ನವದೆಹಲಿ: ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳು ಸದನ ಸುಗಮವಾಗಿ ನಡೆಯಲು ಅವಕಾಶ ನಿಡಬೇಕೆಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ವಿರೋಧ ಪಕ್ಷಗಳಲ್ಲಿ ಮನವಿ ಮಾಡಿಕೊಂಡರು.


COMMERCIAL BREAK
SCROLL TO CONTINUE READING

ಸುದ್ದಿಗಾರರೊಂದಿಗೆ ಮಾತನಾಡಿದ ಅನಂತಕುಮಾರ್ " ನಾವು ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಸದನ ನಡೆಯಲು ಅವಕಾಶ ಮಾಡಿಕೊಡಬೇಕೆಂದು ವಿನಂತಿಸಿಕೊಂಡಿದ್ದೇವೆ,ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ಹೊರಗಡೆ ಅವರು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ,ಆದರೆ ಸಂಸತ್ತಿನ ಒಳಗಡೆ ಮಾತನಾಡಬೇಕಾದರೆ ಅವರ ವಂಶವಾಹಿಯಲ್ಲಿಯೇ ಪ್ರಜಾಪ್ರಭುತ್ವ ಎನ್ನುವುದಿಲ್ಲ ಎಂದು ಕಿಡಿ ಕಾರಿದರು.