ಶಿವಸೇನೆಯ 15 ಬಂಡಾಯ ಶಾಸಕರಿಗೆ ಕೇಂದ್ರದಿಂದ Y+ ಭದ್ರತೆ!

ಇನ್ನೊಂದೆಡೆ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ತಾರಕಕ್ಕೇರುತ್ತಿದ್ದು, ಇದರ ಪರಿಣಾಮವಾಗಿ ಯಾವುದೇ ಅಹಿತರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಮುಂಬೈ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಜುಲೈ 10ರವರೆಗೆ 144 ಸೆಕ್ಷನ್‌ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. 

Written by - Bhavishya Shetty | Last Updated : Jun 26, 2022, 02:12 PM IST
  • ಶಿವಸೇನೆಯ ಬಂಡಾಯ ಶಾಸಕರಿಗೆ Y+ ಭದ್ರತೆ
  • ಕೇಂದ್ರ ಸರ್ಕಾರದಿಂದ ಘೋಷಣೆ
  • ಶಿಂಧೆ ಬಣದಿಂದ ಹೊಸ ಪಕ್ಷ ಕಟ್ಟಲು ತಯಾರಿ
ಶಿವಸೇನೆಯ 15 ಬಂಡಾಯ ಶಾಸಕರಿಗೆ ಕೇಂದ್ರದಿಂದ Y+ ಭದ್ರತೆ!  title=
Maharashtra Politics

ಮಹಾರಾಷ್ಟ್ರದಲ್ಲಿ ರಾಜಕೀಯ ಗೊಂದಲ ಮುಂದುವರಿದಿದೆ. ಶಿವಸೇನೆಯ ಬಂಡಾಯ ಶಾಸಕರ ಮನವೊಲಿಸಲು ಪಕ್ಷದ ಹಿರಿಯರ ನಾಯಕರು ಸೇರಿದಂತೆ ಅನೇಕರು ಸರ್ವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇನ್ನೊಂದೆಡೆ  ಕೇಂದ್ರ ಸರ್ಕಾರ ಶಿವಸೇನೆಯ 15 ಬಂಡಾಯ ಶಾಸಕರಿಗೆ Y+ ಭದ್ರತೆಯನ್ನು ಒದಗಿಸಿದೆ. 

ಶಿವಸೇನೆಯ ಬಂಡಾಯ ಶಾಸಕರಿಗೆ ಭದ್ರತೆ ನೀಡುವುದಾಗಿ ಮೋದಿ ಸರ್ಕಾರ ಘೋಷಿಸಿದೆ. ಶಾಸಕರ ಭದ್ರತೆಗೆ ಸಿಆರ್‌ಪಿಎಫ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಹಾರಾಷ್ಟ್ರದ ರಾಜಕೀಯ ಗೊಂದಲದ ನಡುವೆ ಉದ್ಧವ್ ಠಾಕ್ರೆ ಪಕ್ಷದ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದರೆ, ಏಕನಾಥ್‌ ಶಿಂಧೆ ಬಣ ಮಾತ್ರ ಹೊಸ ಪಕ್ಷ ಕಟ್ಟಲು ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. 

ಇದನ್ನು ಓದಿ: Bangalore: ಚಿಕನ್ ಪೀಸ್‌ಗಾಗಿ ಗಲಾಟೆ.. ಕಸ್ಟಮರ್ಸ್‌ ಮೇಲೆ ಹೋಟೆಲ್ ಸಿಬ್ಬಂದಿ ಹಲ್ಲೆ

ಇನ್ನೊಂದೆಡೆ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ತಾರಕಕ್ಕೇರುತ್ತಿದ್ದು, ಇದರ ಪರಿಣಾಮವಾಗಿ ಯಾವುದೇ ಅಹಿತರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಮುಂಬೈ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಜುಲೈ 10ರವರೆಗೆ 144 ಸೆಕ್ಷನ್‌ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. 

ಇತ್ತೀಚೆಗೆಯಷ್ಟೇ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಪತ್ನಿ ರಶ್ಮಿ ಠಾಕ್ರೆ, ಬಂಡಾಯ ಶಾಸಕರ ಪತ್ನಿಯರನ್ನು ಸಂಪರ್ಕಿಸಿ ಅವರ ಮೂಲಕ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ. 

ಕಳೆದ ಶುಕ್ರವಾರ ಶಿವಸೇನೆ ವಿರುದ್ಧ ಸಿಡಿದೆದ್ದ ಏಕನಾಥ್ ಶಿಂಧೆ ಮತ್ತು ಕೆಲ ಶಾಸಕರು ಅಸ್ಸಾಂ ಗುವಾಹಟಿಗೆ ತೆರಳಿದ್ದರು. ಈ ಮೂಲಕ ಉದ್ಧವ್‌ ಠಾಕ್ರೆ ಸರ್ಕಾರ ಉರುಳಿಸುವ ಪ್ರಯತ್ನ ಮಾಡಿದ್ದಾರೆ. ಏಕನಾಥ ಶಿಂಧೆ ಜೊತೆಗೆ 40 ಮಂದಿ ಶಾಸಕರಿದ್ದು, ಆ ಪೈಕಿ 34 ಮಂದಿ ಶಿವಸೇನೆ ಮತ್ತು 6 ಮಂದಿ ಪಕ್ಷೇತರರು ಎಂದು ಹೇಳಲಾಗುತ್ತಿದೆ.

ಇದನ್ನು ಓದಿ: ʼಮಹಾ ರಾಜಕೀಯ ತಿರುವುʼ: ಮುಂಬೈನಲ್ಲಿ ಜುಲೈ 10ರವರೆಗೆ 144 ಸೆಕ್ಷನ್‌ ಜಾರಿ! 

ಜೊತೆಗೆ ಉದ್ಧವ್‌ ಠಾಕ್ರೆಗೆ ಶಾಕ್‌ ನೀಡಲು ಏಕನಾಥ್‌ ಶಿಂಧೆ ಬಣ ಸಿದ್ಧತೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಶಿಂಧೆ ಬೆಂಬಲಿಗರು ತಮ್ಮ ಪ್ರತ್ಯೇಕ ಬಣವನ್ನು ನಿರ್ಮಿಸಲು ಸಿದ್ಧತೆ ನಡೆಸಿದ್ದಾರಂತೆ. ಜೊತೆಗೆ ಆ ಪಕ್ಷಕ್ಕೆ 'ಶಿವಸೇನೆ-ಬಾಳಾಸಾಹೇಬ್ ಠಾಕ್ರೆ ಬಣ' ಎಂಬ ಹೆಸರನ್ನು ಇಡಲು ನಿರ್ಧರಿಸಿದ್ದಾರಂತೆ. ಶಿಂಧೆ ಬೆಂಬಲಿಗರು ಈ ಹೆಸರಿನ ಬಗ್ಗೆ ಘೋಷಣೆಯನ್ನು ಶೀಘ್ರದಲ್ಲೇ ಮಾಡುವ ಸಾಧ್ಯತೆ ಇದೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News