್‌ಡೇಲ್ (Vijay Rahangdale) ಅವರು, ಮಹಾರಾಷ್ಟ್ರದ ತಿರೋಡಾ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿದ್ದಾರೆ. ಸೇತುವೆಯಿಂದ ಬಿದ್ದ ವಾಹನದಲ್ಲಿ ಶಾಸಕ ವಿಜಯ್ ರಹಂಗ್‌ಡೇಲ್ ಅವರ ಪುತ್ರ ಮತ್ತು ೬ ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಈ ಕಾರಿನಲ್ಲಿದ್ದ ಏಳು ಮಂದಿ ಮೃತ ಪಟ್ಟಿದ್ದಾರೆ.  ಆವಿಷ್ಕರ್ ರಹಂಗ್‌ಡೇಲ್ ಕೂಡಾ ವೈದ್ಯಕೀಯ ವಿದ್ಯಾರ್ಥಿಯಾಗಿದ್ದರು. 


ಮಹಾರಾಷ್ಟ್ರದ (Maharastra) ವಾರ್ಧಾದಲ್ಲಿ ಸಂಭವಿಸಿದ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.


ಇದನ್ನೂ ಓದಿ : ಮದುವೆಯಲ್ಲಿ ಡ್ಯಾನ್ಸ್ ಮಾಡಿದ ವಧು: ಕಪಾಳಕ್ಕೆ ಭಾರಿಸಿದ ಭಾವಿ ಗಂಡ!, ಆಮೇಲೇನಾಯ್ತು?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.