ನಾಳೆ ಮೈತ್ರಿ ಸರ್ಕಾರದ ರೂಪುರೇಷೆ ಬಗ್ಗೆ ಶಿವಸೇನೆ ಜೊತೆ ಮಾತುಕತೆ - ಪೃಥ್ವಿರಾಜ್ ಚವಾಣ್

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಉಭಯ ಪಕ್ಷಗಳು ತಮ್ಮ ಚರ್ಚೆಯನ್ನು ಪೂರ್ಣಗೊಳಿಸಿವೆ ಮತ್ತು ಈಗ ಮೈತ್ರಿಕೂಟದ ರೂಪುರೇಷೆಗಳನ್ನು ಅಂತಿಮಗೊಳಿಸಲು ಮುಂಬೈನಲ್ಲಿ ಶಿವಸೇನೆಯೊಂದಿಗೆ ಮಾತುಕತೆ ನಡೆಸಲಿದೆ ಎಂದು ಕಾಂಗ್ರೆಸ್-ಎನ್‌ಸಿಪಿ ಒಕ್ಕೂಟ ಗುರುವಾರ ತಿಳಿಸಿದೆ.

Last Updated : Nov 21, 2019, 05:50 PM IST
ನಾಳೆ ಮೈತ್ರಿ ಸರ್ಕಾರದ ರೂಪುರೇಷೆ ಬಗ್ಗೆ ಶಿವಸೇನೆ ಜೊತೆ ಮಾತುಕತೆ - ಪೃಥ್ವಿರಾಜ್ ಚವಾಣ್ title=
Photo courtesy: ANI

ನವದೆಹಲಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಉಭಯ ಪಕ್ಷಗಳು ತಮ್ಮ ಚರ್ಚೆಯನ್ನು ಪೂರ್ಣಗೊಳಿಸಿವೆ ಮತ್ತು ಈಗ ಮೈತ್ರಿಕೂಟದ ರೂಪುರೇಷೆಗಳನ್ನು ಅಂತಿಮಗೊಳಿಸಲು ಮುಂಬೈನಲ್ಲಿ ಶಿವಸೇನೆಯೊಂದಿಗೆ ಮಾತುಕತೆ ನಡೆಸಲಿದೆ ಎಂದು ಕಾಂಗ್ರೆಸ್-ಎನ್‌ಸಿಪಿ ಒಕ್ಕೂಟ ಗುರುವಾರ ತಿಳಿಸಿದೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರು ಕಾಂಗ್ರೆಸ್ ಮತ್ತು ಎನ್‌ಸಿಪಿ ನಾಯಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಎಲ್ಲಾ ವಿಷಯಗಳ ಬಗ್ಗೆ ಸಂಪೂರ್ಣ ಒಮ್ಮತವಿದೆ ಮತ್ತು ಶಿವಸೇನಾವನ್ನು ಒಳಗೊಂಡಿರುವ ಮೈತ್ರಿ ಪಾಲುದಾರರು ತಮ್ಮ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ಘೋಷಿಸಿದ ನಂತರ ಅಧಿಕಾರ ಹಂಚಿಕೆ ಮೂರು ಪಕ್ಷಗಳಲ್ಲಿನ ಸೂತ್ರವನ್ನು ಬಹಿರಂಗಪಡಿಸಲಾಗುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್ ಮತ್ತು ಎನ್‌ಸಿಪಿ ನಾಯಕರು ಶಿವಸೇನಾ ಜೊತೆ ಸರ್ಕಾರ ರಚಿಸಲು ಬುಧವಾರ ಮ್ಯಾರಥಾನ್ ಸಭೆ ನಡೆಸಿದ್ದರು. ಸ್ಥಿರ ಸರ್ಕಾರ ರಚಿಸುವ ವಿಶ್ವಾಸವನ್ನು ಮೂರು ಪಕ್ಷಗಳು ವ್ಯಕ್ತಪಡಿಸಿವೆ ಎನ್ನಲಾಗಿದೆ. 

Trending News