ನವದೆಹಲಿ: ಶಿವಸೇನೆ ಎನ್ಸಿಪಿ ಮತ್ತು ಕಾಂಗ್ರೆಸ್ ಜೊತೆಗೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಇತ್ತ ಸಜ್ಜಾಗಿರುವಂತೆ, ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ವಿರುದ್ಧ ರಾಜ್ಯದ ಮತದಾರರಿಗೆ ಮೋಸ ಮಾಡಿದ್ದಕ್ಕಾಗಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ.
ಉದ್ಧವ್ ಠಾಕ್ರೆ ವಿಧಾನಸಭಾ ಚುನಾವಣೆಯ ನಂತರ ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದು ಜನಾದೇಶಕ್ಕೆ ದ್ರೋಹ ಬಗೆದಿದ್ದಾರೆ ಎಂದು ವಕೀಲರು ದೂರು ದಾಖಲಿಸಿದ್ದಾರೆ. ವಕೀಲ ರತ್ನಕರ್ ಚೌರೆ ಅವರು ತಮ್ಮ ದೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಮತ್ತು ಶಿವಸೇನೆ ನಾಯಕ ಪ್ರದೀಪ್ ಜೈಸ್ವಾಲ್ ಅವರನ್ನು ಹೆಸರಿಸಿದ್ದಾರೆ.
'2019 ವಿಧಾನಸಭಾ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ಸೇರಿದಂತೆ ಶಿವಸೇನೆ, ಬಿಜೆಪಿ ಮತ್ತು ಇತರರು ಔರಂಗಾಬಾದ್ನಲ್ಲಿ 'ಹಿಂದೂ ಧರ್ಮದ ಹೆಸರಿನಲ್ಲಿ ಮತ ಚಲಾಯಿಸಿದ್ದಾರೆ. ಆದರೆ ಚುನಾವಣೆಯ ನಂತರ ಅವರು ಮೈತ್ರಿಯನ್ನು ಮುರಿದರು ಮತ್ತು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ವಿಧಿಸಲಾಯಿತು. ಇದು ಜನರ ಆದೇಶಕ್ಕೆ ದ್ರೋಹವಾಗಿದೆ. ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಜನರಿಗೆ ದ್ರೋಹ ಮಾಡಿದ್ದಾರೆ "ಎಂದು ಚೌರೆ ಹೇಳಿದರು.
ಉದ್ಧವ್ ಠಾಕ್ರೆ, ಚಂದ್ರಕಾಂತ್ ಪಾಟೀಲ್ ಮತ್ತು ಪ್ರದೀಪ್ ಜೈಸ್ವಾಲ್ ವಿರುದ್ಧ ಅವರು ನಮಗೆ ದ್ರೋಹ ಬಗೆದಿದ್ದಾರೆ ಎಂದು ನಾನು ದೂರು ದಾಖಲಿಸಿದ್ದೇನೆ ಎಂದು ಅವರು ಹೇಳಿದರು.