ಜಾತಿ ಆಧಾರಿತ ಜನಗಣತಿ ಪರ ಬಿಹಾರ ಸಿಎಂ ನಿತೀಶ್ ಕುಮಾರ್ ಬ್ಯಾಟಿಂಗ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಳೆ ದೆಹಲಿಗೆ ಭೇಟಿ ನೀಡಲಿದ್ದು, ಜಾತಿ ಆಧಾರಿತ ಜನಗಣತಿಗೆ ಒತ್ತಾಯಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಅವರು 10 ಸದಸ್ಯರ ನಿಯೋಗವನ್ನು ಮುನ್ನಡೆಸಲಿದ್ದಾರೆ.

Written by - Zee Kannada News Desk | Last Updated : Aug 22, 2021, 02:51 PM IST
  • ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಳೆ ದೆಹಲಿಗೆ ಭೇಟಿ ನೀಡಲಿದ್ದು, ಜಾತಿ ಆಧಾರಿತ ಜನಗಣತಿಗೆ ಒತ್ತಾಯಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.
  • ಅವರು 10 ಸದಸ್ಯರ ನಿಯೋಗವನ್ನು ಮುನ್ನಡೆಸಲಿದ್ದಾರೆ.
ಜಾತಿ ಆಧಾರಿತ ಜನಗಣತಿ ಪರ ಬಿಹಾರ ಸಿಎಂ ನಿತೀಶ್ ಕುಮಾರ್ ಬ್ಯಾಟಿಂಗ್  title=
ಸಂಗ್ರಹ ಚಿತ್ರ

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಳೆ ದೆಹಲಿಗೆ ಭೇಟಿ ನೀಡಲಿದ್ದು, ಜಾತಿ ಆಧಾರಿತ ಜನಗಣತಿಗೆ ಒತ್ತಾಯಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಅವರು 10 ಸದಸ್ಯರ ನಿಯೋಗವನ್ನು ಮುನ್ನಡೆಸಲಿದ್ದಾರೆ.

ಇದನ್ನೂ ಓದಿ: ಮೇವು ಹಗರಣ: ನಿತೀಶ್ ಕುಮಾರ್ ಲಾಲೂ ಯಾದವ್ರನ್ನು ಇದರಲ್ಲಿ ಸಿಲುಕಿಸಿದ್ದಾರೆ- ತೇಜಸ್ವಿ ಯಾದವ್

"ಕೆಲವರು ಈಗಾಗಲೇ ದೆಹಲಿಯನ್ನು ತಲುಪಿದ್ದಾರೆ ಮತ್ತು ಕೆಲವರು ನನ್ನೊಂದಿಗೆ ಹೋಗುತ್ತಾರೆ. ನಾಳೆ ನಾವು 11 ಗಂಟೆಗೆ ಭೇಟಿಯಾಗುತ್ತೇವೆ" ಎಂದು ನಿತೀಶ್ ಕುಮಾರ್ (Nitish Kumar) ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.'ಸಮಸ್ಯೆಯನ್ನು ನಾಳೆ ಪರಿಹರಿಸಲಾಗುತ್ತದೆಯೇ ಎಂದು ಕೇಳಿದಾಗ, "ನಾವು ನೋಡುತ್ತೇವೆ" ಎಂದು ಹೇಳಿದರು.

ಇದನ್ನೂ ಓದಿ: ಕೋಮುಗಲಭೆ ವಿಚಾರವಾಗಿ ಬಿಜೆಪಿಗೆ ಎಚ್ಚರಿಕೆ ನೀಡಿದ ನಿತೀಶ್ ಕುಮಾರ್

"ಇದು ಒಂದು ನಿರ್ಣಾಯಕ ವಿಷಯವಾಗಿದೆ ಮತ್ತು ನಾವು ಇದನ್ನು ಬಹಳ ಸಮಯದಿಂದ ಹುಡುಕುತ್ತಿದ್ದೆವು. ಅದು ಕಾರ್ಯರೂಪಕ್ಕೆ ಬಂದರೆ, ಅದಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲ. ಮೇಲಾಗಿ, ಇದು ಬಿಹಾರಕ್ಕೆ ಮಾತ್ರವಲ್ಲ, ಇಡೀ ದೇಶದ ಜನರು ಇದರಿಂದ ಪ್ರಯೋಜನ ಪಡೆಯುತ್ತಾರೆ. ಒಮ್ಮೆಯಾದರೂ ಮಾಡಬೇಕು. ನಾವು ಈ ದೃಷ್ಟಿಕೋನದಿಂದ ನಮ್ಮ ಅಭಿಪ್ರಾಯಗಳನ್ನು ಮಂಡಿಸುತ್ತೇವೆ, "ಎಂದು ಅವರು ಹೇಳಿದರು.

ಪ್ರತಿಯೊಬ್ಬರ ಹಿತಾಸಕ್ತಿ ಮತ್ತು ಜಾತಿ ಗಣತಿಯು ಜನರ ಗುಂಪನ್ನು ಅಸಮಾಧಾನಗೊಳಿಸುತ್ತದೆ ಎಂಬ ಕಳವಳವು ಆಧಾರರಹಿತವಾಗಿದೆ ಎಂದು  ನಿತೀಶ್ ಕುಮಾರ್ ಈ ಹಿಂದೆ ಹಲವಾರು ಬಾರಿ ಹೇಳಿದ್ದರು.

ಇದನ್ನೂ ಓದಿ: 'ನಿತೀಶ್ ಕುಮಾರ್ ಆಡಳಿತ ಅಂತ್ಯಕಾಣುವ ಸಮಯ ಬಂದಿದೆ'- ಲಾಲೂ ಪ್ರಸಾದ್ ಯಾದವ್

"ಜಾತಿ ಗಣತಿ ಮಾಡುವುದು ಕೇಂದ್ರಕ್ಕೆ ಬಿಟ್ಟದ್ದು...ನಮ್ಮ ಕೆಲಸ ನಮ್ಮ ಅಭಿಪ್ರಾಯಗಳನ್ನು ತಿಳಿಸುವುದು.ಒಂದು ಜಾತಿಯವರು ಇಷ್ಟಪಡುತ್ತಾರೆ ಮತ್ತು ಇನ್ನೊಂದು ಜಾತಿಯವರು ಇಷ್ಟಪಡುವುದಿಲ್ಲ ಎಂದು ಭಾವಿಸಬೇಡಿ...ಇದು ಎಲ್ಲರ ಹಿತಾಸಕ್ತಿ" ಎಂದು ಸುದ್ದಿಗಾರರಿಗೆ ಹೇಳಿದರು.

ನಿತೀಶ್ ಕುಮಾರ್ ಮಾತ್ರವಲ್ಲ, ಹಲವಾರು ಬಿಹಾರ ನಾಯಕರು, ಪಕ್ಷದ ವ್ಯಾಪ್ತಿಯನ್ನು ಮೀರಿ, ಜಾತಿ ಆಧಾರಿತ ಜನಗಣತಿಗೆ ಒತ್ತಾಯಿಸಿದ್ದಾರೆ, ಇದು ಬ್ರಿಟಿಷರ ಕಾಲದಿಂದ ಭಾರತದಲ್ಲಿ  ಇದುವರೆಗೆ ನಡೆದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News