ಪ್ರಧಾನಿ ಮೋದಿ ನುಡಿದಂತೆ ನಡೆದಿದ್ದಾರೆ: ಕೇಂದ್ರ ಸಚಿವ ಸದಾನಂದ ಗೌಡ

ಹಿಂದೆ ಯಾರು ಏನೂ ಮಾಡಿದ್ದರೂ ಪಾಕಿಸ್ತಾನವನ್ನು ಹೆಡೆಮುರಿ ಕಟ್ಟುವ ಕೆಲಸ ಆಗಿರಲಿಲ್ಲ- ಸಚಿವ ಸದಾನಂದ ಗೌಡ  

Last Updated : Feb 26, 2019, 03:55 PM IST
ಪ್ರಧಾನಿ ಮೋದಿ ನುಡಿದಂತೆ ನಡೆದಿದ್ದಾರೆ: ಕೇಂದ್ರ ಸಚಿವ ಸದಾನಂದ ಗೌಡ title=
File Image

ಬೆಂಗಳೂರು: ಯೋಧರ ಒಂದೊಂದು ಹನಿ ರಕ್ತಕ್ಕೂ ನ್ಯಾಯ ಒದಗಿಸುತ್ತೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದರು. ಪ್ರಧಾನಿ ಮೋದಿ ನುಡಿದಂತೆ ನಡೆದಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ.

ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಏನು ಮಾಡಬೇಕಿತ್ತೋ ಅದನ್ನು ನಮ್ಮ ಸೇನೆ ಮಾಡಿದೆ. ಯೋಧರ ಸಾವು ವ್ಯರ್ಥವಾಗುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು, ಈ ನಿಟ್ಟಿನಲ್ಲಿ ಸೇನೆ ದಿಟ್ಟ ಹೆಜ್ಜೆ ಇಟ್ಟಿದೆ. ಪುಲ್ವಾಮ ದಾಳಿಗೆ ಪ್ರತೀಕಾರ ತೆಗೆದುಕೊಳ್ಳಲಾಗಿದ್ದು, ಉಗ್ರರ ಅಡಗುದಾಣಗಳನ್ನು ಧ್ವಂಸಗೊಳಿಸಲಾಗಿದೆ. ಭಾರತ ಎಲ್ಲದಕ್ಕೂ ತಯಾರಾಗಿದೆ ಎಂದು ಹೇಳಿದರು.

ಆದರೆ ಭಯೋತ್ಪಾದನೆಯನ್ನು ಮಾತ್ರ ಹತ್ತಿಕ್ಕುವ ಕೆಲಸ ಮಾಡ್ತಿದ್ದೇವೆ ಎಂಬ‌ ಸಂದೇಶವನ್ನು ಮೋದಿ ಯವರು  ಕೊಟ್ಟಿದ್ದಾರೆ . ಇದು ಪಾಕಿಸ್ತಾನಕ್ಕೆ ಎಚ್ಚರಿಕೆ ಗಂಟೆ.  ಪಾಕಿಸ್ತಾನಕ್ಕೆ ಬುದ್ದಿ ಬರದಿದ್ದರೆ ಯುದ್ಧದ ಹಂತಕ್ಕೆ ಹೋಗಬೇಕಾಗುತ್ತದೆ ಎಂದು ಅವರು ಹೇಳಿದರು.

ಹಿಂದೆ ಯಾರು ಏನೂ ಮಾಡಿದ್ದರೂ ಪಾಕಿಸ್ತಾನವನ್ನು ಹೆಡೆಮುರಿ ಕಟ್ಟುವ ಕೆಲಸ ಆಗಿರಲಿಲ್ಲ ಎಂದು ಇದೇ ಸಂದರ್ಭದಲ್ಲಿ ಸದಾನಂದ ಗೌಡರು ತಿಳಿಸಿದರು.

Trending News