ತ್ರಿಶೂರ್: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯನ್ನು ಹಿಂಬಾಲಿಸುತ್ತಿದ್ದ ವ್ಯಕ್ತಿಯೊಬ್ಬ ಮನೆಯ ಒಳಗೇ ಆಕೆಗೆ ಬೆಂಕಿ ಹಚ್ಚಿ ಸಜೀವ ದಹನ ಮಾಡಿದ ಅಮಾನುಷ ಘಟನೆ ಕೇರಳದ ತ್ರಿಶೂರ್ ನಲ್ಲಿ ಗುರುವಾರ ನಡೆದಿದೆ.


COMMERCIAL BREAK
SCROLL TO CONTINUE READING

ವಿದ್ಯಾರ್ಥಿನಿ ನೀತು(22) ಚೀರಾಟ ಹಾಗೂ ನೋವಿನಿಂದ ಕಿರುಚುತ್ತಿರುವ ಶಬ್ದ ಕೇಳಿ ಮನೆಯ ಬಳಿ ಓಡಿ ಬಂದ ಸ್ಥಳಿಯರಿಗೆ ಆಕೆ ಸ್ನಾನದ ಕೋಣೆಯಲ್ಲಿ ಬೆಂಕಿಯಲ್ಲಿ ಉರಿಯುತ್ತಿರುವುದು ಕಂಡುಬಂದಿದೆ. ಘಟನೆ ನಡೆದ ಸಂದರ್ಭದಲ್ಲಿ ವಿದ್ಯಾರ್ಥಿನಿ ಮತ್ತು ಆಕೆಯ ಅಜ್ಜಿ ಮಾತ್ರ ಮನೆಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.


ಆರೋಪಿ ನಿತೀಶ್(32) ಮನೆಯ ಹಿಂಬಾಗಿಲಿನಿಂದ ಒಳಗೆ ನುಗ್ಗಿ ಈ ಕೃತ್ಯ ಎಸಗಿರಬಹುದು ಎಂದು ಸ್ಥಳೀಯ ಶಾಸಕ ಕೆ.ರಾಜನ್ ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.